ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಕವಿತಾ ಹುಷಾರೆ ಮಾತನಾಡಿ, ‘ದೇಶಕ್ಕೆ ಸ್ವಾತಂತ್ರ್ಯ ಲಭಿಸಿ ದಶಕಗಳಾದರೂ ಅನೇಕ ಸಮಸ್ಯೆಗಳು ತಾಂಡವವಾಡುತ್ತಿವೆ. ಅತ್ಯಾಚಾರ, ಕೊಲೆ, ಸುಲಿಗೆಯಂತಹ ಸಮಸ್ಯೆಗಳಿಗೆ ಕೊನೆ ಇಲ್ಲವೇನೋ ಎಂದೆನಿಸುವ ಮಟ್ಟಿಗೆ ಇಂದು ನಮ್ಮ ಸಾಮಾಜಿಕ ವ್ಯವಸ್ಥೆ ಹದಗೆಟ್ಟಿದೆ. ಇದನ್ನು ಗಮನಿಸಿದರೆ ನಾವಿಂದು ಮನುಷ್ಯತ್ವವನ್ನು ಮರೆಯುತ್ತಿದ್ದೇವೆ ಎಂದೆನಿಸುತ್ತದೆ. ಮಾನವ ಹಕ್ಕುಗಳ ಉಲ್ಲಂಘನೆಯು ನಿತ್ಯ ನಿರಂತರ ನಡೆಯುತ್ತಿದೆ. ಇದು ಸರಿಯಲ್ಲ’ ಎಂದು ತಿಳಿಸಿದರು.