ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: 79ನೇ ಜನ್ಮದಿನದ ಪ್ರಯುಕ್ತ ಮುಖ್ಯಮಂತ್ರಿಗೆ ಬೆಳ್ಳಿ ಗದೆ ನೀಡಿದ ಮುಖಂಡರು

ಪಾಪನಾಶ ದೇಗುಲದಲ್ಲಿ ವಿಶೇಷ ಪೂಜೆ, ಬಡ ಮಹಿಳೆಯರಿಗೆ ಸೀರೆ ವಿತರಣೆ
Last Updated 27 ಫೆಬ್ರುವರಿ 2021, 17:13 IST
ಅಕ್ಷರ ಗಾತ್ರ

ಬೀದರ್: 79ನೇ ಜನ್ಮದಿನದ ಪ್ರಯುಕ್ತ ಬೆಂಗಳೂರಿನಲ್ಲಿ ಶನಿವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಸನ್ಮಾನಿಸಿದ ಜಿಲ್ಲೆಯ ಬಿಜೆಪಿ ಮುಖಂಡರು ಬೆಳ್ಳಿ ಗದೆಯನ್ನು ಸ್ಮರಣಿಕೆಯಾಗಿ ನೀಡಿದರು.

ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ನಿರ್ದೇಶಕ ಸೋಮನಾಥ ಪಾಟೀಲ, ಜೆಸ್ಕಾಂ ನಿರ್ದೇಶಕ ಬಾಬುರಾವ್ ಕಾರಬಾರಿ, ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸದಸ್ಯ ಬಸವರಾಜ ಆರ್ಯ ಇದ್ದರು.

ವಿಶೇಷ ಪೂಜೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ನಗರ ಹಾಗೂ ಗ್ರಾಮೀಣ ಘಟಕದ ವತಿಯಿಂದ ನಗರದ ಪಾಪನಾಶ ದೇಗುಲದಲ್ಲಿ ವಿಶೇಷ ಪೂಜೆ, ಅಭಿಷೇಕ ನಡೆಯಿತು.
ಬಡ ಮಹಿಳೆಯರಿಗೆ ಸೀರೆ ಹಾಗೂ ಶಾಲು ವಿತರಿಸಲಾಯಿತು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್, ರಾಜ್ಯ ಮಹಿಳಾ ಸಹಕಾರ ಮಹಾ ಮಂಡಳ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ, ಬಿಜೆಪಿ ನಗರ ಘಟಕದ ಅಧ್ಯಕ್ಷ ಹಣಮಂತ ಬುಳ್ಳಾ, ಗ್ರಾಮೀಣ ಘಟಕದ ಅಧ್ಯಕ್ಷ ರಾಜೇಂದ್ರ ಪೂಜಾರಿ, ಮುಖಂಡರಾದ ಕುಶಾಲ್ ಪಾಟೀಲ ಗಾದಗಿ, ವಿಜಯಕುಮಾರ ಆನಂದೆ, ಸುನೀಲ್ ಗೌಳಿ, ಅನಿಲ್ ರಾಜಗೀರಾ ಮೊದಲಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT