ಬೀದರ್: ‘ರಾಯಚೂರಿನ ನವೋದಯ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವಿನ ಪ್ರಕರಣದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಲಾಗಿದೆ’ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ಹೇಳಿದರು.
‘ಈಗಾಗಲೇ ರಾಯಚೂರು ಪೊಲೀಸರಿಂದ ಪ್ರಕರಣದ ಮಾಹಿತಿ ಪಡೆದುಕೊಂಡಿದ್ದೇನೆ. ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿರಲಿ, ಎಲ್ಲೇ ಇರಲಿ ಅವರನ್ನು ಪತ್ತೆ ಹಚ್ಚಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ನಗರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.