ಕೃಷಿ ಉಪ ನಿರ್ದೇಶಕ ಸೋಮಶೇಖರ ಬಿರಾದಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಹ ಸಂಶೋಧನಾ ನಿರ್ದೇಶಕ ಡಾ. ಎಂ.ಎಂ. ದಾನೋಜಿ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ., ವಿಜ್ಞಾನಿಗಳಾದ ಡಾ. ಆರ್.ಎಲ್. ಜಾಧವ್, ಡಾ. ಶೋಭಾರಾಣಿ, ಡಾ. ಮಲ್ಲಿಕಾರ್ಜುನ ನಿಂಗದಳ್ಳಿ, ಡಾ. ಸಿದ್ರಾಮಪ್ಪ, ಡಾ. ಜ್ಞಾನದೇವ ಬಿ., ಬಸವರಾಜ ಬಿರಾದಾರ ಇದ್ದರು. ಡಾ. ನಾರಾಯಣ ಹೆಬ್ಬಾಳ ಸ್ವಾಗತಿಸಿದರು. ಕೈಲಾಸ ನಿರೂಪಿಸಿದರು. ಭಾಗ್ಯಾ ಎಂ. ವಂದಿಸಿದರು.