<p><strong>ಚಿಟಗುಪ್ಪ:</strong> ‘ಪುರಸಭೆ ಪದಾಧಿಕಾರಿಗಳು ಪಕ್ಷಬೇಧ ಮರೆತು ಪಟ್ಟಣದ ಅಭಿವೃದ್ಧಿಗೆ ಶ್ರಮಿಸಬೇಕು. ಪಾರದರ್ಶಕ ಆಡಳಿತ ನೀಡುವ ಉದ್ದೇಶ ಹೊಂದಿರಬೇಕು’ ಎಂದು ಶಾಸಕ ರಾಜಶೇಖರ ಪಾಟೀಲ ಸಲಹೆ ನೀಡಿದರು.</p>.<p>ಇಲ್ಲಿನ ಪುರಸಭೆ ಸಭಾಂಗಣದಲ್ಲಿ ಮಂಗಳವಾರ ನಡೆದ ಪುರಸಭೆಯ ಪ್ರಥಮ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಪುರಸಭೆಗೆ ಆಯ್ಕೆಯಾದ ಸಾಕಷ್ಟು ಸದಸ್ಯರು ಅನುಭವಿಗಳಾಗಿದ್ದೀರಿ. ಎಲ್ಲರೂ ಅಧ್ಯಕ್ಷ, ಉಪಾಧ್ಯಕ್ಷರ ಜತೆ ವಾರ್ಡ್ ವ್ಯಾಪ್ತಿಯ ಬಡಾವಣೆಗಳಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆ ಆಲಿಸಬೇಕು. ಬೇಡಿಕೆಗಳಿಗೆ ಸ್ಪಂದಿಸುವ ಮೂಲಕ ಸೌಕರ್ಯ ಒದಗಿಸುವ ಕೆಲಸ ಮಾಡಬೇಕು’ ಎಂದರು.</p>.<p>‘ಪುರಸಭೆ ಹಾಗೂ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪಟ್ಟಣದ ಎಲ್ಲ ಎನ್ಎ ಬಡಾವಣೆಗಳಲ್ಲಿ ಸಿಎ ನಿವೇಶನಗಳನ್ನು ಗುರುತಿಸಿ, ಅವುಗಳಿಗೆ ರಕ್ಷಣೆ ನೀಡಬೇಕು’ ಎಂದು ಮುಖ್ಯಾಧಿಕಾರಿಗಳಿಗೆ ಅವರು ಆದೇಶಿಸಿದರು.</p>.<p>₹2 ಕೋಟಿ ವೆಚ್ಚದ ಬಿಸಿಎಂ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ಪಟ್ಟಣದಲ್ಲಿ ನಾಗರಿಕ ಸೌಲಭ್ಯಕ್ಕೆ ಕಾಯ್ದಿರಿಸಿದ ಸರ್ವೆ ನಂಬರ್ 284/5 ರಲ್ಲಿ ಸ್ಥಳ ಮಂಜೂರು ಮಾಡುವ ಪ್ರಸ್ತಾವಕ್ಕೆ ಸರ್ವ ಸದಸ್ಯರು ಒಪ್ಪಿಗೆ ಸೂಚಿಸಿದರು.</p>.<p>ವಾರ್ಡ್ ಸಂಖ್ಯೆ 1 ರಲ್ಲಿ ನಡೆಯುತ್ತಿರುವ ಚರಂಡಿ ನಿರ್ಮಾಣ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುತ್ತಿಲ್ಲ ಎಂದು ಸದಸ್ಯ ನಸೀರ್ ಅಹ್ಮದ್ ಆರೋಪಿಸಿದರು. ಆನ್ಲೈನ್ ಖಾತಾ ಮಾಡಲು ಸಿಬ್ಬಂದಿ ಅನಾವಶ್ಯಕವಾಗಿ ವಿಳಂಬ ಮಾಡುತ್ತಿದ್ದಾರೆ ಎಂದು ಸದಸ್ಯೆ ಜಲಿಸಾ ಬೇಗಂ ದೂರಿದರು.</p>.<p>ಸದಸ್ಯ ಹಬೀಬ್ ಮಾತನಾಡಿ,‘ಪಟ್ಟಣದ ಬಡಾವಣೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ಸದಸ್ಯ ರಾಜದೀಪ್ ಮಾತನಾಡಿ,‘ಮಹಿಳಾ ಪೌರಕಾರ್ಮಿಕರಿಗೆ ಕಳಪೆ ಗುಣಮಟ್ಟದ ಸಮವಸ್ತ್ರ ವಿತರಿಸಲಾಗಿದೆ’ ಎಂದು ಆರೋಪಿಸಿದರು.</p>.