<p><strong>ಬಸವ ಕಲ್ಯಾಣ:</strong> `ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಲಿಂಗಾಯತ ಸ್ವತಂತ್ರ ಧರ್ಮಕ್ಕಾಗಿ ಬೃಹತ್ ಮೆರವಣಿಗೆ ನಡೆಸಿದಂತೆ ತೆಲಂಗಾಣದಲ್ಲಿ ಕೂಡ ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶಿಸುವುದು ಲಿಂಗೈಕ್ಯ ಮಾತೆ ಮಹಾದೇವಿಯವರ ಕನಸಾಗಿತ್ತು. ಆ ಕನಸನ್ನು ನನಸು ಮಾಡುವುದಕ್ಕಾಗಿ ಪ್ರಯತ್ನಿಸಲಾಗುವುದು’ ಎಂದು ಕೂಡಲ ಸಂಗಮ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಹೇಳಿದ್ದಾರೆ.</p>.<p>ನಗರದ ಬಸವ ಮಹಾಮನೆ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ 20ನೇ ಕಲ್ಯಾಣ ಪರ್ವದ ಧರ್ಮಚಿಂತನ ಗೋಷ್ಠಿಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>‘ತೆಲಂಗಾಣದ ಲಿಂಗಾಯತರನ್ನು ಒಗ್ಗೂಡಿಸುವ ಸದುದ್ದೇಶದಿಂದ ಈ ಕಾರ್ಯಕ್ರಮದಲ್ಲಿ ಬರೀ ಅಲ್ಲಿನ ಲಿಂಗಾಯತ ಧರ್ಮೀಯರನ್ನು ಹಾಗೂ ರಾಜಕೀಯ ಮುಖಂಡರನ್ನು ಆಹ್ವಾನಿಸಿ ಚಿಂತನ ಮಂಥನ ನಡೆಸಲಾಗಿದೆ. ಅಲ್ಲಿನವರು ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಿರುವುದನ್ನು ನೋಡಿದರೆ, ಮುಂದೆ ಲಿಂಗಾಯತ ಸ್ವತಂತ್ರ ಧರ್ಮಕ್ಕಾಗಿ ಹೈದರಾಬಾದ್ನಲ್ಲಿ ಹಮ್ಮಿಕೊಳ್ಳುವ ಹೋರಾಟ ಯಶಸ್ವಿ ಆಗುವುದು ನಿಶ್ಚಿತ’ ಎಂದರು.</p>.<p>‘ಬಸವಾದಿ ಶರಣರು ಕಾಯಕ, ದಾಸೋಹ ತತ್ವ ನೀಡಿದ್ದಾರೆ. ವಚನ ಸಾಹಿತ್ಯ ಬರೆದು ಜನ ಜಾಗೃತಿಗೈದಿದ್ದಾರೆ. ಅವರ ಸಂದೇಶದ ಪ್ರಚಾರ ಮತ್ತು ಪ್ರಸಾರ ಹೆಚ್ಚಾಗಿ ಆಗಬೇಕಾಗಿದೆ. ತೆಲಂಗಾಣ ಒಳಗೊಂಡು ದೂರದೂರದ ಲಿಂಗಾಯತರಿಗೆ ಬಸವತತ್ವ ತಿಳಿಸಿ ಒಗ್ಗಟ್ಟು ಮೂಡಿಸಬೇಕಾಗಿದೆ’ ಎಂದರು.</p>.<p>ಬೆಂಗಳೂರಿನ ಚನ್ನಬಸವಾನಂದ ಸ್ವಾಮೀಜಿ ಮಾತನಾಡಿ, `ಬಸವಣ್ಣನವರ ಕಾಲದಲ್ಲಿ ಗಣಪರ್ವ ನಡೆಸುತ್ತಿದ್ದರು. ಅದನ್ನೇ ಈಗ ಕಲ್ಯಾಣ ಪರ್ವವನ್ನಾಗಿ ನಡೆಸಲಾಗುತ್ತಿದೆ. ಲಿಂಗಾಯತ ಧರ್ಮದ ಪ್ರಚಾರದ ಉದ್ದೇಶ ಇದರಲ್ಲಿ ಅಡಗಿದೆ’ ಎಂದರು.</p>.<p>ಸಿದ್ದರಾಮೇಶ್ವರ ಸ್ವಾಮೀಜಿ, ಬಸವಕುಮಾರ ಸ್ವಾಮೀಜಿ, ಮಾತೆ ಜ್ಞಾನೇಶ್ವರಿ, ರಾಷ್ಟ್ರೀಯ ಬಸವದಳದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಧನ್ನೂರ, ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಪಾಟೀಲ ಶಿವಪುರ, ಮುಖಂಡ ಬಸವರಾಜ ಬುಳ್ಳಾ ಇದ್ದರು.</p>.<p>ಸಂಸದ ಬಿ.ಬಿ.ಪಾಟೀಲ ದೀಪ ಬೆಳಗಿಸಿದರು. ಎಂ.