ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹೇಶ ಪಾಟೀಲ ಗಾದಗಿ ತಹಶೀಲ್ದಾರ್ 

Last Updated 8 ಸೆಪ್ಟೆಂಬರ್ 2022, 16:00 IST
ಅಕ್ಷರ ಗಾತ್ರ

ಬೀದರ್‌: ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಬೀದರ್‌ ತಾಲ್ಲೂಕಿನ ಗಾದಗಿ ಗ್ರಾಮದ ಮಹೇಶ ಮಾಣಿಕರಾವ್ ಪಾಟೀಲ ತಹಶೀಲ್ದಾರ್‌ ಹುದ್ದೆಗೆ ನೇಮಕಗೊಂಡಿದ್ದಾರೆ.

ತಂದೆ ಮಾಣಿಕರಾವ್ ಕೃಷಿಕರಾಗಿದ್ದಾರೆ. ತಾಯಿ ಬೀದರ್‌ನ ನಾವದಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾರೆ.

ಮಹೇಶ ಅವರು ನಗರದ ದತ್ತಗಿರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಜಿ.ಎನ್. ಪಬ್ಲಿಕ ಶಾಲೆಯಲ್ಲಿ ಪ್ರೌಢ, ಮಾತೆ ಮಾಣಿಕೇಶ್ವರಿ ಕಾಲೇಜಿನಲ್ಲಿ ಪಿಯುಸಿ ಓದಿದ್ದಾರೆ. ಬೆಂಗಳೂರಿನ ವಿಶ್ವವಿದ್ಯಾಲಯದ ಯುವಿಸಿಇದಿಂದ 2014ರಲ್ಲಿ ಬಿ.ಇ (ಮೆಕ್ಯಾನಿಕಲ್‌) ಪದವಿ ಪಡೆದಿದ್ದಾರೆ. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿದ್ದರು. ಈಚೆಗೆ ನಡೆದ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT