<p><strong>ಔರಾದ್:</strong> ಮಹಾಶಿವರಾತ್ರಿ ಇಲ್ಲಿ ವಿಶಿಷ್ಟ ಹಾಗೂ ವೈವಿದ್ಯಮಯವಾಗಿ ಆಚರಿಸಲಾಗುತ್ತದೆ. ಇಲ್ಲಿಯ ಅಮರೇಶ್ವರ ದೇವಸ್ಥಾನ ಬಹಳ ಪುರಾತನ ಹಾಗೂ ವಿಶಿಷ್ಟ ಕಲೆಯಿಂದ ಕೂಡಿದೆ.</p>.<p>ಪ್ರತಿ ವರ್ಷ ಮಹಾಶಿವರಾತ್ರಿ ವೇಳೆ ಇಲ್ಲಿ ಜಾತ್ರಾ ಉತ್ಸವ ನಡೆಯುತ್ತದೆ. ಈ ದೇವಸ್ಥಾನದ ಗರ್ಭ ಗುಡಿಯಲ್ಲಿರುವ ಲಿಂಗ ಸಹಸ್ರಾರು ಭಕ್ತರನ್ನು ಆಕರ್ಷಿಸಿದೆ. ಈ ಕಾರಣಕ್ಕೆ ಶಿವರಾತ್ರಿ ವೇಳೆ ದೂರ ದೂರದ ಭಕ್ತರು ಲಿಂಗ ದರ್ಶನ ಪಡೆಯುವುದನ್ನು ರೂಢಿಸಿಕೊಂಡಿದ್ದಾರೆ.</p>.<p>ಈ ಲಿಂಗ ಹೊರ ಜಗತ್ತಿಗೆ ಗೊತ್ತಾಗಿದ್ದು ತುಂಬಾ ರೋಚಕತೆಯಿಂದ ಕೂಡಿದೆ. ಪಟ್ಟಣಕ್ಕೆ ಸಮೀಪ ಯನಗುಂದಾ ಎಂಬ ಗ್ರಾಮವೊಂದಿದೆ. ಅಲ್ಲಿಯ ಆಕಳುಗಳು ಪ್ರತಿದಿನ ಮೇಯಲು ಕಾಡಿಗೆ ಹೋಗುತ್ತಿದ್ದವು. ಹೀಗಿರುವಾಗ ಒಂದು ಆಕಳು ಕಾಡಿನಿಂದ ಮನೆಗೆ ಬಂದಾಗ ಅದರ ಕೆಚ್ಚಲಿನ ಹಾಲು ಖಾಲಿಯಾಗುತ್ತಿತ್ತು. ಇದನ್ನು ಸೂಕ್ಷ್ಮವಾಗಿ ಗಮನಿಸಿದ ರೈತ ಒಂದು ದಿನ ಆಕಳ ಹಿಂದೆ ಕಾಡಿನೊಳಗೆ ಹೋದ. ಆ ಆಕಳು ಎಂದಿನಂತೆ ಕಾಡಿನೊಳಗೆ ಹೋಗಿ ಅಲ್ಲಿಯ ಹುತ್ತಿನ ಮೇಲೆ ನಿಂತಾಗ ಹಾಲು ರಂಧ್ರದ ಮೂಲಕ ಒಳಗೆ ಹೋಗುತ್ತಿತ್ತು. ಚಕಿತನಾದ ರೈತ ಒಳಗೇನಿದೆ ಎಂದು ನೋಡಲು ಹುತ್ತ ಅಗೆಯಲು ಆರಂಭಿಸಿದಾಗ ಲಿಂಗ ಪತ್ತೆಯಾಗಿದೆ. ಹೀಗಾಗಿ ಈ ಲಿಂಗಕ್ಕೆ ಇಂದಿಗೂ ‘ಉದ್ಭವಲಿಂಗ’ ಎಂದು ಕರೆಯಲಾಗುತ್ತದೆ ಎಂದು ಇಲ್ಲಿಯ ಹಿರಿಯರು ಹೇಳುತ್ತಾರೆ.</p>.<p>ಇಲ್ಲಿಯ ಜಾತ್ರೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿತ್ತು. ದೇಶದ ವೈವಿದ್ಯ ತಳಿಯ ಜಾನುವಾರುಗಳ ಮೇಳ ಇಲ್ಲಿ ನಡೆಯುತ್ತಿತ್ತು. ದೇಶದ ವಿವಿಧೆಡೆಯ ಒಂಟೆಗಳು ಮೇಳದಲ್ಲಿ ಪಾಲ್ಗೊಳ್ಳುತ್ತಿದ್ದವು. ಈ ಕಾರಣ ಈ ಜಾತ್ರೆ ರಾಜ್ಯದ ಏಕೈಕ ಒಂಟೆ ಜಾತ್ರೆ ಎಂಬ ಖ್ಯಾತಿಯೂ ಪಡೆದಿತ್ತು. ಆದರೆ ಕ್ರಮೇಣವಾಗಿ ಒಂಟೆ ಸಂತತಿ ಕಡಿಮೆಯಾಗಿ ಅವುಗಳು ಬರುವುದು ನಿಂತು ಹೋಗಿದೆ ಎನ್ನುತ್ತಾರೆ ದೇವಸ್ಥಾನ ಸಮಿತಿ ಮಾಜಿ ಅಧ್ಯಕ್ಷ ಬಸವರಾಜ ದೇಶಮುಖ.</p>.<p>ಇಲ್ಲಿ ಈಗಲೂ ಜಾನುವಾರುಗಳಿಗಾಗಿ ಗೋಶಾಲೆ ಮತ್ತು ಭಕ್ತರಿಗಾಗಿ ದಾಸೋಹ ವ್ಯವಸ್ಥೆ ಇದೆ. ಅಂತರರಾಜ್ಯ ಕುಸ್ತಿ ಸ್ಪರ್ಧೆ ಏರ್ಪಡಿಸಲಾಗುತ್ತದೆ. ವಿವಿಧೆಡೆಯ ಕುಸ್ತಿ ಪಟುಗಳು ಇಲ್ಲಿಗೆ ಬರುತ್ತಾರೆ. ಹೀಗಾಗಿ ಕುಸ್ತಿ ಪ್ರೇಮಿಗಳಿಗೆ ಈ ಜಾತ್ರೆ ಹೇಳಿ ಮಾಡಿಸಿದಂತಿದೆ. </p>.<p><strong>ಶಿವರಾತ್ರಿ ವಿಶೇಷ ಪೂಜೆ ಪ್ರಾರ್ಥನೆ</strong></p><p><strong> ಔರಾದ್:</strong> ಜಾತ್ರೆ ಹಾಗೂ ಮಹಾ ಶಿವರಾತ್ರಿ ಅಂಗವಾಗಿ ಇಲ್ಲಿಯ ಅಮರೇಶ್ವರ ದೇವಸ್ಥಾನದಲ್ಲಿ ಬುಧವಾರ ವಿಶೇಷ ಪೂಜೆ ಪ್ರಾರ್ಥನೆ ನಡೆದವು. ದೇವಸ್ಥಾನಕ್ಕೆ ಬೆಳಿಗ್ಗೆಯಿಂದಲೇ ಆಗಮಿಸಿದ ಭಕ್ತರು ಉದ್ಭವಲಿಂಗ ಅಮರೇಶ್ವರನಿಗೆ ಪೂಜೆ ಸಲ್ಲಿಸಿದರು. ಕೆಲವರು ಶಲ್ಯ ತೊಡಿಸಿ ಕಾಯಿ ಒಡೆದು ತಮ್ಮ ಇಷ್ಟಾರ್ಥ ಪೂರೈಸಿದರು. ಇಡೀ ದೇವಸ್ಥಾನದಲ್ಲಿ ಓಂ ಭಲಾ ಶಂಕರ ಭಲಾ ಎಂಬ ಘೋಷಣೆ ಮೊಳಗಿತು. </p><p><strong>ಶಾಸಕರಿಂದ ಪೂಜೆ:</strong> ಶಾಸಕ ಪ್ರಭು ಚವಾಣ್ ಹಾಗೂ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸರುಬಾಯಿ ಘುಳೆ ಸ್ಥಳೀಯ ಮುಖಂಡರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಉತ್ತರ ಪ್ರದೇಶದ ಪ್ರಯಾಗರಾಜ್ನ ತ್ರಿವೇಣಿ ಸಂಗಮದಿಂದ ತಂದಿರುವ ಗಂಗಾಜಲದಿಂದ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿ ಅಲ್ಲಿಂದ ತರಲಾದ ವಿಶೇಷ ಪ್ರಸಾದವನ್ನು ಭಕ್ತರಿಗೆ ವಿತರಿಸಲಾಯಿತು. ನಮ್ಮ ಕ್ಷೇತ್ರ ಹಾಗೂ ನಾಡಿನ ಜನ ಶಾಂತಿ ಸಮೃದ್ಧಿಯಿಂದ ಬಾಳುವಂತಾಗಲಿ ಎಂದು ಅಮರೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ ಎಂದು ಶಾಸಕರು ಹೇಳಿದರು. ಜಾತ್ರೆ ಯಶಸ್ವಿಯಾಗಿ ನಡೆಸಲು ತಾಲ್ಲೂಕು ಆಡಳಿತದಿಂದ ಅಗತ್ಯ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಜಾತ್ರೆಯಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ಕೊರತೆಗಳಾಗದಂತೆ ವ್ಯವಸ್ಥೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು. ಮುಖಂಡ ರಾಮಶೆಟ್ಟಿ ಪನ್ನಾಳೆ ಧೊಂಡಿಬಾ ನರೋಟೆ ಮಾರುತಿ ಚವಾಣ್ ಶಿವರಾಜ ಅಲ್ಮಾಜೆ ದಯಾನಂದ ಘೂಳೆ ಸಂತೋಷ ಪೋಕಲವಾರ ಕೇರಬಾ ಪವಾರ್ ಸಂಜು ವಡೆಯರ್ ಗುಂಡಪ್ಪ ಮುಧಾಳೆ ಬಸವರಾಜ ಹಳ್ಳೆ ಸಂದೀಪ ಪಾಟೀಲ ಜೈಪಾಲ ರಾಠೋಡ್ ಇದ್ದರು. </p>.<p><strong>ಪೊಲೀಸರಿಂದ ಸಿದ್ಧತೆ ಪರಿಶೀಲನೆ</strong> </p><p>ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ ಸಿಪಿಐ ರಘುವೀರಸಿಂಗ್ ಠಾಕೂರ್ ಪಿಎಸ್ಐ ವಸೀಂ ಪಟೇಲ್ ಅವರು ಮಂಗಳವಾರ ರಾತ್ರಿ ಜಾತ್ರೆ ಸಿದ್ಧತೆ ಪರಿಶೀಲಿಸಿದರು. ಭಕ್ತರಿಗೆ ತೊಂದರೆ ಆಗದಂತೆ ಪಾರ್ಕಿಂಗ್ ವ್ಯವಸ್ಥೆ ಮಾಡಲು ಸೂಚಿಸಿದರು. ರಥ ಹೋಗುವ ಮಾರ್ಗದಲ್ಲಿ ಹಾಗೂ ಅಗ್ನಿ ಕುಂಡದ ಬಳಿ ಹೆಚ್ಚಿನ ಬಂದೋಬಸ್ತ್ ಮಾಡುವಂತೆ ಪೊಲೀಸರಿಗೆ ತಿಳಿಸಿದರು. ಜಾತ್ರೆಗೆ ಬರುವ ಭಕ್ತರು ವಿಶೇಷವಾಗಿ ಮಹಿಳೆಯರು ಹೆಚ್ಚಿನ ಜಾಗೃತೆ ವಹಿಸಬೇಕು. ಜೇಬುಗಳ್ಳರ ಬಗ್ಗೆ ನಿಗಾ ವಹಿಸಬೇಕು. ಶಂಕಿತ ವ್ಯಕ್ತಿಗಳು ಕಂಡರೆ ಪೊಲೀಸರಿಗೆ ಮಾಹಿತಿ ನೀಡುವಂತೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್:</strong> ಮಹಾಶಿವರಾತ್ರಿ ಇಲ್ಲಿ ವಿಶಿಷ್ಟ ಹಾಗೂ ವೈವಿದ್ಯಮಯವಾಗಿ ಆಚರಿಸಲಾಗುತ್ತದೆ. ಇಲ್ಲಿಯ ಅಮರೇಶ್ವರ ದೇವಸ್ಥಾನ ಬಹಳ ಪುರಾತನ ಹಾಗೂ ವಿಶಿಷ್ಟ ಕಲೆಯಿಂದ ಕೂಡಿದೆ.