ಸಂಗಮೇಶ್ವರ ಧ್ವಜಾರೋಹಣಗೈದರು. ಶಂಕರೆಪ್ಪ ಪಾಟೀಲ ಜಹೀರಾಬಾದ ಅಧ್ಯಕ್ಷತೆ ವಹಿಸಿದ್ದರು. ವಿವಿಧೆಡೆಯ ಅನೇಕ ಭಕ್ತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವ ಕಲ್ಯಾಣ:</strong> `ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಲಿಂಗಾಯತ ಸ್ವತಂತ್ರ ಧರ್ಮಕ್ಕಾಗಿ ಬೃಹತ್ ಮೆರವಣಿಗೆ ನಡೆಸಿದಂತೆ ತೆಲಂಗಾಣದಲ್ಲಿ ಕೂಡ ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶಿಸುವುದು ಲಿಂಗೈಕ್ಯ ಮಾತೆ ಮಹಾದೇವಿಯವರ ಕನಸಾಗಿತ್ತು. ಆ ಕನಸನ್ನು ನನಸು ಮಾಡುವುದಕ್ಕಾಗಿ ಪ್ರಯತ್ನಿಸಲಾಗುವುದು’ ಎಂದು ಕೂಡಲ ಸಂಗಮ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಹೇಳಿದ್ದಾರೆ.</p>.<p>ನಗರದ ಬಸವ ಮಹಾಮನೆ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ 20ನೇ ಕಲ್ಯಾಣ ಪರ್ವದ ಧರ್ಮಚಿಂತನ ಗೋಷ್ಠಿಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>‘ತೆಲಂಗಾಣದ ಲಿಂಗಾಯತರನ್ನು ಒಗ್ಗೂಡಿಸುವ ಸದುದ್ದೇಶದಿಂದ ಈ ಕಾರ್ಯಕ್ರಮದಲ್ಲಿ ಬರೀ ಅಲ್ಲಿನ ಲಿಂಗಾಯತ ಧರ್ಮೀಯರನ್ನು ಹಾಗೂ ರಾಜಕೀಯ ಮುಖಂಡರನ್ನು ಆಹ್ವಾನಿಸಿ ಚಿಂತನ ಮಂಥನ ನಡೆಸಲಾಗಿದೆ. ಅಲ್ಲಿನವರು ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಿರುವುದನ್ನು ನೋಡಿದರೆ, ಮುಂದೆ ಲಿಂಗಾಯತ ಸ್ವತಂತ್ರ ಧರ್ಮಕ್ಕಾಗಿ ಹೈದರಾಬಾದ್ನಲ್ಲಿ ಹಮ್ಮಿಕೊಳ್ಳುವ ಹೋರಾಟ ಯಶಸ್ವಿ ಆಗುವುದು ನಿಶ್ಚಿತ’ ಎಂದರು.</p>.<p>‘ಬಸವಾದಿ ಶರಣರು ಕಾಯಕ, ದಾಸೋಹ ತತ್ವ ನೀಡಿದ್ದಾರೆ. ವಚನ ಸಾಹಿತ್ಯ ಬರೆದು ಜನ ಜಾಗೃತಿಗೈದಿದ್ದಾರೆ. ಅವರ ಸಂದೇಶದ ಪ್ರಚಾರ ಮತ್ತು ಪ್ರಸಾರ ಹೆಚ್ಚಾಗಿ ಆಗಬೇಕಾಗಿದೆ. ತೆಲಂಗಾಣ ಒಳಗೊಂಡು ದೂರದೂರದ ಲಿಂಗಾಯತರಿಗೆ ಬಸವತತ್ವ ತಿಳಿಸಿ ಒಗ್ಗಟ್ಟು ಮೂಡಿಸಬೇಕಾಗಿದೆ’ ಎಂದರು.</p>.<p>ಬೆಂಗಳೂರಿನ ಚನ್ನಬಸವಾನಂದ ಸ್ವಾಮೀಜಿ ಮಾತನಾಡಿ, `ಬಸವಣ್ಣನವರ ಕಾಲದಲ್ಲಿ ಗಣಪರ್ವ ನಡೆಸುತ್ತಿದ್ದರು. ಅದನ್ನೇ ಈಗ ಕಲ್ಯಾಣ ಪರ್ವವನ್ನಾಗಿ ನಡೆಸಲಾಗುತ್ತಿದೆ. ಲಿಂಗಾಯತ ಧರ್ಮದ ಪ್ರಚಾರದ ಉದ್ದೇಶ ಇದರಲ್ಲಿ ಅಡಗಿದೆ’ ಎಂದರು.</p>.<p>ಸಿದ್ದರಾಮೇಶ್ವರ ಸ್ವಾಮೀಜಿ, ಬಸವಕುಮಾರ ಸ್ವಾಮೀಜಿ, ಮಾತೆ ಜ್ಞಾನೇಶ್ವರಿ, ರಾಷ್ಟ್ರೀಯ ಬಸವದಳದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಧನ್ನೂರ, ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಪಾಟೀಲ ಶಿವಪುರ, ಮುಖಂಡ ಬಸವರಾಜ ಬುಳ್ಳಾ ಇದ್ದರು.</p>.<p>ಸಂಸದ ಬಿ.ಬಿ.ಪಾಟೀಲ ದೀಪ ಬೆಳಗಿಸಿದರು. ಎಂ.ಸಂಗಮೇಶ್ವರ ಧ್ವಜಾರೋಹಣಗೈದರು. ಶಂಕರೆಪ್ಪ ಪಾಟೀಲ ಜಹೀರಾಬಾದ ಅಧ್ಯಕ್ಷತೆ ವಹಿಸಿದ್ದರು. ವಿವಿಧೆಡೆಯ ಅನೇಕ ಭಕ್ತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>