ಬೀದರ್: ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ಸಪ್ತಾಹ ಪ್ರಯುಕ್ತ ಕಾನೂನು ಅರಿವು-ನೆರವು ಕಾರ್ಯಕ್ರಮ ನಡೆಯಿತು.
ಪ್ರತಿಯೊಬ್ಬರೂ ಕಾನೂನು ಅರಿಯಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಎಸ್. ಚಾಗರೆಡ್ಡಿ ಹೇಳಿದರು.
ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ ಟಿ.ಪಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಶೋಕ ಮಾನೂರೆ, ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೋರಮೆ, ಎನ್ಎಸ್ಎಸ್ ನೋಡಲ್ ಅಧಿಕಾರಿ ಡಾ. ಜೈಕುಮಾರ ಸಿಂಧೆ ಮಾತನಾಡಿದರು.
ಪ್ರಭಾರ ಪ್ರಾಚಾರ್ಯೆ ಡಾ. ವಿದ್ಯಾ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಎಲಿಷಾ ಡಿ, ಪಾರ್ವತಿ ಮೇತ್ರೆ, ಸಚ್ಚಿದಾನಂದ ರುಮ್ಮಾ, ಡಾ. ಭೀಮಷಾ ಬರಗಾಲಿ ಉಪಸ್ಥಿತರಿದ್ದರು.