<p><strong>ಬೀದರ್</strong>: ಭಗವಾನ್ ಮಹಾವೀರರ 2,625ನೇ ಜಯಂತಿಯನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶ್ರದ್ಧಾ, ಭಕ್ತಿ ಹಾಗೂ ಸಡಗರ ಸಂಭ್ರಮದಿಂದ ಸೋಮವಾರ ಆಚರಿಸಲಾಯಿತು.</p><p>ನಗರದ ಶಹಾಗಂಜ್ ರಸ್ತೆಯಲ್ಲಿರುವ ಶ್ರೀ ಚಂದ್ರಪ್ರಭ ದಿಗಂಬರ್ ಜೈನ ಕಲ್ಯಾಣ ಮತ್ತು ಚಾರಿಟಬಲ್ ಟ್ರಸ್ಟ್ನಿಂದ ಮಹಾವೀರ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p><p>ಜೈನ ಮಂದಿರವನ್ನು ವಿಶೇಷ ರೀತಿಯಲ್ಲಿ ಅಲಂಕರಿಸಿದ್ದರು. ಮಹಿಳೆಯರು ದೇಗುಲದ ಪರಿಸರದಲ್ಲಿ ರಂಗೋಲಿ ಬಿಡಿಸಿದ್ದರು. ಮಹಾವೀರರಿಗೆ ವಿಶೇಷ ರೀತಿಯಲ್ಲಿ ಪೂಜೆ ನೆರವೇರಿಸಿ, ಮಂತ್ರ ಪಠಿಸಿದರು. ಜಯಘೋಷ ಹಾಕಿದರು.</p><p>ಬಳಿಕ ಅಲಂಕರಿಸಿದ ವಾಹನದಲ್ಲಿ ಮಹಾವೀರರ ಭಾವಚಿತ್ರ ಇರಿಸಿ, ಪಲ್ಲಕ್ಕಿ ಹೊತ್ತುಕೊಂಡು, ಜೈನ ಧರ್ಮದ ಧ್ವಜಗಳನ್ನು ಹಿಡಿದುಕೊಂಡು ನಗರದ ಪ್ರಮುಖ ಮಾರ್ಗಗಳಲ್ಲಿ ಮೆರವಣಿಗೆ ಮಾಡಿದರು. ಹೆಣ್ಣು ಮಕ್ಕಳು ತಲೆಯ ಮೇಲೆ ಕಲಶ ಹೊತ್ತುಕೊಂಡು ಹೆಜ್ಜೆ ಹಾಕಿದರು. ಕಿರಿಯರಿಂದ ಹಿರಿಯರ ವರೆಗೆ ಎಲ್ಲರೂ ಪಾಲ್ಗೊಂಡಿದ್ದರು. ಬಳಿಕ ಭಕ್ತರಿಗೆ ಪ್ರಸಾದ ವಿತರಿಸಲಾಯಿತು. </p><p>ಬೀದರ್ ತಾಲ್ಲೂಕಿನ ಕಮಠಾಣ ಗ್ರಾಮದ ಜೈನ ಮಂದಿರದಲ್ಲೂ ವಿಶೇಷ ಪೂಜೆ, ಪ್ರಾರ್ಥನೆ ಜರುಗಿತು.</p><p><strong>ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಚರಣೆ: </strong></p><p>ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಅವರು ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಿದರು.</p><p>ಸಮಾಜದ ಮುಖಂಡರಾದ ನರಸಿಂಹರಾಜ ಟಿಕ್ಕೆ, ಸಂತೋಷ್ ಹೊನ್ನಕುದುರೆ, ಅಶೋಕಕುಮಾರ್ ಬೊಗಾರ, ಸತ್ಯವಾನ್ ಬೋಗಾರ, ಸುಭಾಷ ಬೋಗಾರ, ನೇಮಿನಾಥ ಕಾಸರ್, ವೆಂಕಟರಾವ್ ಬೆಳಕೋಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಭಗವಾನ್ ಮಹಾವೀರರ 2,625ನೇ ಜಯಂತಿಯನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶ್ರದ್ಧಾ, ಭಕ್ತಿ ಹಾಗೂ ಸಡಗರ ಸಂಭ್ರಮದಿಂದ ಸೋಮವಾರ ಆಚರಿಸಲಾಯಿತು.