ಪರಿಶಿಷ್ಟ ಜಾತಿಗೆ ಸೇರಿರುವ ಸಂತೋಷ ನಾಗೂರೆ ಹಾಗೂ ಆತನ ಮೂವರು ಗೆಳೆಯರಾದ ಸತೀಶ್, ಅಬ್ರಾಹಂ ಹಾಗೂ ಅಂಬರೀಶ್ ಅವರೊಂದಿಗೆ ಗುರುವಾರ ತಡರಾತ್ರಿ ಪ್ರತಾಪ್ ನಗರದಲ್ಲಿ ಮನೆ ಕಳ್ಳತನಕ್ಕೆ ಹೋಗಿದ್ದರು. ಗೋರಖನಾಥ್ ಎಂಬುವರ ಮನೆಯಲ್ಲಿ ಕಳವು ಮಾಡುವಾಗ ಸ್ಥಳೀಯರ ಕೈಗೆ ಸಂತೋಷ್ ಸಿಕ್ಕಿಬಿದ್ದಿದ್ದಾನೆ. ಮೂವರು ಗೆಳೆಯರು ಅಲ್ಲಿಂದ ಓಡಿ ಹೋಗಿದ್ದಾರೆ. ಗೋರಖನಾಥ್ ಮಾಣಿಕರಾವ್ ಸೋಮುರೆ, ಅಶೋಕ್ ಶರಣಪ್ಪ ಮೇತ್ರೆ, ಶ್ರೀನಿವಾಸ್ ಲಾಲಪ್ಪ, ಆಸ್ಟಿನ್ ಹಾಗೂ ಇನ್ನೊಬ್ಬ ವ್ಯಕ್ತಿ ಸೇರಿಕೊಂಡು ಸಂತೋಷ್ನಿಗೆ ದೊಣ್ಣೆಗಳಿಂದ ಹೊಡೆದಿದ್ದಾರೆ. ಸಂತೋಷ್ನ ತಲೆ, ಕೈಕಾಲು, ದೇಹದ ವಿವಿಧ ಭಾಗಗಳಲ್ಲಿ ಗಾಯಗಳಾಗಿವೆ ಎಂದು ಎಸ್ಪಿ ಚನ್ನಬಸವಣ್ಣ ತಿಳಿಸಿದ್ದಾರೆ.