<p>ಅದಕ್ಕೆ ಶಾಸಕ ರಾಜಶೇಖರ ಪಾಟೀಲ ಪ್ರತಿಕ್ರಿಯಿಸಿ,‘ಮಹಿಳಾ ಪೌರಕಾರ್ಮಿಕರಿಗೆ ನನ್ನ ಹಣದಲ್ಲಿ ಉತ್ತಮ ಗುಣಮಟ್ಟದ ಸಮವಸ್ತ್ರ ವಿತರಿಸಲಾಗುವುದು. ಅಧಿಕಾರಿಗಳು ತಕ್ಷಣ ಸಮವಸ್ತ್ರ ನೀಡಲು ವ್ಯವಸ್ಥೆ ಮಾಡಬೇಕು’ ಎಂದರು.</p>.<p>ಸಮರ್ಪಕವಾಗಿ ಕಸ ವಿಲೇವಾರಿ ಆಗುತ್ತಿಲ್ಲ ಎಂದು ಸದಸ್ಯರು ಆರೋಪಿಸಿದರು.</p>.<p>ಮುಖ್ಯಾಧಿಕಾರಿ ಶ್ರೀಪಾದ್ ಮಾತನಾಡಿ‘ಹಸಿ ಕಸ, ಒಣ ಕಸ ಸಂಗ್ರಹಿಸುವ ತೊಟ್ಟಿಗಳಿವೆ. ಅವುಗಳನ್ನು 23 ಸದಸ್ಯರಿಗೆ ಸಮಾನವಾಗಿ ಹಂಚಬೇಕು. ಅವರ ವಾರ್ಡ್ಗಳಲ್ಲಿ ಸೂಚಿಸಿದ ಸ್ಥಳಗಳಲ್ಲಿ ಅಳವಡಿಸಬೇಕು’ ಎಂದು ಪರಿಸರ ಎಂಜಿನಿಯರ್ ಪೂಜಾ ಅವರಿಗೆ ಸೂಚಿಸಿದರು.</p>.<p>ನಾಗರಿಕರು ನೀರು, ಮನೆ, ವಾಣಿಜ್ಯ ಮಳಿಗೆಗಳ ಕರ ಪಾವತಿಸಬೇಕು. ಪಟ್ಟಣದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಸಭೆಯಲ್ಲಿ ಎಲ್ಲರೂ ಆಗ್ರಹಿಸಿ ಕರ ವಸೂಲಿಗೆ ಹೆಚ್ಚಿನ ಆದ್ಯತೆ ನೀಡಲು ನಿರ್ಣಯ ಕೈಗೊಳ್ಳಲಾಯಿತು.</p>.<p>ಅಧ್ಯಕ್ಷೆ ಮಾಲಾಶ್ರೀ ಶಾಮರಾವ್, ಉಪಾಧ್ಯಕ್ಷ ಸೌಭಾಗ್ಯವತಿ ಅಶೋಕ ಹಾಗೂ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಟಗುಪ್ಪ:</strong> ‘ಪುರಸಭೆ ಪದಾಧಿಕಾರಿಗಳು ಪಕ್ಷಬೇಧ ಮರೆತು ಪಟ್ಟಣದ ಅಭಿವೃದ್ಧಿಗೆ ಶ್ರಮಿಸಬೇಕು. ಪಾರದರ್ಶಕ ಆಡಳಿತ ನೀಡುವ ಉದ್ದೇಶ ಹೊಂದಿರಬೇಕು’ ಎಂದು ಶಾಸಕ ರಾಜಶೇಖರ ಪಾಟೀಲ ಸಲಹೆ ನೀಡಿದರು.</p>.<p>ಇಲ್ಲಿನ ಪುರಸಭೆ ಸಭಾಂಗಣದಲ್ಲಿ ಮಂಗಳವಾರ ನಡೆದ ಪುರಸಭೆಯ ಪ್ರಥಮ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಪುರಸಭೆಗೆ ಆಯ್ಕೆಯಾದ ಸಾಕಷ್ಟು ಸದಸ್ಯರು ಅನುಭವಿಗಳಾಗಿದ್ದೀರಿ. ಎಲ್ಲರೂ ಅಧ್ಯಕ್ಷ, ಉಪಾಧ್ಯಕ್ಷರ ಜತೆ ವಾರ್ಡ್ ವ್ಯಾಪ್ತಿಯ ಬಡಾವಣೆಗಳಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆ ಆಲಿಸಬೇಕು. ಬೇಡಿಕೆಗಳಿಗೆ ಸ್ಪಂದಿಸುವ ಮೂಲಕ ಸೌಕರ್ಯ ಒದಗಿಸುವ ಕೆಲಸ ಮಾಡಬೇಕು’ ಎಂದರು.</p>.<p>‘ಪುರಸಭೆ ಹಾಗೂ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪಟ್ಟಣದ ಎಲ್ಲ ಎನ್ಎ ಬಡಾವಣೆಗಳಲ್ಲಿ ಸಿಎ ನಿವೇಶನಗಳನ್ನು ಗುರುತಿಸಿ, ಅವುಗಳಿಗೆ ರಕ್ಷಣೆ ನೀಡಬೇಕು’ ಎಂದು ಮುಖ್ಯಾಧಿಕಾರಿಗಳಿಗೆ ಅವರು ಆದೇಶಿಸಿದರು.