ಭಾಲ್ಕಿ: ತಾಲ್ಲೂಕಿನ ಕೋನ ಮೇಳಕುಂದಾ ಗ್ರಾಮದ ರೈತ ಭೀಮಣ್ಣ ತಿಪ್ಪಣ್ಣ ಮೊಳಕೇರೆ (65) ಸಾಲಬಾಧೆ ತಾಳಲಾರದೆ ಶನಿವಾರ ವಿಷ ಕುಡಿದು ಸಾವನ್ನಪ್ಪಿದ್ದಾರೆ. ಕೃಷಿ ಚಟುವಟಿಕೆಗಳಿಗಾಗಿ ಮಾಡಿದ ಸಾಲ ತೀರಿಸುವ ಚಿಂತೆಯಲ್ಲಿ ಹುಲ್ಲಿಗೆ ಸಿಂಪಡಿಸುವ ಔಷಧಿ ಸೇವಿಸಿದ್ದಾರೆ. ತಕ್ಷಣವೇ ಭಾಲ್ಕಿ ಸಾರ್ವಜನಿಕ ಆಸ್ಪತ್ರೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೀದರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟಿದ್ದಾರೆ. ಈ ಕುರಿತು ಮೃತ ರೈತನ ಪತ್ನಿ ಇಂದಮ್ಮ ಭೀಮಣ್ಣ ನೀಡಿರುವ ದೂರಿನ ಮೇರೆಗೆ ಧನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.