<p><strong>ಬೀದರ್</strong>: ‘ತೆಲಂಗಾಣದ ಮಂದಾಕೃಷ್ಣ ಮಾದಿಗ ಅಲ್ಲ, ಸ್ವತಃ ಪ್ರಧಾನಿ ನರೇಂದ್ರ ಮೋದಿ ಬಂದರೂ ಮಾದಿಗರು ಬಿಜೆಪಿಗೆ ಮತ ಹಾಕುವುದಿಲ್ಲ’ ಎಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಮುಖಂಡ ಚಂದ್ರಕಾಂತ ಹಿಪ್ಪಳಗಾಂವ ಹೇಳಿದರು.</p>.<p>ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಾದಿಗ ಸಮಾಜಕ್ಕೆ ಬಿಜೆಪಿ ಏನೂ ಕೊಡುಗೆ ಕೊಟ್ಟಿಲ್ಲ. ಕಟ್ಟಿಕೊಂಡ ಹೆಂಡತಿಗೆ ಮೋದಿಯವರು ನ್ಯಾಯ ಕೊಟ್ಟಿಲ್ಲ. ಮಾದಿಗರಿಗೆ ಎಲ್ಲಿ ನ್ಯಾಯ ಕೊಡಿಸುತ್ತಾರೆ’ ಎಂದು ಪ್ರಶ್ನಿಸಿದರು.</p>.<p>ಸಮಿತಿ ಮುಖಂಡ ವೆಂಕಟರಾವ್ ವಿಠಲರಾವ್ ಶಿಂಧೆ ಮಾತನಾಡಿ, ‘ಕೇಂದ್ರದ ಬಿಜೆಪಿ ಸರ್ಕಾರ ಸಂವಿಧಾನ ಬದಲಿಸಲು ಹುನ್ನಾರ ನಡೆಸಿದೆ. ಉನ್ನತ ಶಿಕ್ಷಣದಲ್ಲಿ ಮೀಸಲಾತಿ ರದ್ದುಪಡಿಸಿ ಖಾಸಗೀಕರಣಕ್ಕೆ ಮುಂದಾಗಿದೆ. ಹಾಗಾಗಿ ಬಿಜೆಪಿಗೆ ಈ ಸಲದ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು’ ಎಂದು ಮನವಿ ಮಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ತೆಲಂಗಾಣದ ಮಂದಾಕೃಷ್ಣ ಮಾದಿಗ ಅಲ್ಲ, ಸ್ವತಃ ಪ್ರಧಾನಿ ನರೇಂದ್ರ ಮೋದಿ ಬಂದರೂ ಮಾದಿಗರು ಬಿಜೆಪಿಗೆ ಮತ ಹಾಕುವುದಿಲ್ಲ’ ಎಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಮುಖಂಡ ಚಂದ್ರಕಾಂತ ಹಿಪ್ಪಳಗಾಂವ ಹೇಳಿದರು.</p>.<p>ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಾದಿಗ ಸಮಾಜಕ್ಕೆ ಬಿಜೆಪಿ ಏನೂ ಕೊಡುಗೆ ಕೊಟ್ಟಿಲ್ಲ. ಕಟ್ಟಿಕೊಂಡ ಹೆಂಡತಿಗೆ ಮೋದಿಯವರು ನ್ಯಾಯ ಕೊಟ್ಟಿಲ್ಲ. ಮಾದಿಗರಿಗೆ ಎಲ್ಲಿ ನ್ಯಾಯ ಕೊಡಿಸುತ್ತಾರೆ’ ಎಂದು ಪ್ರಶ್ನಿಸಿದರು.</p>.<p>ಸಮಿತಿ ಮುಖಂಡ ವೆಂಕಟರಾವ್ ವಿಠಲರಾವ್ ಶಿಂಧೆ ಮಾತನಾಡಿ, ‘ಕೇಂದ್ರದ ಬಿಜೆಪಿ ಸರ್ಕಾರ ಸಂವಿಧಾನ ಬದಲಿಸಲು ಹುನ್ನಾರ ನಡೆಸಿದೆ. ಉನ್ನತ ಶಿಕ್ಷಣದಲ್ಲಿ ಮೀಸಲಾತಿ ರದ್ದುಪಡಿಸಿ ಖಾಸಗೀಕರಣಕ್ಕೆ ಮುಂದಾಗಿದೆ. ಹಾಗಾಗಿ ಬಿಜೆಪಿಗೆ ಈ ಸಲದ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು’ ಎಂದು ಮನವಿ ಮಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>