</p>.<p>ಪ್ರತಿ ವರ್ಷ ಮಹಾಶಿವರಾತ್ರಿ ವೇಳೆ ಇಲ್ಲಿ ಜಾತ್ರಾ ಉತ್ಸವ ನಡೆಯುತ್ತದೆ. ಈ ದೇವಸ್ಥಾನದ ಗರ್ಭ ಗುಡಿಯಲ್ಲಿರುವ ಲಿಂಗ ಸಹಸ್ರಾರು ಭಕ್ತರನ್ನು ಆಕರ್ಷಿಸಿದೆ. ಈ ಕಾರಣಕ್ಕೆ ಶಿವರಾತ್ರಿ ವೇಳೆ ದೂರ ದೂರದ ಭಕ್ತರು ಲಿಂಗ ದರ್ಶನ ಪಡೆಯುವುದನ್ನು ರೂಢಿಸಿಕೊಂಡಿದ್ದಾರೆ.</p>.<p>ಈ ಲಿಂಗ ಹೊರ ಜಗತ್ತಿಗೆ ಗೊತ್ತಾಗಿದ್ದು ತುಂಬಾ ರೋಚಕತೆಯಿಂದ ಕೂಡಿದೆ. ಪಟ್ಟಣಕ್ಕೆ ಸಮೀಪ ಯನಗುಂದಾ ಎಂಬ ಗ್ರಾಮವೊಂದಿದೆ. ಅಲ್ಲಿಯ ಆಕಳುಗಳು ಪ್ರತಿದಿನ ಮೇಯಲು ಕಾಡಿಗೆ ಹೋಗುತ್ತಿದ್ದವು. ಹೀಗಿರುವಾಗ ಒಂದು ಆಕಳು ಕಾಡಿನಿಂದ ಮನೆಗೆ ಬಂದಾಗ ಅದರ ಕೆಚ್ಚಲಿನ ಹಾಲು ಖಾಲಿಯಾಗುತ್ತಿತ್ತು. ಇದನ್ನು ಸೂಕ್ಷ್ಮವಾಗಿ ಗಮನಿಸಿದ ರೈತ ಒಂದು ದಿನ ಆಕಳ ಹಿಂದೆ ಕಾಡಿನೊಳಗೆ ಹೋದ. ಆ ಆಕಳು ಎಂದಿನಂತೆ ಕಾಡಿನೊಳಗೆ ಹೋಗಿ ಅಲ್ಲಿಯ ಹುತ್ತಿನ ಮೇಲೆ ನಿಂತಾಗ ಹಾಲು ರಂಧ್ರದ ಮೂಲಕ ಒಳಗೆ ಹೋಗುತ್ತಿತ್ತು. ಚಕಿತನಾದ ರೈತ ಒಳಗೇನಿದೆ ಎಂದು ನೋಡಲು ಹುತ್ತ ಅಗೆಯಲು ಆರಂಭಿಸಿದಾಗ ಲಿಂಗ ಪತ್ತೆಯಾಗಿದೆ. ಹೀಗಾಗಿ ಈ ಲಿಂಗಕ್ಕೆ ಇಂದಿಗೂ ‘ಉದ್ಭವಲಿಂಗ’ ಎಂದು ಕರೆಯಲಾಗುತ್ತದೆ ಎಂದು ಇಲ್ಲಿಯ ಹಿರಿಯರು ಹೇಳುತ್ತಾರೆ.</p>.<p>ಇಲ್ಲಿಯ ಜಾತ್ರೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿತ್ತು. ದೇಶದ ವೈವಿದ್ಯ ತಳಿಯ ಜಾನುವಾರುಗಳ ಮೇಳ ಇಲ್ಲಿ ನಡೆಯುತ್ತಿತ್ತು. ದೇಶದ ವಿವಿಧೆಡೆಯ ಒಂಟೆಗಳು ಮೇಳದಲ್ಲಿ ಪಾಲ್ಗೊಳ್ಳುತ್ತಿದ್ದವು. ಈ ಕಾರಣ ಈ ಜಾತ್ರೆ ರಾಜ್ಯದ ಏಕೈಕ ಒಂಟೆ ಜಾತ್ರೆ ಎಂಬ ಖ್ಯಾತಿಯೂ ಪಡೆದಿತ್ತು. ಆದರೆ ಕ್ರಮೇಣವಾಗಿ ಒಂಟೆ ಸಂತತಿ ಕಡಿಮೆಯಾಗಿ ಅವುಗಳು ಬರುವುದು ನಿಂತು ಹೋಗಿದೆ ಎನ್ನುತ್ತಾರೆ ದೇವಸ್ಥಾನ ಸಮಿತಿ ಮಾಜಿ ಅಧ್ಯಕ್ಷ ಬಸವರಾಜ ದೇಶಮುಖ.</p>.<p>ಇಲ್ಲಿ ಈಗಲೂ ಜಾನುವಾರುಗಳಿಗಾಗಿ ಗೋಶಾಲೆ ಮತ್ತು ಭಕ್ತರಿಗಾಗಿ ದಾಸೋಹ ವ್ಯವಸ್ಥೆ ಇದೆ. ಅಂತರರಾಜ್ಯ ಕುಸ್ತಿ ಸ್ಪರ್ಧೆ ಏರ್ಪಡಿಸಲಾಗುತ್ತದೆ. ವಿವಿಧೆಡೆಯ ಕುಸ್ತಿ ಪಟುಗಳು ಇಲ್ಲಿಗೆ ಬರುತ್ತಾರೆ. ಹೀಗಾಗಿ ಕುಸ್ತಿ ಪ್ರೇಮಿಗಳಿಗೆ ಈ ಜಾತ್ರೆ ಹೇಳಿ ಮಾಡಿಸಿದಂತಿದೆ. </p>.<p><strong>ಶಿವರಾತ್ರಿ ವಿಶೇಷ ಪೂಜೆ ಪ್ರಾರ್ಥನೆ</strong></p><p><strong> ಔರಾದ್:</strong> ಜಾತ್ರೆ ಹಾಗೂ ಮಹಾ ಶಿವರಾತ್ರಿ ಅಂಗವಾಗಿ ಇಲ್ಲಿಯ ಅಮರೇಶ್ವರ ದೇವಸ್ಥಾನದಲ್ಲಿ ಬುಧವಾರ ವಿಶೇಷ ಪೂಜೆ ಪ್ರಾರ್ಥನೆ ನಡೆದವು. ದೇವಸ್ಥಾನಕ್ಕೆ ಬೆಳಿಗ್ಗೆಯಿಂದಲೇ ಆಗಮಿಸಿದ ಭಕ್ತರು ಉದ್ಭವಲಿಂಗ ಅಮರೇಶ್ವರನಿಗೆ ಪೂಜೆ ಸಲ್ಲಿಸಿದರು. ಕೆಲವರು ಶಲ್ಯ ತೊಡಿಸಿ ಕಾಯಿ ಒಡೆದು ತಮ್ಮ ಇಷ್ಟಾರ್ಥ ಪೂರೈಸಿದರು. ಇಡೀ ದೇವಸ್ಥಾನದಲ್ಲಿ ಓಂ ಭಲಾ ಶಂಕರ ಭಲಾ ಎಂಬ ಘೋಷಣೆ ಮೊಳಗಿತು. </p><p><strong>ಶಾಸಕರಿಂದ ಪೂಜೆ:</strong> ಶಾಸಕ ಪ್ರಭು ಚವಾಣ್ ಹಾಗೂ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸರುಬಾಯಿ ಘುಳೆ ಸ್ಥಳೀಯ ಮುಖಂಡರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಉತ್ತರ ಪ್ರದೇಶದ ಪ್ರಯಾಗರಾಜ್ನ ತ್ರಿವೇಣಿ ಸಂಗಮದಿಂದ ತಂದಿರುವ ಗಂಗಾಜಲದಿಂದ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿ ಅಲ್ಲಿಂದ ತರಲಾದ ವಿಶೇಷ ಪ್ರಸಾದವನ್ನು ಭಕ್ತರಿಗೆ ವಿತರಿಸಲಾಯಿತು. ನಮ್ಮ ಕ್ಷೇತ್ರ ಹಾಗೂ ನಾಡಿನ ಜನ ಶಾಂತಿ ಸಮೃದ್ಧಿಯಿಂದ ಬಾಳುವಂತಾಗಲಿ ಎಂದು ಅಮರೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ ಎಂದು ಶಾಸಕರು ಹೇಳಿದರು. ಜಾತ್ರೆ ಯಶಸ್ವಿಯಾಗಿ ನಡೆಸಲು ತಾಲ್ಲೂಕು ಆಡಳಿತದಿಂದ ಅಗತ್ಯ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಜಾತ್ರೆಯಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ಕೊರತೆಗಳಾಗದಂತೆ ವ್ಯವಸ್ಥೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು. ಮುಖಂಡ ರಾಮಶೆಟ್ಟಿ ಪನ್ನಾಳೆ ಧೊಂಡಿಬಾ ನರೋಟೆ ಮಾರುತಿ ಚವಾಣ್ ಶಿವರಾಜ ಅಲ್ಮಾಜೆ ದಯಾನಂದ ಘೂಳೆ ಸಂತೋಷ ಪೋಕಲವಾರ ಕೇರಬಾ ಪವಾರ್ ಸಂಜು ವಡೆಯರ್ ಗುಂಡಪ್ಪ ಮುಧಾಳೆ ಬಸವರಾಜ ಹಳ್ಳೆ ಸಂದೀಪ ಪಾಟೀಲ ಜೈಪಾಲ ರಾಠೋಡ್ ಇದ್ದರು. </p>.<p><strong>ಪೊಲೀಸರಿಂದ ಸಿದ್ಧತೆ ಪರಿಶೀಲನೆ</strong> </p><p>ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ ಸಿಪಿಐ ರಘುವೀರಸಿಂಗ್ ಠಾಕೂರ್ ಪಿಎಸ್ಐ ವಸೀಂ ಪಟೇಲ್ ಅವರು ಮಂಗಳವಾರ ರಾತ್ರಿ ಜಾತ್ರೆ ಸಿದ್ಧತೆ ಪರಿಶೀಲಿಸಿದರು. ಭಕ್ತರಿಗೆ ತೊಂದರೆ ಆಗದಂತೆ ಪಾರ್ಕಿಂಗ್ ವ್ಯವಸ್ಥೆ ಮಾಡಲು ಸೂಚಿಸಿದರು. ರಥ ಹೋಗುವ ಮಾರ್ಗದಲ್ಲಿ ಹಾಗೂ ಅಗ್ನಿ ಕುಂಡದ ಬಳಿ ಹೆಚ್ಚಿನ ಬಂದೋಬಸ್ತ್ ಮಾಡುವಂತೆ ಪೊಲೀಸರಿಗೆ ತಿಳಿಸಿದರು. ಜಾತ್ರೆಗೆ ಬರುವ ಭಕ್ತರು ವಿಶೇಷವಾಗಿ ಮಹಿಳೆಯರು ಹೆಚ್ಚಿನ ಜಾಗೃತೆ ವಹಿಸಬೇಕು. ಜೇಬುಗಳ್ಳರ ಬಗ್ಗೆ ನಿಗಾ ವಹಿಸಬೇಕು. ಶಂಕಿತ ವ್ಯಕ್ತಿಗಳು ಕಂಡರೆ ಪೊಲೀಸರಿಗೆ ಮಾಹಿತಿ ನೀಡುವಂತೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>