</p><p>ನಗರದ ಶಹಾಗಂಜ್ ರಸ್ತೆಯಲ್ಲಿರುವ ಶ್ರೀ ಚಂದ್ರಪ್ರಭ ದಿಗಂಬರ್ ಜೈನ ಕಲ್ಯಾಣ ಮತ್ತು ಚಾರಿಟಬಲ್ ಟ್ರಸ್ಟ್ನಿಂದ ಮಹಾವೀರ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p><p>ಜೈನ ಮಂದಿರವನ್ನು ವಿಶೇಷ ರೀತಿಯಲ್ಲಿ ಅಲಂಕರಿಸಿದ್ದರು. ಮಹಿಳೆಯರು ದೇಗುಲದ ಪರಿಸರದಲ್ಲಿ ರಂಗೋಲಿ ಬಿಡಿಸಿದ್ದರು. ಮಹಾವೀರರಿಗೆ ವಿಶೇಷ ರೀತಿಯಲ್ಲಿ ಪೂಜೆ ನೆರವೇರಿಸಿ, ಮಂತ್ರ ಪಠಿಸಿದರು. ಜಯಘೋಷ ಹಾಕಿದರು.</p><p>ಬಳಿಕ ಅಲಂಕರಿಸಿದ ವಾಹನದಲ್ಲಿ ಮಹಾವೀರರ ಭಾವಚಿತ್ರ ಇರಿಸಿ, ಪಲ್ಲಕ್ಕಿ ಹೊತ್ತುಕೊಂಡು, ಜೈನ ಧರ್ಮದ ಧ್ವಜಗಳನ್ನು ಹಿಡಿದುಕೊಂಡು ನಗರದ ಪ್ರಮುಖ ಮಾರ್ಗಗಳಲ್ಲಿ ಮೆರವಣಿಗೆ ಮಾಡಿದರು. ಹೆಣ್ಣು ಮಕ್ಕಳು ತಲೆಯ ಮೇಲೆ ಕಲಶ ಹೊತ್ತುಕೊಂಡು ಹೆಜ್ಜೆ ಹಾಕಿದರು. ಕಿರಿಯರಿಂದ ಹಿರಿಯರ ವರೆಗೆ ಎಲ್ಲರೂ ಪಾಲ್ಗೊಂಡಿದ್ದರು. ಬಳಿಕ ಭಕ್ತರಿಗೆ ಪ್ರಸಾದ ವಿತರಿಸಲಾಯಿತು. </p><p>ಬೀದರ್ ತಾಲ್ಲೂಕಿನ ಕಮಠಾಣ ಗ್ರಾಮದ ಜೈನ ಮಂದಿರದಲ್ಲೂ ವಿಶೇಷ ಪೂಜೆ, ಪ್ರಾರ್ಥನೆ ಜರುಗಿತು.</p><p><strong>ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಚರಣೆ: </strong></p><p>ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಅವರು ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಿದರು.</p><p>ಸಮಾಜದ ಮುಖಂಡರಾದ ನರಸಿಂಹರಾಜ ಟಿಕ್ಕೆ, ಸಂತೋಷ್ ಹೊನ್ನಕುದುರೆ, ಅಶೋಕಕುಮಾರ್ ಬೊಗಾರ, ಸತ್ಯವಾನ್ ಬೋಗಾರ, ಸುಭಾಷ ಬೋಗಾರ, ನೇಮಿನಾಥ ಕಾಸರ್, ವೆಂಕಟರಾವ್ ಬೆಳಕೋಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>