<p><strong>ಕಮಲನಗರ</strong>: ತಾಲ್ಲೂಕಿನ ಮದನೂರು ಗ್ರಾಮದಲ್ಲಿ ಮೈಲಾರ ಮಲ್ಲಣ್ಣ ದೇವಸ್ಥಾನ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ನಡೆಯಿತು.</p>.<p>ಸೋನಾಳ ಗ್ರಾಮದ ಪುರೋಹಿತ ಅಶೋಕ್ ಜೋಶಿ, ಮದನೂರ ಗ್ರಾಮದ ಶಿವಾನಂದಸ್ವಾಮಿ ಹಾಗೂ ಗ್ರಾಮದ ಎಲ್ಲ ಸ್ವಾಮೀಜಿಗಳ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು.</p>.<p>ಮೈಲಾರ ಮಲ್ಲಣ್ಣ ದೇವಸ್ಥಾನದ ಗೋಪುರಕ್ಕೆ ಕಳಸಾರೋಹಣ ಹಾಗೂ ಮೂರ್ತಿ ಪ್ರತಿಷ್ಠಾಪನೆ ಮಾಡಲಾಯಿತು.</p>.<p>ವಾದ್ಯಗಳೊಂದಿಗೆ ಕುಂಭಪೂಜೆ ಹಾಗೂ ಮೆರವಣಿಗೆ ನಡೆಯಿತು. ಮಹಿಳೆಯರು, ಪುರುಷರು ಡೊಳ್ಳು ಕುಣಿತಕ್ಕೆ ಹೆಜ್ಜೆ ಹಾಕಿದರು.</p>.<p><strong>ಹೋಮ–ಹವನ:</strong>ದೇವರ ಪೂಜೆ, ಹೋಮ, ದುರ್ಗಾ ಹೋಮ, ಚಂಡಿ ಹೋಮ, ಸಂಕ್ಷಿಪ್ತ ಪೂರ್ಣಾಹುತಿ ಸೇರಿದಂತೆ ವಿವಿಧ ರೀತಿಯ ವಿಶೇಷ ಪೂಜಾ ಕಾರ್ಯ, ಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ನಡೆಯಿತು.</p>.<p><strong>ಪ್ರಾಣ ಪ್ರತಿಷ್ಠಾನ ಪೂಜೆ:</strong> ವಿವಿಧ ಶ್ರೀಗಳ ಸಾನ್ನಿಧ್ಯದಲ್ಲಿ ಸುಪ್ರಭಾತ, ದೇವತಾ ಉದ್ದಾಪನೆ, ದೇವತಾ ಪೂಜೆಯೊಂದಿಗೆ ಗ್ರಾಮ ದೇವತೆ ಹಾಗೂ ನವಗ್ರಹ ಪ್ರಾಣ ಪ್ರತಿಷ್ಠಾಪನೆ ನಡೆಯಿತು.</p>.<p>ಗ್ರಾಮಸ್ಥರಾದ ಶಶಿಕಾಂತ್ ಪಾಟೀಲ, ಗಾಳಪ್ಪ ಬಳತೆ, ಅಶೋಕ ಪಾಟೀಲ, ಸಂತೋಷ ಬಿರಾದಾರ ಹಾಗೂ ಬಾಲಾಜಿ ಬಿರಾದಾರ, ವೀರೇಶ ಬರ್ಗೆ ಹಾಗೂ ವಿಜಯಕುಮಾರ್ ಅವರು ಈ ವೇಳೆ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಮಲನಗರ</strong>: ತಾಲ್ಲೂಕಿನ ಮದನೂರು ಗ್ರಾಮದಲ್ಲಿ ಮೈಲಾರ ಮಲ್ಲಣ್ಣ ದೇವಸ್ಥಾನ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ನಡೆಯಿತು.</p>.<p>ಸೋನಾಳ ಗ್ರಾಮದ ಪುರೋಹಿತ ಅಶೋಕ್ ಜೋಶಿ, ಮದನೂರ ಗ್ರಾಮದ ಶಿವಾನಂದಸ್ವಾಮಿ ಹಾಗೂ ಗ್ರಾಮದ ಎಲ್ಲ ಸ್ವಾಮೀಜಿಗಳ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು.</p>.<p>ಮೈಲಾರ ಮಲ್ಲಣ್ಣ ದೇವಸ್ಥಾನದ ಗೋಪುರಕ್ಕೆ ಕಳಸಾರೋಹಣ ಹಾಗೂ ಮೂರ್ತಿ ಪ್ರತಿಷ್ಠಾಪನೆ ಮಾಡಲಾಯಿತು.</p>.<p>ವಾದ್ಯಗಳೊಂದಿಗೆ ಕುಂಭಪೂಜೆ ಹಾಗೂ ಮೆರವಣಿಗೆ ನಡೆಯಿತು. ಮಹಿಳೆಯರು, ಪುರುಷರು ಡೊಳ್ಳು ಕುಣಿತಕ್ಕೆ ಹೆಜ್ಜೆ ಹಾಕಿದರು.</p>.<p><strong>ಹೋಮ–ಹವನ:</strong>ದೇವರ ಪೂಜೆ, ಹೋಮ, ದುರ್ಗಾ ಹೋಮ, ಚಂಡಿ ಹೋಮ, ಸಂಕ್ಷಿಪ್ತ ಪೂರ್ಣಾಹುತಿ ಸೇರಿದಂತೆ ವಿವಿಧ ರೀತಿಯ ವಿಶೇಷ ಪೂಜಾ ಕಾರ್ಯ, ಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ನಡೆಯಿತು.</p>.<p><strong>ಪ್ರಾಣ ಪ್ರತಿಷ್ಠಾನ ಪೂಜೆ:</strong> ವಿವಿಧ ಶ್ರೀಗಳ ಸಾನ್ನಿಧ್ಯದಲ್ಲಿ ಸುಪ್ರಭಾತ, ದೇವತಾ ಉದ್ದಾಪನೆ, ದೇವತಾ ಪೂಜೆಯೊಂದಿಗೆ ಗ್ರಾಮ ದೇವತೆ ಹಾಗೂ ನವಗ್ರಹ ಪ್ರಾಣ ಪ್ರತಿಷ್ಠಾಪನೆ ನಡೆಯಿತು.</p>.<p>ಗ್ರಾಮಸ್ಥರಾದ ಶಶಿಕಾಂತ್ ಪಾಟೀಲ, ಗಾಳಪ್ಪ ಬಳತೆ, ಅಶೋಕ ಪಾಟೀಲ, ಸಂತೋಷ ಬಿರಾದಾರ ಹಾಗೂ ಬಾಲಾಜಿ ಬಿರಾದಾರ, ವೀರೇಶ ಬರ್ಗೆ ಹಾಗೂ ವಿಜಯಕುಮಾರ್ ಅವರು ಈ ವೇಳೆ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>