<p><strong>ಗೋರನಳ್ಳಿ(ಜನವಾಡ):</strong> ಬೀದರ್ ತಾಲ್ಲೂಕಿನ ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎರಡು ದಿನಗಳ ಟೆಕ್ನೋತ್ಸವ ಯುಕ್ತಿ–2025ಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.</p>.<p>ಮೊದಲ ದಿನ ಅಂತರ ಕಾಲೇಜು ಮಟ್ಟದ ಚೆಸ್, ಕೇರಂ, ನೃತ್ಯ, ಗಾಯನ, ತಾಂತ್ರಿಕ ಚಟುವಟಿಕೆ, ಪ್ರಬಂಧ ಮಂಡನೆ, ಕಾರ್ಯಾಗಾರ ಮೊದಲಾದ ಕಾರ್ಯಕ್ರಮಗಳು ನಡೆದವು. ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.</p>.<p>ಟೆಕ್ನೋತ್ಸವ ಯುಕ್ತಿ ಉದ್ಘಾಟಿಸಿದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಪ್ರಾಚಾರ್ಯ ದೇವೇಂದ್ರ ಹಂಚೆ, ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳೂ ಬಹಳ ಅವಶ್ಯಕ ಎಂದು ಹೇಳಿದರು.</p>.<p>ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ನಿರ್ದೇಶಕ ಶರಣಬಸಪ್ಪ ದೇಶಮುಖ ಮಾತನಾಡಿದರು. ಕಾಲೇಜು ಪ್ರಾಚಾರ್ಯೆ ವಿನಿತಾ ಪಾಟೀಲ ಮಾತನಾಡಿ, ಟೆಕ್ನೋತ್ಸವ ಯುಕ್ತಿ ನಿಮಿತ್ತ ಎರಡು ದಿನ ವಿವಿಧ ಚಟುವಟಿಕೆಗಳು ನಡೆಯಲಿವೆ ಎಂದು ತಿಳಿಸಿದರು.</p>.<p>ಶರಣಬಸವೇಶ್ವರ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಸತೀಶ ಪ್ರತಾಪುರ, ಶರಣಬಸಪ್ಪ ಶೆಟಕಾರ್, ಬಸವಲಿಂಗ ಸ್ವಾಮಿ, ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋರನಳ್ಳಿ(ಜನವಾಡ):</strong> ಬೀದರ್ ತಾಲ್ಲೂಕಿನ ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎರಡು ದಿನಗಳ ಟೆಕ್ನೋತ್ಸವ ಯುಕ್ತಿ–2025ಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.</p>.<p>ಮೊದಲ ದಿನ ಅಂತರ ಕಾಲೇಜು ಮಟ್ಟದ ಚೆಸ್, ಕೇರಂ, ನೃತ್ಯ, ಗಾಯನ, ತಾಂತ್ರಿಕ ಚಟುವಟಿಕೆ, ಪ್ರಬಂಧ ಮಂಡನೆ, ಕಾರ್ಯಾಗಾರ ಮೊದಲಾದ ಕಾರ್ಯಕ್ರಮಗಳು ನಡೆದವು. ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.</p>.<p>ಟೆಕ್ನೋತ್ಸವ ಯುಕ್ತಿ ಉದ್ಘಾಟಿಸಿದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಪ್ರಾಚಾರ್ಯ ದೇವೇಂದ್ರ ಹಂಚೆ, ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳೂ ಬಹಳ ಅವಶ್ಯಕ ಎಂದು ಹೇಳಿದರು.</p>.<p>ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ನಿರ್ದೇಶಕ ಶರಣಬಸಪ್ಪ ದೇಶಮುಖ ಮಾತನಾಡಿದರು. ಕಾಲೇಜು ಪ್ರಾಚಾರ್ಯೆ ವಿನಿತಾ ಪಾಟೀಲ ಮಾತನಾಡಿ, ಟೆಕ್ನೋತ್ಸವ ಯುಕ್ತಿ ನಿಮಿತ್ತ ಎರಡು ದಿನ ವಿವಿಧ ಚಟುವಟಿಕೆಗಳು ನಡೆಯಲಿವೆ ಎಂದು ತಿಳಿಸಿದರು.</p>.<p>ಶರಣಬಸವೇಶ್ವರ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಸತೀಶ ಪ್ರತಾಪುರ, ಶರಣಬಸಪ್ಪ ಶೆಟಕಾರ್, ಬಸವಲಿಂಗ ಸ್ವಾಮಿ, ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>