<p><strong>ಬೀದರ್</strong>: ‘ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿನ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು’ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಪ್ರತಿಭಾ ಚಾಮಾ ಹೇಳಿದರು.</p>.<p>ನಾಟ್ಯಶ್ರೀ ನೃತ್ಯಾಲಯದ ವತಿಯಿಂದ ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಇರುವ ಹೋಟೆಲ್ ಶ್ರೀಕೃಷ್ಣ ದರ್ಶಿನಿಯ ಮಹಾಲಕ್ಷ್ಮಿ ಸಭಾಂಗಣದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸಾಧಕಿಯರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ತಂದೆ ಹಾಗೂ ಪತಿಯ ಪ್ರೋತ್ಸಾಹದಿಂದಾಗಿಯೇ ಮಹಿಳೆಯರು ಉನ್ನತ ಸ್ಥಾನಕ್ಕೆ ಏರಲು ಸಾಧ್ಯ ಎಂದು ತಿಳಿಸಿದರು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಕದಂಬ ಕನ್ನಡ ಸಂಘದ ಗೌರವಾಧ್ಯಕ್ಷ ಪ್ರೊ. ಸಿದ್ರಾಮಪ್ಪ ಮಾಸಿಮಾಡೆ ಅವರು,‘ವಿಶ್ವದ ಜನಸಂಖ್ಯೆಯಲ್ಲಿ ಅರ್ಧದಷ್ಟು ಮಹಿಳೆಯರು ಇದ್ದಾರೆ. ದೇಶದಲ್ಲಿ 65 ಕೋಟಿ ಮಹಿಳೆಯರಿದ್ದು, 15 ಕೋಟಿ ಮಹಿಳೆಯರಿಗಷ್ಟೇ ಅವಕಾಶಗಳು ದೊರಕುತ್ತಿವೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಎಲ್ಲ ಮಹಿಳೆಯರಿಗೂ ಅವಕಾಶಗಳು ಸಿಗಬೇಕು. ಎಲ್ಲ ಸಮುದಾಯಗಳು ಮಹಿಳೆಯರಿಗೆ ಸೂಕ್ತ ಸ್ಥಾನಮಾನ ಹಾಗೂ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ನಾಟ್ಯಶ್ರೀ ನೃತ್ಯಾಲಯದ ನಿರ್ದೇಶಕಿ ರಾಣಿ ಸತ್ಯಮೂರ್ತಿ ಮಾತನಾಡಿ,‘ಪಾಲಕರು ಗಂಡು ಹಾಗೂ ಹೆಣ್ಣು ಮಕ್ಕಳನ್ನು ಸಮಾನವಾಗಿ ಕಾಣಬೇಕು. ಶಿಕ್ಷಣ ಸೇರಿದಂತೆ ಎಲ್ಲ ಅವಕಾಶಗಳನ್ನು ನೀಡಿದ್ದಲ್ಲಿ ಮಾತ್ರ ಹೆಣ್ಣು ಮಕ್ಕಳೂ ಗಂಡು ಮಕ್ಕಳಷ್ಟೇ ಗಟ್ಟಿಯಾಗಿ ನೆಲೆಯೂರಲು ಸಾಧ್ಯವಿದೆ’ ಎಂದು ತಿಳಿಸಿದರು.</p>.<p>ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ಗಾಯಕಿ ರೇಖಾ ಅಪ್ಪಾರಾವ್ ಸೌದಿ ಮಾತನಾಡಿದರು.</p>.<p>ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಅರ್ಚನಾ ಚಂದ್ರಕಾಂತ ಕುಂಬಾರ, ಮಹಾದೇವಿ ವೀರಶೆಟ್ಟಿ ಪಾಟೀಲ, ಜಯಶ್ರೀ ಹಾಗೂ ಪ್ರಾಪ್ತಿ ಅರಳಿ ಅವರನ್ನು ಸನ್ಮಾನಿಸಲಾಯಿತು.</p>.<p>ನಾಟ್ಯಶ್ರೀ ನೃತ್ಯಾಲಯದ ರಾಜೇಶ್ವರಿ ಹಾಗೂ ತಂಡದವರು ಭರತನಾಟ್ಯ, ರಶ್ಮಿ ಮತ್ತು ತಂಡದವರು ಜಾನಪದ ನೃತ್ಯ, ಶೈಲಜಾ ದಿವಾಕರ ಮತ್ತು ತಂಡದವರು ತತ್ವಪದ ಗಾಯನ, ಭೂಮಿಕಾ, ವೈಷ್ಣವಿ ಸಮೂಹ ಗಾಯನ ಹಾಗೂ ಯುಕ್ತಿ ಅರಳಿ ಜಾನಪದ ಗೀತೆ ಪ್ರಸ್ತುತಪಡಿಸಿದರು.</p>.<p>ಪ್ರಾಧ್ಯಾಪಕ ವೀರಶೆಟ್ಟಿ ಮೈಲೂರಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆ. ಸತ್ಯಮೂರ್ತಿ ಸ್ವಾಗತ ಕೋರಿದರು. ದೇವಿದಾಸ ಜೋಶಿ ಸಾಧಕರ ಪರಿಚಯ ಮಾಡಿಕೊಟ್ಟರು. ರಾಘವೇಂದ್ರ ಅಡಿಗ ನಿರೂಪಿಸಿದರು. ಉಮಾಕಾಂತ ಮೀಸೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿನ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು’ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಪ್ರತಿಭಾ ಚಾಮಾ ಹೇಳಿದರು.