ನಗರ ಸಾರಿಗೆ ಬಸ್ಗಳ ಸೇವೆ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡಬೇಕಾಯಿತು. ಪ್ರಯಾಣಿಕರು
ಮ್ಯಾಕ್ಸಿ ಕ್ಯಾಬ್, ಟಂಟಂ, ಕ್ರೂಸರ್ ವಾಹನಗಳಲ್ಲಿ ಊರುಗಳಿಗೆ ತೆರಳಿದರು. ಸಾರಿಗೆ ನೌಕರರ ಮುಷ್ಕರ ಮಾಹಿತಿ ಇಲ್ಲದೇ ಬಸ್ ನಿಲ್ದಾಣಕ್ಕೆ ಬಂದಿದ್ದ ಕೆಲ ಪ್ರಯಾಣಿಕರು ಅವರ ಊರುಗಳಿಗೆ ಹೋಗಲಾಗದೆ ನಿಲ್ದಾಣದಲ್ಲೇ ನಿದ್ರೆಗೆ ಜಾರಿದ್ದರು. ಕೆಲವರು ತಮ್ಮ ಮನೆಗಳಿಗೆ ಮರಳಿ ಹೋದರು. ಕೇಂದ್ರ ಬಸ್ ನಿಲ್ದಾಣ ಒಳಗಡೆ ಖಾಸಗಿ ಬಸ್ಗಳ ನಿಲುಗಡೆಗೆ ಅವಕಾಶ ಕಲ್ಪಿಸಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.