ಒಟ್ಟು 2826 ಮತದಾರರು ಇದ್ದು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿನ 2 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಚುನಾವಣೆ ಕರ್ತವ್ಯಕ್ಕೆ 10 ಸಿಬ್ಬಂದಿ ನೇಮಿಸಲಾಗಿದೆ. ಮೇ 22ರಂದು ಮತ ಎಣಿಕೆ ನಡೆಯಲಿದೆ. ಎಲ್ಲೆಡೆ ಬಿಗಿಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಚುನಾವಣಾಧಿಕಾರಿಯೂ ಆದ ಬಿಇಒ ಚನ್ನಬಸಪ್ಪ ಹಳ್ಳದ್ ತಿಳಿಸಿದ್ದಾರೆ.
ಬಿರುಸಿನ ಪ್ರಚಾರ: ನಗರಸಭೆಯ ಒಂದೇ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದರೂ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷದಿಂದ ಬಿರುಸಿನ ಪ್ರಚಾರ ಕೈಗೊಳ್ಳಲಾಗಿತ್ತು. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮುಖಂಡರಾದ ವಿಜಯಸಿಂಗ್, ಮಾಲಾ ನಾರಾಯಣರಾವ್, ಎಐಸಿಸಿ ಸದಸ್ಯ ಆನಂದ ದೇವಪ್ಪ ಹಾಗೂ ಬಿಜೆಪಿಯಿಂದ ಶಾಸಕ ಶರಣು ಸಲಗರ ಪ್ರಚಾರ ಸಭೆಗಳನ್ನು ನಡೆಸಿದ್ದಾರೆ. ಜೆಡಿಎಸ್ ದಿಂದ ಶಾಸಕ ಬಂಡೆಪ್ಪ ಕಾಶೆಂಪುರ, ಮುಖಂಡ ಯಶ್ರಬಅಲಿ ಖಾದ್ರಿ ಇತರರು ಪ್ರಚಾರ ಕೈಗೊಂಡಿದ್ದರು.