<p><strong>ಕಮಲನಗರ:</strong> ಸಾರ್ವಜನಿಕರು ಜವಾಬ್ದಾರಿ ಅರಿತುಕೊಂಡು ಕೊರೊನಾ ತಡೆಗೆ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕಮಲನಗರ ಪಿಎಸ್ಐ ನಂದಿನಿ ಎಸ್. ತಿಳಿಸಿದರು.</p>.<p>ತಾಲ್ಲೂಕಿನ ಕಮಲನಗರ ಪಟ್ಟಣ, ಸೋನಾಳ, ಸೋನಾಳವಾಡಿ, ಹುಲಸೂರು, ಚಂದನವಾಡಿ ವಿವಿಧ ಗ್ರಾಮಗಳಿಗೆ ಶುಕ್ರವಾರ ಭೇಟಿ ನೀಡಿ, ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು.</p>.<p>ಕೊರೊನಾ ವಾರಿಯರ್ಸ್ಗಳು ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ನಿರಂತರವಾಗಿ ಪರಿಶ್ರಮ ಪಡುತ್ತಿದ್ದಾರೆ. ಹಗಲಿರುಳೆನ್ನದೇ ಸಾರ್ವಜನಿಕರ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಅವರೆಲ್ಲರ ಕಾರ್ಯ ಶ್ಲಾಘನೀಯ ಎಂದರು.</p>.<p>ಪಿಡಿಒ ಧೋಂಡಿಬಾ ಬಾಮಣೆ, ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜಕುಮಾರ ಅಲಬಿದೆ, ಡಿಇಒ ಅಂಕುಶ, ಗಣಪತಿ, ರಾಜಕುಮಾರ, ಎಎಸ್ಐ ಚಿದಾನಂದ ಮಠ, ದತ್ತಾ, ಉಮಾಜಿ, ಎಸ್ಬಿ ರಾಜಕುಮಾರ ಸೋನಾರೆ, ವೈಜನಾಥ, ಪರಶುರಾಮ, ಸಂತೋಷ ಕಪಲಾಪುರೆ, ಮಲ್ಲಿಕಾರ್ಜುನ ಇದ್ದರು.</p>.<p class="Subhead">ಕೋವಿಡ್ ಜಾಗೃತಿ ಕೊರೊನಾ: ಸೋಂಕು ನಿಯಂತ್ರಿಸಲು ಪ್ರತಿಯೊಬ್ಬರೂ ಮನೆಯಲ್ಲಿಯೇ ಉಳಿಯಬೇಕು. ಅಗತ್ಯವಿದ್ದಾಗ ಮಾಸ್ಕ್ ಧರಿಸಿ ಹೊರಬಂದು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಯುವಮುಖಂಡ ಅರುಣ ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಕೋಟಗ್ಯಾಳ ಗ್ರಾಮದಲ್ಲಿ ಗುರುವಾರ ಕೋವಿಡ್ ಜನ ಜಾಗೃತಿ ಮೂಡಿಸುವ ಜೊತೆ ಉಚಿತ ಮಾಸ್ಕ್ ವಿತರಿಸಿ ಅವರು ಮಾತನಾಡಿದರು.</p>.<p>ದಿನೇಶ ಪಾಟೀಲ, ಬಾಲಾಜಿ ಪಾಟೀಲ, ರೋಹಿತ ಧನಾಶ್ರೀ, ಶಿವಕುಮಾರ ಬೆಳವಡಿಗೆ, ಸಂಜು ಬಿರಾದಾರ ಇದ್ದರು.</p>.<p class="Briefhead">ಜನ ಸಂಚಾರ ಸ್ತಬ್ಧ</p>.