<p><strong>ಕಮಲನಗರ:</strong> ‘ಮೇ 7ರಂದು ನಡೆಯಲಿರುವ ಬೀದರ್ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ನನ್ನನ್ನು ಆಶೀರ್ವದಿಸಬೇಕು’ ಎಂದು ಪಕ್ಷದ ಅಭ್ಯರ್ಥಿ ಸಾಗರ ಖಂಡ್ರೆ ಮನವಿ ಮಾಡಿದರು.</p>.<p>ಪಟ್ಟಣದ ಬಸವ ಫಂಕ್ಷನ್ ಹಾಲ್ನಲ್ಲಿ ಶನಿವಾರ ರಾತ್ರಿ ಏರ್ಪಡಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ನಿಮ್ಮ ಸೇವೆ ಮಾಡಲು ನನಗೆ ಒಂದು ಅವಕಾಶ ಮಾಡಿಕೊಡಿ. ನಾನು ಸದಾ ನಿಮ್ಮ ಕಷ್ಟ, ಸುಖದಲ್ಲಿ ಭಾಗಿಯಾಗಿರುತ್ತೇನೆ. ನೀವು ಕೊಡುವ ಅವಕಾಶವನ್ನು ಬಳಸಿಕೊಂಡು ಪ್ರಾಮಾಣಿಕತೆಯಿಂದ, ಶ್ರದ್ಧೆಯಿಂದ ಕೆಲಸ ಮಾಡಿ ನಂಬಿಕೆ ಉಳಿಸಿಕೊಳ್ಳುತ್ತೇನೆ’ ಎಂದು ಹೇಳಿದರು.</p>.<p>‘ಹಿಂದಿನ ಅವಧಿಯಲ್ಲಿ ಬಿಜೆಪಿಯಿಂದ ಭಗವಂತ ಖೂಬಾ ಸಂಸದರಾಗಿ ಆಯ್ಕೆಯಾಗಿ ಬಂದರೂ ಈ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಇಲ್ಲಿಯ ಪರಿಸ್ಥಿತಿ ನೋಡಿದರೆ ರೈತರ ಬಗ್ಗೆ ಕಾಳಜಿ ಇಲ್ಲದ ಸಂಸದರಾಗಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಬೂತ್ ಮಟ್ಟದಿಂದ ಕೆಲಸ ಮಾಡಿ ನನ್ನನ್ನು ಗೆಲ್ಲಿಸುವ ಮೂಲಕ ದೆಹಲಿಗೆ ಕಳುಹಿಸಿಕೊಡಬೇಕು’ ಎಂದು ಮನವಿ ಮಾಡಿದರು.</p>.<p>‘ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು 5 ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಈಗ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ಪಕ್ಷ ದೇಶದ ಜನತೆಗೆ ನೀಡಿರುವ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ಔರಾದ್ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆನಂದ ಚವ್ಹಾಣ ಮಾತನಾಡಿದರು.</p>.<p>ಔರಾದ್ ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ ಹಲಬುರ್ಗೆ, ಭಾಲ್ಕಿ ತಾಲ್ಲೂಕು ಅಧ್ಯಕ್ಷ ಹಣಮಂತ ಚವ್ಹಾಣ, ಗಂಗಾಧರ ಮಜಗೆ, ಮಲ್ಲಿಕಾರ್ಜುನ ಪಾಟೀಲ್, ವೆಂಕಟರಾವ ಶಿಂಧೆ, ಪ್ರವೀಣ ಪಾಟೀಲ್, ಸಂತೋಷ ಬಿರಾದಾರ, ಪ್ರವೀಣ ಕದಂ, ಶಾಂತಕುಮಾರ ಬಿರಾದಾರ ಹಾಗೂ ಕಾರ್ಯಕರ್ತರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲನಗರ:</strong> ‘ಮೇ 7ರಂದು ನಡೆಯಲಿರುವ ಬೀದರ್ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ನನ್ನನ್ನು ಆಶೀರ್ವದಿಸಬೇಕು’ ಎಂದು ಪಕ್ಷದ ಅಭ್ಯರ್ಥಿ ಸಾಗರ ಖಂಡ್ರೆ ಮನವಿ ಮಾಡಿದರು.</p>.<p>ಪಟ್ಟಣದ ಬಸವ ಫಂಕ್ಷನ್ ಹಾಲ್ನಲ್ಲಿ ಶನಿವಾರ ರಾತ್ರಿ ಏರ್ಪಡಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ನಿಮ್ಮ ಸೇವೆ ಮಾಡಲು ನನಗೆ ಒಂದು ಅವಕಾಶ ಮಾಡಿಕೊಡಿ. ನಾನು ಸದಾ ನಿಮ್ಮ ಕಷ್ಟ, ಸುಖದಲ್ಲಿ ಭಾಗಿಯಾಗಿರುತ್ತೇನೆ. ನೀವು ಕೊಡುವ ಅವಕಾಶವನ್ನು ಬಳಸಿಕೊಂಡು ಪ್ರಾಮಾಣಿಕತೆಯಿಂದ, ಶ್ರದ್ಧೆಯಿಂದ ಕೆಲಸ ಮಾಡಿ ನಂಬಿಕೆ ಉಳಿಸಿಕೊಳ್ಳುತ್ತೇನೆ’ ಎಂದು ಹೇಳಿದರು.</p>.<p>‘ಹಿಂದಿನ ಅವಧಿಯಲ್ಲಿ ಬಿಜೆಪಿಯಿಂದ ಭಗವಂತ ಖೂಬಾ ಸಂಸದರಾಗಿ ಆಯ್ಕೆಯಾಗಿ ಬಂದರೂ ಈ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಇಲ್ಲಿಯ ಪರಿಸ್ಥಿತಿ ನೋಡಿದರೆ ರೈತರ ಬಗ್ಗೆ ಕಾಳಜಿ ಇಲ್ಲದ ಸಂಸದರಾಗಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಬೂತ್ ಮಟ್ಟದಿಂದ ಕೆಲಸ ಮಾಡಿ ನನ್ನನ್ನು ಗೆಲ್ಲಿಸುವ ಮೂಲಕ ದೆಹಲಿಗೆ ಕಳುಹಿಸಿಕೊಡಬೇಕು’ ಎಂದು ಮನವಿ ಮಾಡಿದರು.</p>.<p>‘ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು 5 ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಈಗ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ಪಕ್ಷ ದೇಶದ ಜನತೆಗೆ ನೀಡಿರುವ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ಔರಾದ್ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆನಂದ ಚವ್ಹಾಣ ಮಾತನಾಡಿದರು.</p>.<p>ಔರಾದ್ ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ ಹಲಬುರ್ಗೆ, ಭಾಲ್ಕಿ ತಾಲ್ಲೂಕು ಅಧ್ಯಕ್ಷ ಹಣಮಂತ ಚವ್ಹಾಣ, ಗಂಗಾಧರ ಮಜಗೆ, ಮಲ್ಲಿಕಾರ್ಜುನ ಪಾಟೀಲ್, ವೆಂಕಟರಾವ ಶಿಂಧೆ, ಪ್ರವೀಣ ಪಾಟೀಲ್, ಸಂತೋಷ ಬಿರಾದಾರ, ಪ್ರವೀಣ ಕದಂ, ಶಾಂತಕುಮಾರ ಬಿರಾದಾರ ಹಾಗೂ ಕಾರ್ಯಕರ್ತರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>