<p>ಮಹಿಳಾ ಶೋಷಣೆ ತಡೆ ಕಾನೂನಿನಲ್ಲಿ ಇನ್ನಷ್ಟು ಸುಧಾರಣೆ ತರುವ ಅಗತ್ಯವಿದೆ ಎಂದು ಬೀದರ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಎಸ್. ಬಿರಾದಾರ ಅಭಿಪ್ರಾಯಪಟ್ಟರು.</p>.<p>ಇಲ್ಲಿಯ ಕರ್ನಾಟಕ ಸಾಹಿತ್ಯ ಸಂಘದ ಸಾಂಸ್ಕೃತಿಕ ಸಭಾಂಗಣದಲ್ಲಿ ಅಕ್ಕ ಮಹಾದೇವಿ ಮಹಿಳಾ ಪತ್ತಿನ ಸಹಕಾರ ಸಂಘ, ಡಾ. ಎಸ್.ಎಸ್. ಸಿದ್ದಾರೆಡ್ಡಿ ಫೌಂಡೇಷನ್ ಹಾಗೂ ಕರ್ನಾಟಕ ಜಾನಪದ ಪರಿಷತ್ ವತಿಯಿಂದ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮಹಿಳಾ ಶೋಷಣೆ ಶೂನ್ಯವಾದಲ್ಲಿ ಭಾರತ ವಿಶ್ವ ಗುರುವಿನ ಸ್ಥಾನದಲ್ಲಿ ಗುರುತಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.<br />ಗುಲಬರ್ಗಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಬಿ.ಜಿ. ಮೂಲಿಮನಿ, ಗುರುನಾನಕ ಶಿಕ್ಷಣ ಸಂಸ್ಥೆಗಳ ಸಮೂಹದ ಉಪಾಧ್ಯಕ್ಷೆ ರೇಷ್ಮಾ ಕೌರ್, ಸುವರ್ಣಾ ಚಿಮಕೋಡೆ, ಡಾ. ಪಲ್ಲವಿ ಕೇಸರಿ, ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷ ಜಗನ್ನಾಥ ಹೆಬ್ಬಾಳೆ ಮಾತನಾಡಿದರು.</p>.<p>ಅಕ್ಕಮಹಾದೇವಿ ಮಹಿಳಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಸಾವಿತ್ರಿಬಾಯಿ ಹೆಬ್ಬಾಳೆ ಅಧ್ಯಕ್ಷತೆ ವಹಿಸಿದ್ದರು. ಪುಣ್ಯವತಿ ವಿಸಾಜಿ, ಪ್ರಾಧ್ಯಾಪಕಿ ವಿಜಯಲಕ್ಷ್ಮಿ ಗಡ್ಡೆ, ಚಂದ್ರಶೇಖರ ಹೆಬ್ಬಾಳೆ, ವೀರಶೆಟ್ಟಿ ಮಣಗೆ, ವೈಜಿನಾಥ ಕಮಠಾಣೆ, ರಾಮಕೃಷ್ಣ ಸಾಳೆ, ರಾಜಕುಮಾರ ಹೆಬ್ಬಾಳೆ, ನಿಜಲಿಂಗಪ್ಪ ತಗಾರೆ ಇದ್ದರು.</p>.<p>ಮಲ್ಲಮ್ಮ ಸಂತಾಜಿ ಸ್ವಾಗತಿಸಿದರು. ಸುನಿತಾ ಕೂಡ್ಲಿಕರ್ ನಿರೂಪಿಸಿದರು. ಸವಿತಾ ಸಾಕುಳೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಹಿಳಾ ಶೋಷಣೆ ತಡೆ ಕಾನೂನಿನಲ್ಲಿ ಇನ್ನಷ್ಟು ಸುಧಾರಣೆ ತರುವ ಅಗತ್ಯವಿದೆ ಎಂದು ಬೀದರ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಎಸ್. ಬಿರಾದಾರ ಅಭಿಪ್ರಾಯಪಟ್ಟರು.</p>.<p>ಇಲ್ಲಿಯ ಕರ್ನಾಟಕ ಸಾಹಿತ್ಯ ಸಂಘದ ಸಾಂಸ್ಕೃತಿಕ ಸಭಾಂಗಣದಲ್ಲಿ ಅಕ್ಕ ಮಹಾದೇವಿ ಮಹಿಳಾ ಪತ್ತಿನ ಸಹಕಾರ ಸಂಘ, ಡಾ. ಎಸ್.ಎಸ್. ಸಿದ್ದಾರೆಡ್ಡಿ ಫೌಂಡೇಷನ್ ಹಾಗೂ ಕರ್ನಾಟಕ ಜಾನಪದ ಪರಿಷತ್ ವತಿಯಿಂದ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮಹಿಳಾ ಶೋಷಣೆ ಶೂನ್ಯವಾದಲ್ಲಿ ಭಾರತ ವಿಶ್ವ ಗುರುವಿನ ಸ್ಥಾನದಲ್ಲಿ ಗುರುತಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.<br />ಗುಲಬರ್ಗಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಬಿ.ಜಿ. ಮೂಲಿಮನಿ, ಗುರುನಾನಕ ಶಿಕ್ಷಣ ಸಂಸ್ಥೆಗಳ ಸಮೂಹದ ಉಪಾಧ್ಯಕ್ಷೆ ರೇಷ್ಮಾ ಕೌರ್, ಸುವರ್ಣಾ ಚಿಮಕೋಡೆ, ಡಾ. ಪಲ್ಲವಿ ಕೇಸರಿ, ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷ ಜಗನ್ನಾಥ ಹೆಬ್ಬಾಳೆ ಮಾತನಾಡಿದರು.</p>.<p>ಅಕ್ಕಮಹಾದೇವಿ ಮಹಿಳಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಸಾವಿತ್ರಿಬಾಯಿ ಹೆಬ್ಬಾಳೆ ಅಧ್ಯಕ್ಷತೆ ವಹಿಸಿದ್ದರು. ಪುಣ್ಯವತಿ ವಿಸಾಜಿ, ಪ್ರಾಧ್ಯಾಪಕಿ ವಿಜಯಲಕ್ಷ್ಮಿ ಗಡ್ಡೆ, ಚಂದ್ರಶೇಖರ ಹೆಬ್ಬಾಳೆ, ವೀರಶೆಟ್ಟಿ ಮಣಗೆ, ವೈಜಿನಾಥ ಕಮಠಾಣೆ, ರಾಮಕೃಷ್ಣ ಸಾಳೆ, ರಾಜಕುಮಾರ ಹೆಬ್ಬಾಳೆ, ನಿಜಲಿಂಗಪ್ಪ ತಗಾರೆ ಇದ್ದರು.</p>.<p>ಮಲ್ಲಮ್ಮ ಸಂತಾಜಿ ಸ್ವಾಗತಿಸಿದರು. ಸುನಿತಾ ಕೂಡ್ಲಿಕರ್ ನಿರೂಪಿಸಿದರು. ಸವಿತಾ ಸಾಕುಳೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>