‘ಗ್ರಾಮ ಪಂಚಾಯಿತಿ 15ನೇ ಹಣಕಾಸು ಯೋಜನೆ ಅನುದಾನ ದುರ್ಬಳಕೆ, ವಿವಿಧ ವಸತಿ ಹಂಚಿಕೆ ಕುರಿತು ಕೇಳಿದ ಮಾಹಿತಿ ನೀಡದಿರುವುದು, ಜನರ ಸಮಸ್ಯೆಗಳಿಗೆ ಸ್ಪಂದಿಸದೇ ಇರುವ ಕುರಿತು ಮೇಲಧಿಕಾರಿಗಳಿಗೆ ದೂರು ನೀಡಿರುವುದಕ್ಕೆ ಪ್ರತಿಕಾರವಾಗಿ ಪಿಡಿಒ ಮಹಾಲಕ್ಷ್ಮಿ ಅವರು ನನ್ನ ಹಾಗೂ ನನ್ನ ಮಕ್ಕಳ ವಿರುದ್ಧ ದೂರು ದಾಖಲಿಸಿದ್ದಾಗಿ’ ಹೆಡಗಾಪುರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸೈಯದ್ ಶರ್ಫೊದ್ದಿನ್ ಸ್ಪಷ್ಟನೆ ನೀಡಿದ್ದಾರೆ.