<p>ಬೀದರ್: ‘ಶ್ರಾವಣ ಮಾಸದಲ್ಲಿ ಶರಣ ಸಂತರ ತತ್ವ, ಉಪದೇಶ ಆಲಿಸಿ ಬದುಕು ರೂಪಿಸಿಕೊಳ್ಳಬೇಕು’ ಎಂದು ನಗರಸಭೆ ಆಯುಕ್ತ ರವೀಂದ್ರನಾಥ ಅಂಗಡಿ ಹೇಳಿದರು.</p>.<p>ಇಲ್ಲಿಯ ಡಾ.ಚನ್ನಬಸವ ಪಟ್ಟದ್ದೇವರ ಪ್ರಸಾದ ನಿಲಯದಲ್ಲಿ ಶ್ರಾವಣ ಪ್ರಯುಕ್ತ ಆರಂಭವಾದ ಬಸವ ದರ್ಶನ ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮಹಾಲಿಂಗ ಸ್ವಾಮೀಜಿ ಆರ್ಶೀವಚನ ನೀಡಿ, ‘ಶರಣರ ವಚನಗಳು ಸುಂದರ ಬದುಕು ರೂಪಿಸಿಕೊಳ್ಳಲು ಪ್ರೇರಣೆ ನೀಡುತ್ತವೆ’ ಎಂದು ಹೇಳಿದರು.<br />‘ಶರಣರು ಶ್ರಾವಣದಲ್ಲಿ ಶರಣರ, ಸಂತರ ಅನುಭಾವಗಳನ್ನು ಕೇಳಲು ಸಂಸಾರ ಬಂಧನದಿಂದ ಹೊರಬಂದು ಸತ್ಸಂಗದಲ್ಲಿ ಪಾಲ್ಗೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>ಉದ್ಯಮಿ ಜೈರಾಜ್ ಖಂಡ್ರೆ ಹಾಗೂ ಪ್ರಸಾದ ನಿಲಯದ ಕಾರ್ಯದರ್ಶಿ ಪ್ರೊ.ಎಸ್.ಬಿ.ಬಿರಾದಾರ ಮಾತನಾಡಿದರು.</p>.<p>ಪ್ರವಚನ ಸಮಿತಿಯ ಅಧ್ಯಕ್ಷ ನೀಲಕಂಠ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ಪಿ.ಸಂಗಪ್ಪ, ವೈಜಿನಾಥ ಬಿರಾದಾರ, ಶ್ರೀಕಾಂತ ಬಿರಾದಾರ, ಚಂದ್ರಶೇಖರ ಹೆಬ್ಬಾಳೆ, ರಾಜಶೇಖರ ಮಠ ಇದ್ದರು.</p>.<p>ಇಂದುಮತಿ ನೀಲಕಂಠ ಬಿರಾದಾರ ಅವರು ಬಸವಣ್ಣ ಹಾಗೂ ಚನ್ನಬಸವ ಪಟ್ಟದ್ದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಸಂಜೀವಕುಮಾರ ಸ್ವಾಮಿ, ವಚನಶ್ರೀ ಹಾಗೂ ಚನ್ನಬಸಪ್ಪ ನೌಬಾದೆ ವಚನ ಸಂಗೀತ ನಡೆಸಿಕೊಟ್ಟರು. </p>.<p>ಯೋಗೇಂದ್ರ ಯದಲಾಪೂರೆ ಸ್ವಾಗತಿಸಿದರು. ಉಮಾಕಾಂತ ಮೀಸೆ ನಿರೂಪಿಸಿದರು. ಕಸ್ತೂರಿಬಾಯಿ ಬಿರಾದಾರ ವಂದಿಸಿದರು. .</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ‘ಶ್ರಾವಣ ಮಾಸದಲ್ಲಿ ಶರಣ ಸಂತರ ತತ್ವ, ಉಪದೇಶ ಆಲಿಸಿ ಬದುಕು ರೂಪಿಸಿಕೊಳ್ಳಬೇಕು’ ಎಂದು ನಗರಸಭೆ ಆಯುಕ್ತ ರವೀಂದ್ರನಾಥ ಅಂಗಡಿ ಹೇಳಿದರು.</p>.<p>ಇಲ್ಲಿಯ ಡಾ.ಚನ್ನಬಸವ ಪಟ್ಟದ್ದೇವರ ಪ್ರಸಾದ ನಿಲಯದಲ್ಲಿ ಶ್ರಾವಣ ಪ್ರಯುಕ್ತ ಆರಂಭವಾದ ಬಸವ ದರ್ಶನ ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮಹಾಲಿಂಗ ಸ್ವಾಮೀಜಿ ಆರ್ಶೀವಚನ ನೀಡಿ, ‘ಶರಣರ ವಚನಗಳು ಸುಂದರ ಬದುಕು ರೂಪಿಸಿಕೊಳ್ಳಲು ಪ್ರೇರಣೆ ನೀಡುತ್ತವೆ’ ಎಂದು ಹೇಳಿದರು.<br />‘ಶರಣರು ಶ್ರಾವಣದಲ್ಲಿ ಶರಣರ, ಸಂತರ ಅನುಭಾವಗಳನ್ನು ಕೇಳಲು ಸಂಸಾರ ಬಂಧನದಿಂದ ಹೊರಬಂದು ಸತ್ಸಂಗದಲ್ಲಿ ಪಾಲ್ಗೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>ಉದ್ಯಮಿ ಜೈರಾಜ್ ಖಂಡ್ರೆ ಹಾಗೂ ಪ್ರಸಾದ ನಿಲಯದ ಕಾರ್ಯದರ್ಶಿ ಪ್ರೊ.ಎಸ್.ಬಿ.ಬಿರಾದಾರ ಮಾತನಾಡಿದರು.</p>.<p>ಪ್ರವಚನ ಸಮಿತಿಯ ಅಧ್ಯಕ್ಷ ನೀಲಕಂಠ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ಪಿ.ಸಂಗಪ್ಪ, ವೈಜಿನಾಥ ಬಿರಾದಾರ, ಶ್ರೀಕಾಂತ ಬಿರಾದಾರ, ಚಂದ್ರಶೇಖರ ಹೆಬ್ಬಾಳೆ, ರಾಜಶೇಖರ ಮಠ ಇದ್ದರು.</p>.<p>ಇಂದುಮತಿ ನೀಲಕಂಠ ಬಿರಾದಾರ ಅವರು ಬಸವಣ್ಣ ಹಾಗೂ ಚನ್ನಬಸವ ಪಟ್ಟದ್ದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಸಂಜೀವಕುಮಾರ ಸ್ವಾಮಿ, ವಚನಶ್ರೀ ಹಾಗೂ ಚನ್ನಬಸಪ್ಪ ನೌಬಾದೆ ವಚನ ಸಂಗೀತ ನಡೆಸಿಕೊಟ್ಟರು. </p>.<p>ಯೋಗೇಂದ್ರ ಯದಲಾಪೂರೆ ಸ್ವಾಗತಿಸಿದರು. ಉಮಾಕಾಂತ ಮೀಸೆ ನಿರೂಪಿಸಿದರು. ಕಸ್ತೂರಿಬಾಯಿ ಬಿರಾದಾರ ವಂದಿಸಿದರು. .</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>