ಮಿಡತೆ ಕುರಿತು ಭಯ ಬೇಡ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಮಲ್ಲಿಕಾರ್ಜುನ್

ಚಿಟಗುಪ್ಪ: ಪಟ್ಟಣದಲ್ಲಿ ಈಚೆಗೆ ಮಿಡತೆಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದಿದ್ದು, ರೈತರ ಆತಂಕಕ್ಕೆ ಕಾರಣವಾಗಿದೆ.
‘ಅವು ಹೊರಗಡೆಯಿಂದ ಬಂದಿಲ್ಲ. ಸ್ಥಳೀಯ ಮಿಡತೆಗಳು. ರೈತರು ಭಯ ಪಡುವ ಅಗತ್ಯ ಇಲ್ಲ’ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಮಲ್ಲಿಕಾರ್ಜುನ್ ಅವರು ತಿಳಿಸಿದ್ದಾರೆ.
‘ಮಳೆ ಹಾಗೂ ವಾತಾವರಣದಲ್ಲಿ ಉಂಟಾಗುವ ಬದಲಾವಣೆ ಕಾರಣಕ್ಕೆ ಸ್ಥಳೀಯ ಮಿಡತೆಗಳು ಎಲ್ಲೆಡೆ ಕಂಡು ಬರುತ್ತವೆ. ಇದು ಸಹಜ. ಕೆಲವು ಗಂಟೆಗಳ ನಂತರ ಅವು ಬೇರೆಡೆಗೆ ಹೋಗುತ್ತವೆ’ ಎಂದರು.
‘ಹೊರಗಿನಿಂದ ಬಂದ ಮಿಡತೆಗಳು ಹಗಲಿನಲ್ಲಿ ಅದರಲ್ಲೂ ಮುಖ್ಯವಾಗಿ ಸಂಜೆ 4 ರಿಂದ 7 ಗಂಟೆಯ ಅವಧಿಯಲ್ಲಿ ಹೊಲ, ಗದ್ದೆಗಳಿಗೆ ದಾಳಿ ಮಾಡಿ ಹಸಿರು ಎಲೆ ತಿನ್ನುತ್ತವೆ. 7 ಗಂಟೆಯ ಬಳಿಕ ಮರಗಳ ಮೇಲೆ ಕುಳಿತು ವಿಶ್ರಾಂತಿ ಪಡೆಯುತ್ತವೆ. ಅವುಗಳನ್ನು ಸಾಯಿಸಲು ರಾತ್ರಿಯೇ ಕಾರ್ಯಾಚರಣೆ ನಡೆಸಬೇಕಾಗುತ್ತದೆ. ಡ್ರೋಣ್, ಟ್ರ್ಯಾಕ್ಟರ್ನಲ್ಲಿ ಅಳವಡಿಸಿದ ಜೆಟ್ ಸ್ಪ್ರೇಯರ್ಗಳ ಮೂಲಕ ಕೀಟನಾಶಕ ಸಿಂಪಡಿಸಬೇಕಾಗುತ್ತದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.