ಎರಡಕ್ಕಿಂತ ಹೆಚ್ಚು ಸಾಲಗಳಿಗೆ ಒಂದೇ ಆಧಾರ್ ಸಂಖ್ಯೆ ಜೋಡಣೆ, ಪಡಿತರ ಚೀಟಿ ಹೊಂದದ, ಒಂದೇ ಸದಸ್ಯತ್ವದ ಮೇಲೆ ಹಲವು ಸಾಲಗಳ ಮನ್ನಾ ಅರ್ಜಿ ಹೀಗೆ ಹಲವು ಕಾರಣಗಳಿಂದ ಜಿಲ್ಲೆಯ 8,671 ರೈತರು ಸಾಲ ಮನ್ನಾ ಯೋಜನೆಯಿಂದ ಹೊರಗುಳಿದಿದ್ದಾರೆ. ಬ್ಯಾಂಕ್ ಅಧಿಕಾರಿಗಳು ಅವರನ್ನು ಭೇಟಿ ಮಾಡಿ, ಅರ್ಹ ಫಲಾನುಭವಿಗಳ ಸಮಸ್ಯೆ ಪರಿಹರಿಸಲು ಕಾರ್ಯ ಪ್ರವೃತ್ತರಾಗಬೇಕು ಎಂದು ಹೇಳಿದರು.