ಜೀವನದಲ್ಲಿ ಏನನ್ನಾದರೂ ಸಾಧಿಸಿ ತೋರಬೇಕು. ರಾಷ್ಟ್ರ ಸೇವೆಗೆ ಸದಾ ಕಂಕಣ ಬದ್ಧರಾಗಿರಬೇಕು ಎಂದು ತಿಳಿಸಿದರು.
ಉದ್ಘಾಟನೆ ನೆರವೇರಿಸಿದ ಬ್ರಹ್ಮಕುಮಾರಿ ಕೇಂದ್ರ ಪಾವನಧಾಮದ ಗುರುದೇವಿ ಬಹೆನ್ಜಿ ಮಾತನಾಡಿ, ಯುವಕರು ದೇಶದ ಸಂಪತ್ತು. ಸಚ್ಚಾರಿತ್ರ್ಯ ಮೈಗೂಡಿಸಿಕೊಳ್ಳಬೇಕು. ಮಹಾ ಪುರುಷರ ಜೀವನ ಚರಿತ್ರೆ ಅರಿಯಬೇಕು. ಅವರ ಆದರ್ಶಗಳನ್ನು ಪಾಲಿಸಬೇಕು ಎಂದು ತಿಳಿಸಿದರು.