<p><strong>ಬಸವಕಲ್ಯಾಣ:</strong> ’ಸರ್ಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದಂತೆಯೇ ವಚನ ಸಂದೇಶದ ಮೂಲಕ ಕಚೇರಿಗಳಲ್ಲಿನ ಭ್ರಷ್ಟಾಚಾರ ಮುಕ್ತಿಗೆ ಅಭಿಯಾನ ಆಯೋಜಿಸಬೇಕು' ಎಂದು ಸಾಹಿತಿ ಸಂಗಮೇಶ ತೋಗರಖೇಡೆ ಆಗ್ರಹಿಸಿದ್ದಾರೆ.</p>.<p>ತಾಲ್ಲೂಕಿನ ಗುಣತೀರ್ಥವಾಡಿ ಕಲ್ಯಾಣ ಮಹಾಮನೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಬಸವಜಯಂತಿ ಹಾಗೂ ಶರಣೆ ದಾನಮ್ಮನ ಬಳಗದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಬಸವಪ್ರಭು ಸ್ವಾಮೀಜಿ ಮಾತನಾಡಿ, `ಬಸವಣ್ಣನವರನ್ನು ಬರೀ ಉತ್ಸವಗಳಿಗೆ ಸೀಮಿತಗೊಳಿಸದೆ ಅವರ ತತ್ವವನ್ನು ಅಚರಣೆಗೆ ತರಬೇಕು. ನುಡಿದಂತೆ ನಡೆಯಬೇಕು' ಎಂದು ಸಲಹೆ ನೀಡಿದರು.</p>.<p>ಪ್ರಿಯಾಂಕಾ ಪಸಾರಗೆ ಮಾತನಾಡಿ,`ಬಸವಣ್ಣನವರು ಮಹಿಳೆಯರಿಗೆ ಎಲ್ಲದರಲ್ಲೂ ಪಾಲುದಾರಿಗೆ ನೀಡಿ ಅವರ ಅಭ್ಯುದಯ ಬಯಸಿದರು' ಎಂದರು.</p>.<p>ನಿವೃತ್ತ ಅಧಿಕಾರಿ ಎಸ್.ದಿವಾಕರ, ಸಿದ್ದಪ್ಪ ಮುಗನೂರು, ಶಶಿಕಾಂತ ಮಾಳಿ, ಕೀರ್ತಿ ಓಂಕಾರ ದುಬಲಗುಂಡೆ, ಸಂಗಮೇಶ ಮಾಲಿಪಾಟೀಲ, ಬಸವಜ್ಯೋತಿ, ಭೀಮಶ್ರೀ ಮಾತನಾಡಿದರು. ಪಂಚಾಯತರಾಜ್ ಕಾಲೇಜು ಸಂಸ್ಥೆ ಅಧ್ಯಕ್ಷ ಸಿದ್ಧಾರ್ಥ ಬಾವಿದೊಡ್ಡಿ ಷಟಸ್ಥಲ ಧ್ವಜಾರೋಹಣಗೈದರು. ವಿಜಯಲಕ್ಷ್ಮಿ ಕೆಂಗನಾಳ ಅವರು ವಚನ ಸಂಗೀತ ಪ್ರಸ್ತುತಪಡಿಸಿದರು.</p>.<p>ಶರಣೆ ದಾನಮ್ಮನ ಬಳಗದ ಅಧ್ಯಕ್ಷೆಯಾಗಿ ನೇಮಕ ಆಗಿರುವ ಸುಮಿತ್ರಾ ದಾವಣಗಾವೆ, ಪ್ರಧಾನ ಕಾರ್ಯದರ್ಶಿ ರಾಣಿ ವಡ್ಡೆ ಅವರನ್ನು ಹಾಗೂ ಸಮಾಜ ಕಾರ್ಯಕರ್ತರಾದ ಪ್ರಭುಶೆಟ್ಟಿ, ತೀರ್ಥಪ್ಪ, ಅಡಿವೆಪ್ಪ ಪಟ್ನೆ, ಶಶಿಕಾಂತ ಕೊಡ್ಲಿ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ:</strong> ’ಸರ್ಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದಂತೆಯೇ ವಚನ ಸಂದೇಶದ ಮೂಲಕ ಕಚೇರಿಗಳಲ್ಲಿನ ಭ್ರಷ್ಟಾಚಾರ ಮುಕ್ತಿಗೆ ಅಭಿಯಾನ ಆಯೋಜಿಸಬೇಕು' ಎಂದು ಸಾಹಿತಿ ಸಂಗಮೇಶ ತೋಗರಖೇಡೆ ಆಗ್ರಹಿಸಿದ್ದಾರೆ.</p>.<p>ತಾಲ್ಲೂಕಿನ ಗುಣತೀರ್ಥವಾಡಿ ಕಲ್ಯಾಣ ಮಹಾಮನೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಬಸವಜಯಂತಿ ಹಾಗೂ ಶರಣೆ ದಾನಮ್ಮನ ಬಳಗದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಬಸವಪ್ರಭು ಸ್ವಾಮೀಜಿ ಮಾತನಾಡಿ, `ಬಸವಣ್ಣನವರನ್ನು ಬರೀ ಉತ್ಸವಗಳಿಗೆ ಸೀಮಿತಗೊಳಿಸದೆ ಅವರ ತತ್ವವನ್ನು ಅಚರಣೆಗೆ ತರಬೇಕು. ನುಡಿದಂತೆ ನಡೆಯಬೇಕು' ಎಂದು ಸಲಹೆ ನೀಡಿದರು.</p>.<p>ಪ್ರಿಯಾಂಕಾ ಪಸಾರಗೆ ಮಾತನಾಡಿ,`ಬಸವಣ್ಣನವರು ಮಹಿಳೆಯರಿಗೆ ಎಲ್ಲದರಲ್ಲೂ ಪಾಲುದಾರಿಗೆ ನೀಡಿ ಅವರ ಅಭ್ಯುದಯ ಬಯಸಿದರು' ಎಂದರು.</p>.<p>ನಿವೃತ್ತ ಅಧಿಕಾರಿ ಎಸ್.ದಿವಾಕರ, ಸಿದ್ದಪ್ಪ ಮುಗನೂರು, ಶಶಿಕಾಂತ ಮಾಳಿ, ಕೀರ್ತಿ ಓಂಕಾರ ದುಬಲಗುಂಡೆ, ಸಂಗಮೇಶ ಮಾಲಿಪಾಟೀಲ, ಬಸವಜ್ಯೋತಿ, ಭೀಮಶ್ರೀ ಮಾತನಾಡಿದರು. ಪಂಚಾಯತರಾಜ್ ಕಾಲೇಜು ಸಂಸ್ಥೆ ಅಧ್ಯಕ್ಷ ಸಿದ್ಧಾರ್ಥ ಬಾವಿದೊಡ್ಡಿ ಷಟಸ್ಥಲ ಧ್ವಜಾರೋಹಣಗೈದರು. ವಿಜಯಲಕ್ಷ್ಮಿ ಕೆಂಗನಾಳ ಅವರು ವಚನ ಸಂಗೀತ ಪ್ರಸ್ತುತಪಡಿಸಿದರು.</p>.<p>ಶರಣೆ ದಾನಮ್ಮನ ಬಳಗದ ಅಧ್ಯಕ್ಷೆಯಾಗಿ ನೇಮಕ ಆಗಿರುವ ಸುಮಿತ್ರಾ ದಾವಣಗಾವೆ, ಪ್ರಧಾನ ಕಾರ್ಯದರ್ಶಿ ರಾಣಿ ವಡ್ಡೆ ಅವರನ್ನು ಹಾಗೂ ಸಮಾಜ ಕಾರ್ಯಕರ್ತರಾದ ಪ್ರಭುಶೆಟ್ಟಿ, ತೀರ್ಥಪ್ಪ, ಅಡಿವೆಪ್ಪ ಪಟ್ನೆ, ಶಶಿಕಾಂತ ಕೊಡ್ಲಿ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>