<p>ಬಸವಕಲ್ಯಾಣ: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸರ್ಕಾರ ಕೈಗೊಂಡಿರುವ ನಿಯಮಗಳಿಗೆ ಇಲ್ಲಿ ಶುಕ್ರವಾರವೂ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಮುಖ್ಯ ಮಾರುಕಟ್ಟೆ ಒಳಗೊಂಡು ಎಲ್ಲೆಡೆಯ ಅಂಗಡಿಗಳು ಬಂದ್ ಇದ್ದವು.</p>.<p>ಬೆಳಿಗ್ಗೆ 10 ಗಂಟೆಯವರೆಗೆ ಕಿರಾಣಿ, ಮೆಡಿಕಲ್ ಒಳಗೊಂಡು ಅಗತ್ಯ ವಸ್ತುಗಳ ಅಂಗಡಿಗಳಷ್ಟೇ ತೆರೆದಿದ್ದವು. ಹೋಟಲ್ಗಳಲ್ಲಿ ಊಟ, ಉಪಾಹಾರದ ಪಾರ್ಸೆಲ್ ನೀಡಲಾಯಿತು. ಆದರೂ ಸಣ್ಣಪುಟ್ಟ ಚಹಾ ಅಂಗಡಿಗಳು, ಪಾನ್ಬೀಡಾ ಡಬ್ಬಾಗಳು ಮಾತ್ರ ಸಂಪೂರ್ಣ ಬಂದ್ ಇದ್ದವು.</p>.<p>ಬಸ್ ಹಾಗೂ ಇತರೆ ವಾಹನಗಳ ಸಂಚಾರ ನಿಷೇಧಿಸಿದ ಕಾರಣ ಅಗತ್ಯ ಇದ್ದವರು ಮಾತ್ರ ವಾಹನ ತೆಗೆದುಕೊಂಡು ಹೋದರು. ಹೀಗಾಗಿ ಯಾವಾಗಲೂ ಜನಜಂಗುಳಿಯಿಂದ ಕೂಡಿರುತ್ತಿದ್ದ ಮುಖ್ಯ ರಸ್ತೆ ಹಾಗೂ ಇತರೆ ರಸ್ತೆಗಳು ಕೂಡ ಶುಕ್ರವಾರ ಓಡಾಡುವ ಜನರೇ ಇಲ್ಲದೇ ಬಿಕೋ ಎನ್ನುತ್ತಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲನಗರ:</strong> ಸಾರ್ವಜನಿಕರು ಜವಾಬ್ದಾರಿ ಅರಿತುಕೊಂಡು ಕೊರೊನಾ ತಡೆಗೆ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕಮಲನಗರ ಪಿಎಸ್ಐ ನಂದಿನಿ ಎಸ್. ತಿಳಿಸಿದರು.</p>.<p>ತಾಲ್ಲೂಕಿನ ಕಮಲನಗರ ಪಟ್ಟಣ, ಸೋನಾಳ, ಸೋನಾಳವಾಡಿ, ಹುಲಸೂರು, ಚಂದನವಾಡಿ ವಿವಿಧ ಗ್ರಾಮಗಳಿಗೆ ಶುಕ್ರವಾರ ಭೇಟಿ ನೀಡಿ, ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು.</p>.<p>ಕೊರೊನಾ ವಾರಿಯರ್ಸ್ಗಳು ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ನಿರಂತರವಾಗಿ ಪರಿಶ್ರಮ ಪಡುತ್ತಿದ್ದಾರೆ. ಹಗಲಿರುಳೆನ್ನದೇ ಸಾರ್ವಜನಿಕರ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಅವರೆಲ್ಲರ ಕಾರ್ಯ ಶ್ಲಾಘನೀಯ ಎಂದರು.</p>.