</p>.<p>ನಾಟ್ಯಶ್ರೀ ನೃತ್ಯಾಲಯದ ವತಿಯಿಂದ ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಇರುವ ಹೋಟೆಲ್ ಶ್ರೀಕೃಷ್ಣ ದರ್ಶಿನಿಯ ಮಹಾಲಕ್ಷ್ಮಿ ಸಭಾಂಗಣದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸಾಧಕಿಯರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ತಂದೆ ಹಾಗೂ ಪತಿಯ ಪ್ರೋತ್ಸಾಹದಿಂದಾಗಿಯೇ ಮಹಿಳೆಯರು ಉನ್ನತ ಸ್ಥಾನಕ್ಕೆ ಏರಲು ಸಾಧ್ಯ ಎಂದು ತಿಳಿಸಿದರು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಕದಂಬ ಕನ್ನಡ ಸಂಘದ ಗೌರವಾಧ್ಯಕ್ಷ ಪ್ರೊ. ಸಿದ್ರಾಮಪ್ಪ ಮಾಸಿಮಾಡೆ ಅವರು,‘ವಿಶ್ವದ ಜನಸಂಖ್ಯೆಯಲ್ಲಿ ಅರ್ಧದಷ್ಟು ಮಹಿಳೆಯರು ಇದ್ದಾರೆ. ದೇಶದಲ್ಲಿ 65 ಕೋಟಿ ಮಹಿಳೆಯರಿದ್ದು, 15 ಕೋಟಿ ಮಹಿಳೆಯರಿಗಷ್ಟೇ ಅವಕಾಶಗಳು ದೊರಕುತ್ತಿವೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಎಲ್ಲ ಮಹಿಳೆಯರಿಗೂ ಅವಕಾಶಗಳು ಸಿಗಬೇಕು. ಎಲ್ಲ ಸಮುದಾಯಗಳು ಮಹಿಳೆಯರಿಗೆ ಸೂಕ್ತ ಸ್ಥಾನಮಾನ ಹಾಗೂ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ನಾಟ್ಯಶ್ರೀ ನೃತ್ಯಾಲಯದ ನಿರ್ದೇಶಕಿ ರಾಣಿ ಸತ್ಯಮೂರ್ತಿ ಮಾತನಾಡಿ,‘ಪಾಲಕರು ಗಂಡು ಹಾಗೂ ಹೆಣ್ಣು ಮಕ್ಕಳನ್ನು ಸಮಾನವಾಗಿ ಕಾಣಬೇಕು. ಶಿಕ್ಷಣ ಸೇರಿದಂತೆ ಎಲ್ಲ ಅವಕಾಶಗಳನ್ನು ನೀಡಿದ್ದಲ್ಲಿ ಮಾತ್ರ ಹೆಣ್ಣು ಮಕ್ಕಳೂ ಗಂಡು ಮಕ್ಕಳಷ್ಟೇ ಗಟ್ಟಿಯಾಗಿ ನೆಲೆಯೂರಲು ಸಾಧ್ಯವಿದೆ’ ಎಂದು ತಿಳಿಸಿದರು.</p>.<p>ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ಗಾಯಕಿ ರೇಖಾ ಅಪ್ಪಾರಾವ್ ಸೌದಿ ಮಾತನಾಡಿದರು.</p>.<p>ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಅರ್ಚನಾ ಚಂದ್ರಕಾಂತ ಕುಂಬಾರ, ಮಹಾದೇವಿ ವೀರಶೆಟ್ಟಿ ಪಾಟೀಲ, ಜಯಶ್ರೀ ಹಾಗೂ ಪ್ರಾಪ್ತಿ ಅರಳಿ ಅವರನ್ನು ಸನ್ಮಾನಿಸಲಾಯಿತು.</p>.<p>ನಾಟ್ಯಶ್ರೀ ನೃತ್ಯಾಲಯದ ರಾಜೇಶ್ವರಿ ಹಾಗೂ ತಂಡದವರು ಭರತನಾಟ್ಯ, ರಶ್ಮಿ ಮತ್ತು ತಂಡದವರು ಜಾನಪದ ನೃತ್ಯ, ಶೈಲಜಾ ದಿವಾಕರ ಮತ್ತು ತಂಡದವರು ತತ್ವಪದ ಗಾಯನ, ಭೂಮಿಕಾ, ವೈಷ್ಣವಿ ಸಮೂಹ ಗಾಯನ ಹಾಗೂ ಯುಕ್ತಿ ಅರಳಿ ಜಾನಪದ ಗೀತೆ ಪ್ರಸ್ತುತಪಡಿಸಿದರು.</p>.<p>ಪ್ರಾಧ್ಯಾಪಕ ವೀರಶೆಟ್ಟಿ ಮೈಲೂರಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆ. ಸತ್ಯಮೂರ್ತಿ ಸ್ವಾಗತ ಕೋರಿದರು. ದೇವಿದಾಸ ಜೋಶಿ ಸಾಧಕರ ಪರಿಚಯ ಮಾಡಿಕೊಟ್ಟರು. ರಾಘವೇಂದ್ರ ಅಡಿಗ ನಿರೂಪಿಸಿದರು. ಉಮಾಕಾಂತ ಮೀಸೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>