<p><strong>ಬೀದರ್</strong>: ವಿವಿಧ ಸಂಘ ಸಂಸ್ಥೆಗಳು, ಮಠ ಮಾನ್ಯಗಳಿಂದ ಮಾ. 8ರಂದು ನಗರದಲ್ಲಿ ಮಹಾಶಿವರಾತ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿವರ ಇಂತಿದೆ.</p>.<p>ಡಾ. ಚನ್ನಬಸವ ಪಟ್ಟದ್ದೇವರ ಪ್ರಸಾದ ನಿಲಯ:</p>.<p>8ರಂದು ಬೆಳಿಗ್ಗೆ 11.30ಕ್ಕೆ ಪ್ರಸಾದ ನಿಲಯದಲ್ಲಿ ಭಾಲ್ಕಿ ಹಿರೇಮಠದ ಬಸವಲಿಂಗ ಪಟ್ಟದ್ದೇವರು, ಮಹಾಲಿಂಗ ಸ್ವಾಮೀಜಿ ಅವರು ಸಾಮೂಹಿಕ ಇಷ್ಟಲಿಂಗ ಪೂಜೆ, ಶಿವಶರಣರ ಸ್ಮರಣೋತ್ಸವ ಕಾರ್ಯಕ್ರಮ ನಡೆಸಿಕೊಡುವರು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಗುರುಬಸವ ಪಟ್ಟದ್ದೇವರು ಮನವಿ ಮಾಡಿದ್ದಾರೆ.</p>.<p><strong>ಸಿದ್ಧಾರೂಢ ಮಠ:</strong></p>.<p>ನಗರದ ಸಿದ್ಧಾರೂಢ ಮಠದಲ್ಲಿ ಮಠದ ಪೀಠಾಧಿಪತಿ ಶಿವಕುಮಾರ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಮಾ. 8 ರಂದು ಮಹಾಶಿವರಾತ್ರಿ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ 6ಕ್ಕೆ ಸಾಮೂಹಿಕ ಲಿಂಗಪೂಜೆ, ಸಿದ್ಧಾರೂಢರ ಮಹಾ ಅಭಿಷೇಕ, ಹನ್ನೆರಡು ಜ್ಯೋತಿರ್ಲಿಂಗಗಳ ಪೂಜೆ, ಪ್ರವಚನ, ಮಹಾ ಮಂಗಳಾರತಿ ನಡೆಯಲಿವೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮಠದ ಆಡಳಿತಾಧಿಕಾರಿ ಹಾವಗಿರಾವ್ ಮೈಲಾರೆ ಮನವಿ ಮಾಡಿದ್ದಾರೆ.</p>.<p><strong>ರಾಮಕೃಷ್ಣ ವಿವೇಕಾನಂದ ಆಶ್ರಮ:</strong></p>.<p>ಪಾಪನಾಶ ಸಮೀಪದ ಆಶ್ರಮದಲ್ಲಿ ಮಾರ್ಚ್ 8ರಂದು ಸಂಜೆ 6ಕ್ಕೆ ಮಹಾಶಿವರಾತ್ರಿ, ಮಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಜ್ಯೋತಿರ್ಮಯಾನಂದ ಸ್ವಾಮೀಜಿ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ವಿವಿಧ ಸಂಘ ಸಂಸ್ಥೆಗಳು, ಮಠ ಮಾನ್ಯಗಳಿಂದ ಮಾ. 8ರಂದು ನಗರದಲ್ಲಿ ಮಹಾಶಿವರಾತ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿವರ ಇಂತಿದೆ.</p>.<p>ಡಾ. ಚನ್ನಬಸವ ಪಟ್ಟದ್ದೇವರ ಪ್ರಸಾದ ನಿಲಯ:</p>.<p>8ರಂದು ಬೆಳಿಗ್ಗೆ 11.30ಕ್ಕೆ ಪ್ರಸಾದ ನಿಲಯದಲ್ಲಿ ಭಾಲ್ಕಿ ಹಿರೇಮಠದ ಬಸವಲಿಂಗ ಪಟ್ಟದ್ದೇವರು, ಮಹಾಲಿಂಗ ಸ್ವಾಮೀಜಿ ಅವರು ಸಾಮೂಹಿಕ ಇಷ್ಟಲಿಂಗ ಪೂಜೆ, ಶಿವಶರಣರ ಸ್ಮರಣೋತ್ಸವ ಕಾರ್ಯಕ್ರಮ ನಡೆಸಿಕೊಡುವರು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಗುರುಬಸವ ಪಟ್ಟದ್ದೇವರು ಮನವಿ ಮಾಡಿದ್ದಾರೆ.</p>.<p><strong>ಸಿದ್ಧಾರೂಢ ಮಠ:</strong></p>.<p>ನಗರದ ಸಿದ್ಧಾರೂಢ ಮಠದಲ್ಲಿ ಮಠದ ಪೀಠಾಧಿಪತಿ ಶಿವಕುಮಾರ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಮಾ. 8 ರಂದು ಮಹಾಶಿವರಾತ್ರಿ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ 6ಕ್ಕೆ ಸಾಮೂಹಿಕ ಲಿಂಗಪೂಜೆ, ಸಿದ್ಧಾರೂಢರ ಮಹಾ ಅಭಿಷೇಕ, ಹನ್ನೆರಡು ಜ್ಯೋತಿರ್ಲಿಂಗಗಳ ಪೂಜೆ, ಪ್ರವಚನ, ಮಹಾ ಮಂಗಳಾರತಿ ನಡೆಯಲಿವೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮಠದ ಆಡಳಿತಾಧಿಕಾರಿ ಹಾವಗಿರಾವ್ ಮೈಲಾರೆ ಮನವಿ ಮಾಡಿದ್ದಾರೆ.</p>.<p><strong>ರಾಮಕೃಷ್ಣ ವಿವೇಕಾನಂದ ಆಶ್ರಮ:</strong></p>.<p>ಪಾಪನಾಶ ಸಮೀಪದ ಆಶ್ರಮದಲ್ಲಿ ಮಾರ್ಚ್ 8ರಂದು ಸಂಜೆ 6ಕ್ಕೆ ಮಹಾಶಿವರಾತ್ರಿ, ಮಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಜ್ಯೋತಿರ್ಮಯಾನಂದ ಸ್ವಾಮೀಜಿ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>