ಪಟ್ಟಣದ ಅಮರೇಶ್ವರ ಕಾಲೇಜಿನಲ್ಲಿ ತರಬೇತಿ ವ್ಯವಸ್ಥೆ ಮಾಡಲಾಗಿದೆ. ಬುಧವಾರ 570 ಹಾಗೂ ಗುರುವಾರ 580 ಅಧಿಕಾರಿಗಳಿಗೆ ತರಬೇತಿ ನೀಡಲಾಯಿತು. ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಭೇಟಿ ನೀಡಿ, ‘ಚುನಾವಣಾ ಆಯೋಗ ನೀಡಿದ ಕೈಪಿಡಿ ಸರಿಯಾಗಿ ಓದಿದರೆ ನಿಮಗೆ ಎಲ್ಲವೂ ಅರ್ಥವಾಗುತ್ತದೆ. ಚುನಾವಣೆ ಎಂದರೆ ಸೂಕ್ಷ್ಮ ಕೆಲಸ. ಹೀಗಾಗಿ ಮೈಯೆಲ್ಲಾ ಕಣ್ಣಾಗಿ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.