<p><strong>ಬಸವಕಲ್ಯಾಣ:</strong> ಈ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಸ್ಥಳೀಯರಿಗೆ ನೀಡಲು ಆಗ್ರಹಿಸಿ ಆಕಾಂಕ್ಷಿಗಳು ಪಕ್ಷದ ವರಿಷ್ಠರಿಗೆ ಮನವಿ ಸಲ್ಲಿಸಲು ತೀರ್ಮಾನಿಸಿದ್ದಾರೆ.</p>.<p>ಇಲ್ಲಿ ಭಾನುವಾರ ನಡೆದ ಸ್ಥಳೀಯ ಆಕಾಂಕ್ಷಿಗಳ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ.</p>.<p>ಸಭೆ ಬಳಿಕ ಆಯೋಜಿಸಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಎಐಸಿಸಿ ಸದಸ್ಯ ಆನಂದ ದೇವಪ್ಪ ಮಾತನಾಡಿ, ‘ಪಕ್ಷದಿಂದ ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎಂಬುದು ಜನತೆಯ ಬೇಡಿಕೆಯಾಗಿದೆ. ಹೀಗಾದರೆ ಇಲ್ಲಿನ ಕಾಂಗ್ರೆಸ್ ಸ್ಥಾನವನ್ನು ಉಳಿಸಿಕೊಳ್ಳಬಹುದು’ ಎಂದರು.</p>.<p>ಹಿರಿಯ ಮುಖಂಡ ಶಿವರಾಜ ನರಶೆಟ್ಟಿ, ಬಾಬು ಹೊನ್ನಾನಾಯಕ್ ಮಾತನಾಡಿ, ‘ಸ್ಥಳೀಯ ಆಕಾಂಕ್ಷಿಗಳಲ್ಲಿ ಎಲ್ಲ ಸಮುದಾಯದವರು ಇದ್ದಾರೆ. ಇವರಲ್ಲಿ ಯಾರಿಗೆ ಟಿಕೆಟ್ ನೀಡಿದರೂ ಅವರ ಗೆಲುವಿಗೆ ಒಗ್ಗಟ್ಟಾಗಿ ಶ್ರಮಿಸುತ್ತೇವೆ. ಆದ್ದರಿಂದ ಹೊರಗಿನವರಿಗೆ ಮಣೆಹಾಕಿ ಇಲ್ಲಿನ ವರನ್ನು ಕಡೆಗಣಿಸಬಾರದು’ ಎಂದರು.</p>.<p>ಪಕ್ಷದ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಶಂಕರ ಜಮಾದಾರ, ಸುಧಾಕರ ಗುರ್ಜರ್ ಮಾತನಾಡಿ, ‘50 ವರ್ಷಗಳಲ್ಲಿ ಒಮ್ಮೆಯೂ ಸ್ಥಳೀಯರಿಗೆ ಟಿಕೆಟ್ ನೀಡಿಲ್ಲ. ಇದರಿಂದ ಇಲ್ಲಿ ಅರ್ಹ ಅಭ್ಯರ್ಥಿಗಳು ಇಲ್ಲ ಎಂಬ ತಪ್ಪು ಸಂದೇಶ ಹೋಗುತ್ತಿದೆ. ಈ ಬಗ್ಗೆ ಪಕ್ಷದ ವರಿಷ್ಠರು ಯೋಗ್ಯ ನಿರ್ಣಯ ತೆಗೆದುಕೊಳ್ಳಬೇಕು’ ಎಂದರು.</p>.<p>ಯಸ್ರಬ್ ಅಲಿ ಖಾದ್ರಿ, ಇಜಾಜ್ ಲಾತೂರೆ, ಶಶಿಕಾಂತ ಗುರಣ್ಣ, ಸಂದೀಪ ಬುಯೆ, ಆನಂದ ಹೊನ್ನಾನಾಯಕ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ:</strong> ಈ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಸ್ಥಳೀಯರಿಗೆ ನೀಡಲು ಆಗ್ರಹಿಸಿ ಆಕಾಂಕ್ಷಿಗಳು ಪಕ್ಷದ ವರಿಷ್ಠರಿಗೆ ಮನವಿ ಸಲ್ಲಿಸಲು ತೀರ್ಮಾನಿಸಿದ್ದಾರೆ.</p>.<p>ಇಲ್ಲಿ ಭಾನುವಾರ ನಡೆದ ಸ್ಥಳೀಯ ಆಕಾಂಕ್ಷಿಗಳ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ.</p>.<p>ಸಭೆ ಬಳಿಕ ಆಯೋಜಿಸಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಎಐಸಿಸಿ ಸದಸ್ಯ ಆನಂದ ದೇವಪ್ಪ ಮಾತನಾಡಿ, ‘ಪಕ್ಷದಿಂದ ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎಂಬುದು ಜನತೆಯ ಬೇಡಿಕೆಯಾಗಿದೆ. ಹೀಗಾದರೆ ಇಲ್ಲಿನ ಕಾಂಗ್ರೆಸ್ ಸ್ಥಾನವನ್ನು ಉಳಿಸಿಕೊಳ್ಳಬಹುದು’ ಎಂದರು.</p>.<p>ಹಿರಿಯ ಮುಖಂಡ ಶಿವರಾಜ ನರಶೆಟ್ಟಿ, ಬಾಬು ಹೊನ್ನಾನಾಯಕ್ ಮಾತನಾಡಿ, ‘ಸ್ಥಳೀಯ ಆಕಾಂಕ್ಷಿಗಳಲ್ಲಿ ಎಲ್ಲ ಸಮುದಾಯದವರು ಇದ್ದಾರೆ. ಇವರಲ್ಲಿ ಯಾರಿಗೆ ಟಿಕೆಟ್ ನೀಡಿದರೂ ಅವರ ಗೆಲುವಿಗೆ ಒಗ್ಗಟ್ಟಾಗಿ ಶ್ರಮಿಸುತ್ತೇವೆ. ಆದ್ದರಿಂದ ಹೊರಗಿನವರಿಗೆ ಮಣೆಹಾಕಿ ಇಲ್ಲಿನ ವರನ್ನು ಕಡೆಗಣಿಸಬಾರದು’ ಎಂದರು.</p>.<p>ಪಕ್ಷದ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಶಂಕರ ಜಮಾದಾರ, ಸುಧಾಕರ ಗುರ್ಜರ್ ಮಾತನಾಡಿ, ‘50 ವರ್ಷಗಳಲ್ಲಿ ಒಮ್ಮೆಯೂ ಸ್ಥಳೀಯರಿಗೆ ಟಿಕೆಟ್ ನೀಡಿಲ್ಲ. ಇದರಿಂದ ಇಲ್ಲಿ ಅರ್ಹ ಅಭ್ಯರ್ಥಿಗಳು ಇಲ್ಲ ಎಂಬ ತಪ್ಪು ಸಂದೇಶ ಹೋಗುತ್ತಿದೆ. ಈ ಬಗ್ಗೆ ಪಕ್ಷದ ವರಿಷ್ಠರು ಯೋಗ್ಯ ನಿರ್ಣಯ ತೆಗೆದುಕೊಳ್ಳಬೇಕು’ ಎಂದರು.</p>.<p>ಯಸ್ರಬ್ ಅಲಿ ಖಾದ್ರಿ, ಇಜಾಜ್ ಲಾತೂರೆ, ಶಶಿಕಾಂತ ಗುರಣ್ಣ, ಸಂದೀಪ ಬುಯೆ, ಆನಂದ ಹೊನ್ನಾನಾಯಕ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>