<p><strong>ಬೀದರ್</strong>: ಹಿರಿಯ ನಾಗರಿಕರು ತಮ್ಮ ಅನುಭವ ಬಳಸಿಕೊಂಡು ಸಮಾಜಕ್ಕೆ ಮಾರ್ಗದರ್ಶನ ಮಾಡಬೇಕು ಎಂದು ನಿವೃತ್ತ ಪ್ರಾಚಾರ್ಯ ಪ್ರೊ.ದೇವೇಂದ್ರ ಕಮಲ್ ಸಲಹೆ ಮಾಡಿದರು.</p>.<p>ನಗರದ ಬಿ.ವಿ.ಬಿ. ಕಾಲೇಜಿನಲ್ಲಿ ನಡೆದ ಜೈ ಹಿಂದ್ ಹಿರಿಯ ನಾಗರಿಕರ ಸಂಘದ ಕೊರೊನಾ ನಂತರದ ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಹಿರಿಯ ನಾಗರಿಕರು ಜೀವನೋತ್ಸಾಹ ಕಾಯ್ದುಕೊಳ್ಳಬೇಕು. ಆರೋಗ್ಯವಂತರಾಗಿ ಬಾಳಬೇಕು ಎಂದು ಹೇಳಿದರು.</p>.<p>ಯುವಕರು ಸೇರಿದಂತೆ ಸಮಾಜದ ಎಲ್ಲರೂ ಹಿರಿಯ ನಾಗರಿಕರ ಚಲನವಲನ ಹಾಗೂ ನಡತೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ ಎಂದು ತಿಳಿಸಿದರು.</p>.<p>ಸಂಘದ ಅಧ್ಯಕ್ಷ ಆರ್.ಆರ್. ಮುನಿಗ್ಯಾಲ್, ಕಾರ್ಯದರ್ಶಿ ವೀರಭದ್ರಪ್ಪ ಉಪ್ಪಿನ್, ಕೋಶಾಧ್ಯಕ್ಷ ಗಂಗಪ್ಪ ಸಾವಳೆ, ಜಂಟಿ ಕಾರ್ಯದರ್ಶಿ ಎಸ್.ಆರ್. ಬಂಟಿ, ಶಿವಪುತ್ರ ಮೆಟಗೆ, ಅರವಿಂದ ಕುಲಕರ್ಣಿ, ಡಾ. ವಿ.ವಿ. ಗುತ್ತಿ, ನಾರಾಯಣರಾವ್ ಕಾಂಬಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಹಿರಿಯ ನಾಗರಿಕರು ತಮ್ಮ ಅನುಭವ ಬಳಸಿಕೊಂಡು ಸಮಾಜಕ್ಕೆ ಮಾರ್ಗದರ್ಶನ ಮಾಡಬೇಕು ಎಂದು ನಿವೃತ್ತ ಪ್ರಾಚಾರ್ಯ ಪ್ರೊ.ದೇವೇಂದ್ರ ಕಮಲ್ ಸಲಹೆ ಮಾಡಿದರು.</p>.<p>ನಗರದ ಬಿ.ವಿ.ಬಿ. ಕಾಲೇಜಿನಲ್ಲಿ ನಡೆದ ಜೈ ಹಿಂದ್ ಹಿರಿಯ ನಾಗರಿಕರ ಸಂಘದ ಕೊರೊನಾ ನಂತರದ ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಹಿರಿಯ ನಾಗರಿಕರು ಜೀವನೋತ್ಸಾಹ ಕಾಯ್ದುಕೊಳ್ಳಬೇಕು. ಆರೋಗ್ಯವಂತರಾಗಿ ಬಾಳಬೇಕು ಎಂದು ಹೇಳಿದರು.</p>.<p>ಯುವಕರು ಸೇರಿದಂತೆ ಸಮಾಜದ ಎಲ್ಲರೂ ಹಿರಿಯ ನಾಗರಿಕರ ಚಲನವಲನ ಹಾಗೂ ನಡತೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ ಎಂದು ತಿಳಿಸಿದರು.</p>.<p>ಸಂಘದ ಅಧ್ಯಕ್ಷ ಆರ್.ಆರ್. ಮುನಿಗ್ಯಾಲ್, ಕಾರ್ಯದರ್ಶಿ ವೀರಭದ್ರಪ್ಪ ಉಪ್ಪಿನ್, ಕೋಶಾಧ್ಯಕ್ಷ ಗಂಗಪ್ಪ ಸಾವಳೆ, ಜಂಟಿ ಕಾರ್ಯದರ್ಶಿ ಎಸ್.ಆರ್. ಬಂಟಿ, ಶಿವಪುತ್ರ ಮೆಟಗೆ, ಅರವಿಂದ ಕುಲಕರ್ಣಿ, ಡಾ. ವಿ.ವಿ. ಗುತ್ತಿ, ನಾರಾಯಣರಾವ್ ಕಾಂಬಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>