<p>ಬಸವಕಲ್ಯಾಣ: `ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರೀ ಟೀಕಿಸುವ ಕೀಳು ಮಟ್ಟದ ರಾಜಕೀಯ ಬಿಡಬೇಕು' ಎಂದುಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.</p>.<p>ಇಲ್ಲಿನ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಅವರ ಪ್ರಚಾರ ಸಭೆಯ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>`ಸಿದ್ದರಾಮಯ್ಯನವರು ಮೊದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಜತೆಗಿನ ಭಿನ್ನಾಭಿಪರಾಯ ಸರಿಪಡಿಸಿಕೊಳ್ಳಲಿ. ತನ್ನ ತಟ್ಟೆಯಲ್ಲಿ ಹೆಗ್ಗಣ ಬಿದ್ದಾಗ ಅನ್ಯರ ತಟ್ಟೆಯಲ್ಲಿ ಏನು ಬಿದ್ದಿದೆ ಎಂದು ಹುಡುಕುವುದು ಸರಿಯಲ್ಲ' ಎಂದರು.</p>.<p>`ಬಿಜೆಪಿಯ ಪ್ರಭಾವ ಹೆಚ್ಚುತ್ತಿದೆ. ಮೋದಿ ಅವರು ಉತ್ತಮ ನಾಯಕ ಆಗಿದ್ದಾರೆ. ಆದರೆ, ಕಾಂಗ್ರೆಸ್ ಗೆ ಉತ್ತಮ ನಾಯಕರಿಲ್ಲದೆ ಕಮರುತ್ತಿದೆ. ಹೀಗಾಗಿ ಕಾಂಗ್ರೆಸ್ ಜೆಡಿಎಸ್ ಪಕ್ಷಗಳ ಅನೇಕ ಮುಖಂಡರು ಬಿಜೆಪಿ ಸೇರ್ಪಡೆ ಆಗುತ್ತಿದ್ದಾರೆ. ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ<br />ಗೆಲ್ಲುವುದು ನಿಶ್ಚಿತ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಸವಕಲ್ಯಾಣ: `ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರೀ ಟೀಕಿಸುವ ಕೀಳು ಮಟ್ಟದ ರಾಜಕೀಯ ಬಿಡಬೇಕು' ಎಂದುಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.</p>.<p>ಇಲ್ಲಿನ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಅವರ ಪ್ರಚಾರ ಸಭೆಯ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>`ಸಿದ್ದರಾಮಯ್ಯನವರು ಮೊದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಜತೆಗಿನ ಭಿನ್ನಾಭಿಪರಾಯ ಸರಿಪಡಿಸಿಕೊಳ್ಳಲಿ. ತನ್ನ ತಟ್ಟೆಯಲ್ಲಿ ಹೆಗ್ಗಣ ಬಿದ್ದಾಗ ಅನ್ಯರ ತಟ್ಟೆಯಲ್ಲಿ ಏನು ಬಿದ್ದಿದೆ ಎಂದು ಹುಡುಕುವುದು ಸರಿಯಲ್ಲ' ಎಂದರು.</p>.<p>`ಬಿಜೆಪಿಯ ಪ್ರಭಾವ ಹೆಚ್ಚುತ್ತಿದೆ. ಮೋದಿ ಅವರು ಉತ್ತಮ ನಾಯಕ ಆಗಿದ್ದಾರೆ. ಆದರೆ, ಕಾಂಗ್ರೆಸ್ ಗೆ ಉತ್ತಮ ನಾಯಕರಿಲ್ಲದೆ ಕಮರುತ್ತಿದೆ. ಹೀಗಾಗಿ ಕಾಂಗ್ರೆಸ್ ಜೆಡಿಎಸ್ ಪಕ್ಷಗಳ ಅನೇಕ ಮುಖಂಡರು ಬಿಜೆಪಿ ಸೇರ್ಪಡೆ ಆಗುತ್ತಿದ್ದಾರೆ. ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ<br />ಗೆಲ್ಲುವುದು ನಿಶ್ಚಿತ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>