ಕಾರ್ಯಕ್ರಮದ ಅನುಷ್ಠಾನಾಧಿಕಾರಿ ಡಾ.ರಾಜಶೇಖರ ಪಾಟೀಲ ಮಾತನಾಡಿ,‘ಕುಷ್ಠರೋಗ ಪತ್ತೆ ಹಚ್ಚುವ ಕಾರ್ಯಕ್ರಮದಲ್ಲಿ ಮಹಿಳೆ ಹಾಗೂ ಪುರುಷರ ತಂಡಗಳು ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸಲಿವೆ. ಪ್ರತಿದಿನ ಗ್ರಾಮೀಣ ಭಾಗದಲ್ಲಿ ಇಪ್ಪತ್ತು ಮನೆಗಳು ಹಾಗೂ ನಗರ ಪ್ರದೇಶಗಳಲ್ಲಿ ಇಪ್ಪತ್ತೈದು ಮನೆಗಳಿಗೆ ಭೇಟಿ ನೀಡಲಿವೆ. ಪ್ರತಿ ಐದು ತಂಡಕ್ಕೆ ಒಬ್ಬರು ಮೇಲ್ವಿಚಾರಕರನ್ನು ನೇಮಿಸಲಾಗಿದೆ’ ಎಂದು ತಿಳಿಸಿದರು.