ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾಲ್ಕಿ: ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ

Last Updated 25 ಆಗಸ್ಟ್ 2020, 3:49 IST
ಅಕ್ಷರ ಗಾತ್ರ

ಭಾಲ್ಕಿ: ತಾಲ್ಲೂಕಿನ ಕೋನ ಮೇಳಕುಂದಾ ಗ್ರಾಮದ ರೈತ ಭೀಮಣ್ಣ ತಿಪ್ಪಣ್ಣ ಮೊಳಕೇರೆ (65) ಸಾಲಬಾಧೆ ತಾಳಲಾರದೆ ಶನಿವಾರ ವಿಷ ಕುಡಿದು ಸಾವನ್ನಪ್ಪಿದ್ದಾರೆ. ಕೃಷಿ ಚಟುವಟಿಕೆಗಳಿಗಾಗಿ ಮಾಡಿದ ಸಾಲ ತೀರಿಸುವ ಚಿಂತೆಯಲ್ಲಿ ಹುಲ್ಲಿಗೆ ಸಿಂಪಡಿಸುವ ಔಷಧಿ ಸೇವಿಸಿದ್ದಾರೆ. ತಕ್ಷಣವೇ ಭಾಲ್ಕಿ ಸಾರ್ವಜನಿಕ ಆಸ್ಪತ್ರೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೀದರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟಿದ್ದಾರೆ. ಈ ಕುರಿತು ಮೃತ ರೈತನ ಪತ್ನಿ ಇಂದಮ್ಮ ಭೀಮಣ್ಣ ನೀಡಿರುವ ದೂರಿನ ಮೇರೆಗೆ ಧನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT