<p><strong>ಬೀದರ್:</strong> ಬೀದರ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಷ್ ರೆಡ್ಡಿ ತಿಳಿಸಿದ್ದಾರೆ.</p><p>ತಾಲ್ಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡಂಗುರ ಸಾರಿ, ಗ್ರಾಮ ಸಭೆಗಳನ್ನು ನಡೆಸಿ ತಿಳಿಸಲಾಗುತ್ತಿದೆ. ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಎಚ್ಚರಿಕೆಯಿಂದ ಓಡಾಡಬೇಕು. ಸೂರ್ಯಾಸ್ತದ ನಂತರ ಮಕ್ಕಳನ್ನು ಮನೆಯ ಹೊರಗೆ ಬಿಡಬಾರದು. ರಾತ್ರಿ ಓಡಾಡುವಾಗ ಟಾರ್ಚ್/ಬೆಳಕು ಬಳಸಿ, ಪಶುಗಳನ್ನು ಮುಚ್ಚಿದ, ಬೆಳಕು ಇರುವ ಕೊಟ್ಟಿಗೆಯಲ್ಲಿ ಇರಿಸಬೇಕು. ಚಿರತೆ ಕಂಡು ಬಂದಿರುವ ಆಯಾ ಗ್ರಾಮಗಳಲ್ಲಿ ಭಿತ್ತಿ ಪತ್ರಗಳನ್ನು ಅಂಟಿಸಲಾಗುತ್ತಿದೆ. ಚಿರತೆ ಕಾಣಿಸಿದರೆ ತಕ್ಷಣವೇ ಮಾಹಿತಿ ಹಂಚಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.</p><p>ಅರಣ್ಯ ಇಲಾಖೆಯ ಆರ್.ಎಫ್.ಒ. ವಿಜಯಕುಮಾರ ಜಾಧವ್ (9591317807), ಡಿ.ಆರ್.ಎಫ್.ಒ. ರವಿ (9900561007), ಡಿ.ಆರ್.ಎಫ್.ಒ. ಆರ್.ಎಲ್.ರಾಠೋಡ್ (8618002638), ಬಿಟ್ ಫಾರೇಸ್ಟರ್ ಪರಶುರಾಮ (9845112328), ಅರಣ್ಯ ಸಹಾಯವಾಣಿ ಸಂಖ್ಯೆ: 1926 ಗೆ ಕರೆ ಮಾಡಿ ಮಾಹಿತಿ ನೀಡಬೇಕೆಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಬೀದರ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಷ್ ರೆಡ್ಡಿ ತಿಳಿಸಿದ್ದಾರೆ.</p><p>ತಾಲ್ಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡಂಗುರ ಸಾರಿ, ಗ್ರಾಮ ಸಭೆಗಳನ್ನು ನಡೆಸಿ ತಿಳಿಸಲಾಗುತ್ತಿದೆ. ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಎಚ್ಚರಿಕೆಯಿಂದ ಓಡಾಡಬೇಕು. ಸೂರ್ಯಾಸ್ತದ ನಂತರ ಮಕ್ಕಳನ್ನು ಮನೆಯ ಹೊರಗೆ ಬಿಡಬಾರದು. ರಾತ್ರಿ ಓಡಾಡುವಾಗ ಟಾರ್ಚ್/ಬೆಳಕು ಬಳಸಿ, ಪಶುಗಳನ್ನು ಮುಚ್ಚಿದ, ಬೆಳಕು ಇರುವ ಕೊಟ್ಟಿಗೆಯಲ್ಲಿ ಇರಿಸಬೇಕು. ಚಿರತೆ ಕಂಡು ಬಂದಿರುವ ಆಯಾ ಗ್ರಾಮಗಳಲ್ಲಿ ಭಿತ್ತಿ ಪತ್ರಗಳನ್ನು ಅಂಟಿಸಲಾಗುತ್ತಿದೆ. ಚಿರತೆ ಕಾಣಿಸಿದರೆ ತಕ್ಷಣವೇ ಮಾಹಿತಿ ಹಂಚಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.</p><p>ಅರಣ್ಯ ಇಲಾಖೆಯ ಆರ್.ಎಫ್.ಒ. ವಿಜಯಕುಮಾರ ಜಾಧವ್ (9591317807), ಡಿ.ಆರ್.ಎಫ್.ಒ. ರವಿ (9900561007), ಡಿ.ಆರ್.ಎಫ್.ಒ. ಆರ್.ಎಲ್.ರಾಠೋಡ್ (8618002638), ಬಿಟ್ ಫಾರೇಸ್ಟರ್ ಪರಶುರಾಮ (9845112328), ಅರಣ್ಯ ಸಹಾಯವಾಣಿ ಸಂಖ್ಯೆ: 1926 ಗೆ ಕರೆ ಮಾಡಿ ಮಾಹಿತಿ ನೀಡಬೇಕೆಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>