<p><strong>ಬೀದರ್:</strong> ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತದ (ಕೆಬಿಜೆಎನ್ಎಲ್) ಭೀಮರಾಯನಗುಡಿ ಕಾಲುವೆ ವಲಯ–1ರ ಮುಖ್ಯ ಎಂಜಿನಿಯರ್ ಪ್ರೇಮ್ ಸಿಂಗ್ ರಾಠೋಡ್ ಅವರಿಗೆ ಸೇರಿದ ನಾಲ್ಕು ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಏಕಕಾಲಕ್ಕೆ ದಾಳಿ ನಡೆಸಿ, ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ ಹಚ್ಚಿದ್ದಾರೆ.</p>.<p>ಅವರ ಒಟ್ಟು ಸೇವಾವಧಿಯಲ್ಲಿ ಗಳಿಸಿದ ಆಸ್ತಿಗಿಂತ 200 ಪಟ್ಟು ಅಧಿಕ ಆಸ್ತಿ ದಾಳಿ ವೇಳೆ ಪತ್ತೆಯಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.</p>.<p>ಬೀದರ್ನ ಶಿವನಗರ ದಕ್ಷಿಣದ ಮನೆ, ಬೀದರ್ ತಾಲ್ಲೂಕಿನ ಬಗದಲ್ ತಾಂಡಾದ ಫಾರ್ಮ್ ಹೌಸ್, ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕಿನ ಭೀಮರಾಯನಗುಡಿಯ ಮನೆ ಹಾಗೂ ಕಚೇರಿಯಲ್ಲಿ ಶೋಧ ಕೈಗೊಳ್ಳಲಾಗಿದೆ.</p>.<p>ಬೀದರ್ನ ಶಿವನಗರ ದಕ್ಷಿಣದಲ್ಲಿ ಸುಮಾರು ಒಂದು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಮನೆ, ಬೀದರ್ ತಾಲ್ಲೂಕಿನ ಬಗದಲ್ ತಾಂಡಾ ಸಮೀಪ 20 ಎಕರೆ ಜಮೀನು, ₹50 ಲಕ್ಷದ ಠೇವಣಿ, ವಿವಿಧ ಬ್ಯಾಂಕ್ ಖಾತೆಗಳಲ್ಲಿ ₹50 ಲಕ್ಷ, ಬೀದರ್ ಹಾಗೂ ತೆಲಂಗಾಣದ ಜಹೀರಾಬಾದ್ನಲ್ಲಿ ಒಟ್ಟು ನಾಲ್ಕು ನಿವೇಶನಗಳಿರುವುದು ಕಾರ್ಯಾಚರಣೆಯಿಂದ ಗೊತ್ತಾಗಿದೆ.</p>.<p>ಕಲಬುರಗಿ ಲೋಕಾಯುಕ್ತ ಎಸ್ಪಿ ಸಿದ್ದರಾಜು ಸಿ., ಬೀದರ್ ಡಿವೈಎಸ್ಪಿ ಹನುಮಂತರಾಯ ನೇತೃತ್ವದಲ್ಲಿ ಈ ದಾಳಿ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತದ (ಕೆಬಿಜೆಎನ್ಎಲ್) ಭೀಮರಾಯನಗುಡಿ ಕಾಲುವೆ ವಲಯ–1ರ ಮುಖ್ಯ ಎಂಜಿನಿಯರ್ ಪ್ರೇಮ್ ಸಿಂಗ್ ರಾಠೋಡ್ ಅವರಿಗೆ ಸೇರಿದ ನಾಲ್ಕು ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಏಕಕಾಲಕ್ಕೆ ದಾಳಿ ನಡೆಸಿ, ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ ಹಚ್ಚಿದ್ದಾರೆ.</p>.<p>ಅವರ ಒಟ್ಟು ಸೇವಾವಧಿಯಲ್ಲಿ ಗಳಿಸಿದ ಆಸ್ತಿಗಿಂತ 200 ಪಟ್ಟು ಅಧಿಕ ಆಸ್ತಿ ದಾಳಿ ವೇಳೆ ಪತ್ತೆಯಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.</p>.<p>ಬೀದರ್ನ ಶಿವನಗರ ದಕ್ಷಿಣದ ಮನೆ, ಬೀದರ್ ತಾಲ್ಲೂಕಿನ ಬಗದಲ್ ತಾಂಡಾದ ಫಾರ್ಮ್ ಹೌಸ್, ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕಿನ ಭೀಮರಾಯನಗುಡಿಯ ಮನೆ ಹಾಗೂ ಕಚೇರಿಯಲ್ಲಿ ಶೋಧ ಕೈಗೊಳ್ಳಲಾಗಿದೆ.</p>.<p>ಬೀದರ್ನ ಶಿವನಗರ ದಕ್ಷಿಣದಲ್ಲಿ ಸುಮಾರು ಒಂದು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಮನೆ, ಬೀದರ್ ತಾಲ್ಲೂಕಿನ ಬಗದಲ್ ತಾಂಡಾ ಸಮೀಪ 20 ಎಕರೆ ಜಮೀನು, ₹50 ಲಕ್ಷದ ಠೇವಣಿ, ವಿವಿಧ ಬ್ಯಾಂಕ್ ಖಾತೆಗಳಲ್ಲಿ ₹50 ಲಕ್ಷ, ಬೀದರ್ ಹಾಗೂ ತೆಲಂಗಾಣದ ಜಹೀರಾಬಾದ್ನಲ್ಲಿ ಒಟ್ಟು ನಾಲ್ಕು ನಿವೇಶನಗಳಿರುವುದು ಕಾರ್ಯಾಚರಣೆಯಿಂದ ಗೊತ್ತಾಗಿದೆ.</p>.<p>ಕಲಬುರಗಿ ಲೋಕಾಯುಕ್ತ ಎಸ್ಪಿ ಸಿದ್ದರಾಜು ಸಿ., ಬೀದರ್ ಡಿವೈಎಸ್ಪಿ ಹನುಮಂತರಾಯ ನೇತೃತ್ವದಲ್ಲಿ ಈ ದಾಳಿ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>