</p>.<p>₹2 ಕೋಟಿ ವೆಚ್ಚದ ಬಿಸಿಎಂ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ಪಟ್ಟಣದಲ್ಲಿ ನಾಗರಿಕ ಸೌಲಭ್ಯಕ್ಕೆ ಕಾಯ್ದಿರಿಸಿದ ಸರ್ವೆ ನಂಬರ್ 284/5 ರಲ್ಲಿ ಸ್ಥಳ ಮಂಜೂರು ಮಾಡುವ ಪ್ರಸ್ತಾವಕ್ಕೆ ಸರ್ವ ಸದಸ್ಯರು ಒಪ್ಪಿಗೆ ಸೂಚಿಸಿದರು.</p>.<p>ವಾರ್ಡ್ ಸಂಖ್ಯೆ 1 ರಲ್ಲಿ ನಡೆಯುತ್ತಿರುವ ಚರಂಡಿ ನಿರ್ಮಾಣ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುತ್ತಿಲ್ಲ ಎಂದು ಸದಸ್ಯ ನಸೀರ್ ಅಹ್ಮದ್ ಆರೋಪಿಸಿದರು. ಆನ್ಲೈನ್ ಖಾತಾ ಮಾಡಲು ಸಿಬ್ಬಂದಿ ಅನಾವಶ್ಯಕವಾಗಿ ವಿಳಂಬ ಮಾಡುತ್ತಿದ್ದಾರೆ ಎಂದು ಸದಸ್ಯೆ ಜಲಿಸಾ ಬೇಗಂ ದೂರಿದರು.</p>.<p>ಸದಸ್ಯ ಹಬೀಬ್ ಮಾತನಾಡಿ,‘ಪಟ್ಟಣದ ಬಡಾವಣೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ಸದಸ್ಯ ರಾಜದೀಪ್ ಮಾತನಾಡಿ,‘ಮಹಿಳಾ ಪೌರಕಾರ್ಮಿಕರಿಗೆ ಕಳಪೆ ಗುಣಮಟ್ಟದ ಸಮವಸ್ತ್ರ ವಿತರಿಸಲಾಗಿದೆ’ ಎಂದು ಆರೋಪಿಸಿದರು.</p>.<p>ಅದಕ್ಕೆ ಶಾಸಕ ರಾಜಶೇಖರ ಪಾಟೀಲ ಪ್ರತಿಕ್ರಿಯಿಸಿ,‘ಮಹಿಳಾ ಪೌರಕಾರ್ಮಿಕರಿಗೆ ನನ್ನ ಹಣದಲ್ಲಿ ಉತ್ತಮ ಗುಣಮಟ್ಟದ ಸಮವಸ್ತ್ರ ವಿತರಿಸಲಾಗುವುದು. ಅಧಿಕಾರಿಗಳು ತಕ್ಷಣ ಸಮವಸ್ತ್ರ ನೀಡಲು ವ್ಯವಸ್ಥೆ ಮಾಡಬೇಕು’ ಎಂದರು.</p>.<p>ಸಮರ್ಪಕವಾಗಿ ಕಸ ವಿಲೇವಾರಿ ಆಗುತ್ತಿಲ್ಲ ಎಂದು ಸದಸ್ಯರು ಆರೋಪಿಸಿದರು.</p>.<p>ಮುಖ್ಯಾಧಿಕಾರಿ ಶ್ರೀಪಾದ್ ಮಾತನಾಡಿ‘ಹಸಿ ಕಸ, ಒಣ ಕಸ ಸಂಗ್ರಹಿಸುವ ತೊಟ್ಟಿಗಳಿವೆ. ಅವುಗಳನ್ನು 23 ಸದಸ್ಯರಿಗೆ ಸಮಾನವಾಗಿ ಹಂಚಬೇಕು. ಅವರ ವಾರ್ಡ್ಗಳಲ್ಲಿ ಸೂಚಿಸಿದ ಸ್ಥಳಗಳಲ್ಲಿ ಅಳವಡಿಸಬೇಕು’ ಎಂದು ಪರಿಸರ ಎಂಜಿನಿಯರ್ ಪೂಜಾ ಅವರಿಗೆ ಸೂಚಿಸಿದರು.</p>.<p>ನಾಗರಿಕರು ನೀರು, ಮನೆ, ವಾಣಿಜ್ಯ ಮಳಿಗೆಗಳ ಕರ ಪಾವತಿಸಬೇಕು. ಪಟ್ಟಣದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಸಭೆಯಲ್ಲಿ ಎಲ್ಲರೂ ಆಗ್ರಹಿಸಿ ಕರ ವಸೂಲಿಗೆ ಹೆಚ್ಚಿನ ಆದ್ಯತೆ ನೀಡಲು ನಿರ್ಣಯ ಕೈಗೊಳ್ಳಲಾಯಿತು.</p>.<p>ಅಧ್ಯಕ್ಷೆ ಮಾಲಾಶ್ರೀ ಶಾಮರಾವ್, ಉಪಾಧ್ಯಕ್ಷ ಸೌಭಾಗ್ಯವತಿ ಅಶೋಕ ಹಾಗೂ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>