<p>ಪಿಡಿಒ ಧೋಂಡಿಬಾ ಬಾಮಣೆ, ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜಕುಮಾರ ಅಲಬಿದೆ, ಡಿಇಒ ಅಂಕುಶ, ಗಣಪತಿ, ರಾಜಕುಮಾರ, ಎಎಸ್ಐ ಚಿದಾನಂದ ಮಠ, ದತ್ತಾ, ಉಮಾಜಿ, ಎಸ್ಬಿ ರಾಜಕುಮಾರ ಸೋನಾರೆ, ವೈಜನಾಥ, ಪರಶುರಾಮ, ಸಂತೋಷ ಕಪಲಾಪುರೆ, ಮಲ್ಲಿಕಾರ್ಜುನ ಇದ್ದರು.</p>.<p class="Subhead">ಕೋವಿಡ್ ಜಾಗೃತಿ ಕೊರೊನಾ: ಸೋಂಕು ನಿಯಂತ್ರಿಸಲು ಪ್ರತಿಯೊಬ್ಬರೂ ಮನೆಯಲ್ಲಿಯೇ ಉಳಿಯಬೇಕು. ಅಗತ್ಯವಿದ್ದಾಗ ಮಾಸ್ಕ್ ಧರಿಸಿ ಹೊರಬಂದು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಯುವಮುಖಂಡ ಅರುಣ ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಕೋಟಗ್ಯಾಳ ಗ್ರಾಮದಲ್ಲಿ ಗುರುವಾರ ಕೋವಿಡ್ ಜನ ಜಾಗೃತಿ ಮೂಡಿಸುವ ಜೊತೆ ಉಚಿತ ಮಾಸ್ಕ್ ವಿತರಿಸಿ ಅವರು ಮಾತನಾಡಿದರು.</p>.<p>ದಿನೇಶ ಪಾಟೀಲ, ಬಾಲಾಜಿ ಪಾಟೀಲ, ರೋಹಿತ ಧನಾಶ್ರೀ, ಶಿವಕುಮಾರ ಬೆಳವಡಿಗೆ, ಸಂಜು ಬಿರಾದಾರ ಇದ್ದರು.</p>.<p class="Briefhead">ಜನ ಸಂಚಾರ ಸ್ತಬ್ಧ</p>.<p>ಬಸವಕಲ್ಯಾಣ: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸರ್ಕಾರ ಕೈಗೊಂಡಿರುವ ನಿಯಮಗಳಿಗೆ ಇಲ್ಲಿ ಶುಕ್ರವಾರವೂ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಮುಖ್ಯ ಮಾರುಕಟ್ಟೆ ಒಳಗೊಂಡು ಎಲ್ಲೆಡೆಯ ಅಂಗಡಿಗಳು ಬಂದ್ ಇದ್ದವು.</p>.<p>ಬೆಳಿಗ್ಗೆ 10 ಗಂಟೆಯವರೆಗೆ ಕಿರಾಣಿ, ಮೆಡಿಕಲ್ ಒಳಗೊಂಡು ಅಗತ್ಯ ವಸ್ತುಗಳ ಅಂಗಡಿಗಳಷ್ಟೇ ತೆರೆದಿದ್ದವು. ಹೋಟಲ್ಗಳಲ್ಲಿ ಊಟ, ಉಪಾಹಾರದ ಪಾರ್ಸೆಲ್ ನೀಡಲಾಯಿತು. ಆದರೂ ಸಣ್ಣಪುಟ್ಟ ಚಹಾ ಅಂಗಡಿಗಳು, ಪಾನ್ಬೀಡಾ ಡಬ್ಬಾಗಳು ಮಾತ್ರ ಸಂಪೂರ್ಣ ಬಂದ್ ಇದ್ದವು.</p>.<p>ಬಸ್ ಹಾಗೂ ಇತರೆ ವಾಹನಗಳ ಸಂಚಾರ ನಿಷೇಧಿಸಿದ ಕಾರಣ ಅಗತ್ಯ ಇದ್ದವರು ಮಾತ್ರ ವಾಹನ ತೆಗೆದುಕೊಂಡು ಹೋದರು. ಹೀಗಾಗಿ ಯಾವಾಗಲೂ ಜನಜಂಗುಳಿಯಿಂದ ಕೂಡಿರುತ್ತಿದ್ದ ಮುಖ್ಯ ರಸ್ತೆ ಹಾಗೂ ಇತರೆ ರಸ್ತೆಗಳು ಕೂಡ ಶುಕ್ರವಾರ ಓಡಾಡುವ ಜನರೇ ಇಲ್ಲದೇ ಬಿಕೋ ಎನ್ನುತ್ತಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>