<p><strong>ಬೀದರ್</strong>: ಸಾಹಿತಿ ಪ್ರೊ. ಎಚ್.ಎಂ. ಮಹೇಶ್ವರಯ್ಯ ಅವರು ಜೀವಮಾನ ಸಾಧನೆಗಾಗಿ ತಮಗೆ ನೀಡಿದ್ದ ರಾಷ್ಟ್ರೀಯ ಗೋ.ರು.ಚ ಪ್ರಶಸ್ತಿಯ ₹ 51 ಸಾವಿರವನ್ನು ಅನುಭವ ಮಂಟಪಕ್ಕೆ ನೀಡಿ ಔದರ್ಯ ಮೆರೆದಿದ್ದರು ಎಂದು ಪ್ರಾಚಾರ್ಯ ಡಾ. ಜಗನ್ನಾಥ ಹೆಬ್ಬಾಳೆ ಹೇಳಿದರು.</p>.<p>ನಗರದ ಕರ್ನಾಟಕ ಕಾಲೇಜಿನಲ್ಲಿ ಸಾಹಿತಿಗಳಾದ ಡಾ. ಸಿದ್ದಲಿಂಗಯ್ಯ ಹಾಗೂ ಪ್ರೊ. ಎಚ್.ಎಂ. ಮಹೇಶ್ವರಯ್ಯ ಅವರಿಗೆ ಏರ್ಪಡಿಸಿದ್ದ ನುಡಿನಮನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಮಹೇಶ್ವರಯ್ಯ ಅವರು ಹಲವು ದೇಶಗಳಲ್ಲಿ ವಿಚಾರ ಸಂಕಿರಣ ಆಯೋಜಿಸಿ ಖ್ಯಾತಿ ಗಳಿಸಿದ್ದರು. ಕರ್ನಾಟಕ ಸಾಹಿತ್ಯ ಸಂಘದಲ್ಲಿ ಪ್ರತಿ ವರ್ಷ ಅವರ ಹೆಸರಿನಲ್ಲಿ ದತ್ತಿ ಉಪನ್ಯಾಸ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.</p>.<p>‘ಸಿದ್ದಲಿಂಗಯ್ಯ ಅವರು ತುಳಿತಕ್ಕೊಳಗಾದವರು, ನೊಂದವರು ಹಾಗೂ ಶೋಷಿತರ ಧ್ವನಿಯಾಗಿದ್ದರು. ತಮ್ಮನ್ನು ದಲಿತ ಕವಿ ಎಂದು ಕರೆಯಬೇಡಿ, ದೇಶದ ಕವಿ ಎಂದು ಕರೆಯಿರಿ ಎಂದು ಯಾವಾಗಲೂ ಹೇಳುತ್ತಿದ್ದರು’ ಎಂದು ಸ್ಮರಿಸಿದರು.</p>.<p>ಪ್ರಾಧ್ಯಾಪಕ ಡಾ.ಉಮಾಕಾಂತ ಪಾಟೀಲ, ಡಾ.ಸುನಿತಾ ಕೂಡ್ಲಿಕರ್ ಮಾತನಾಡಿದರು.</p>.<p>ಎರಡು ನಿಮಿಷಗಳ ಮೌನ ಆಚರಿಸಿ ಸಿದ್ದಲಿಂಗಯ್ಯ ಹಾಗೂ ಮಹೇಶ್ವರಯ್ಯ ಅವರ ಆತ್ಮಕ್ಕೆ ಶಾಂತಿ ಕೋರಲಾಯಿತು.</p>.<p>ಪ್ರೊ. ರಾಜೇಂದ್ರ ಬಿರಾದಾರ, ಡಾ. ಮಲ್ಲಿಕಾರ್ಜುನ ಹಂಗರಗಿ, ಬಸವರಾಜ ಕೂಡಂಬಲ, ಡಾ. ಮಲ್ಲಿಕಾರ್ಜುನ ಚಲವಾ, ಶ್ರೀಕಾಂತ ದೊಡ್ಡಮನಿ, ಅನಿಲಕುಮಾರ ಚಿಕ್ಕಮಾಣೂರ, ಪ್ರೊ. ವೈಜಿನಾಥ ಚಿಕ್ಕಬಸೆ, ಪ್ರೊ. ಸಂಗೀತಾ ಮಾನಾ, ಸಚಿನ್ ವಿಶ್ವಕರ್ಮ, ಡಾ. ಪೂಜಾ ಸೂರ್ಯವಂಶಿ, ಸುನೀಲ್ ಮೂಲಗೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಸಾಹಿತಿ ಪ್ರೊ. ಎಚ್.ಎಂ. ಮಹೇಶ್ವರಯ್ಯ ಅವರು ಜೀವಮಾನ ಸಾಧನೆಗಾಗಿ ತಮಗೆ ನೀಡಿದ್ದ ರಾಷ್ಟ್ರೀಯ ಗೋ.ರು.ಚ ಪ್ರಶಸ್ತಿಯ ₹ 51 ಸಾವಿರವನ್ನು ಅನುಭವ ಮಂಟಪಕ್ಕೆ ನೀಡಿ ಔದರ್ಯ ಮೆರೆದಿದ್ದರು ಎಂದು ಪ್ರಾಚಾರ್ಯ ಡಾ. ಜಗನ್ನಾಥ ಹೆಬ್ಬಾಳೆ ಹೇಳಿದರು.</p>.<p>ನಗರದ ಕರ್ನಾಟಕ ಕಾಲೇಜಿನಲ್ಲಿ ಸಾಹಿತಿಗಳಾದ ಡಾ. ಸಿದ್ದಲಿಂಗಯ್ಯ ಹಾಗೂ ಪ್ರೊ. ಎಚ್.ಎಂ. ಮಹೇಶ್ವರಯ್ಯ ಅವರಿಗೆ ಏರ್ಪಡಿಸಿದ್ದ ನುಡಿನಮನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಮಹೇಶ್ವರಯ್ಯ ಅವರು ಹಲವು ದೇಶಗಳಲ್ಲಿ ವಿಚಾರ ಸಂಕಿರಣ ಆಯೋಜಿಸಿ ಖ್ಯಾತಿ ಗಳಿಸಿದ್ದರು. ಕರ್ನಾಟಕ ಸಾಹಿತ್ಯ ಸಂಘದಲ್ಲಿ ಪ್ರತಿ ವರ್ಷ ಅವರ ಹೆಸರಿನಲ್ಲಿ ದತ್ತಿ ಉಪನ್ಯಾಸ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.</p>.<p>‘ಸಿದ್ದಲಿಂಗಯ್ಯ ಅವರು ತುಳಿತಕ್ಕೊಳಗಾದವರು, ನೊಂದವರು ಹಾಗೂ ಶೋಷಿತರ ಧ್ವನಿಯಾಗಿದ್ದರು. ತಮ್ಮನ್ನು ದಲಿತ ಕವಿ ಎಂದು ಕರೆಯಬೇಡಿ, ದೇಶದ ಕವಿ ಎಂದು ಕರೆಯಿರಿ ಎಂದು ಯಾವಾಗಲೂ ಹೇಳುತ್ತಿದ್ದರು’ ಎಂದು ಸ್ಮರಿಸಿದರು.</p>.<p>ಪ್ರಾಧ್ಯಾಪಕ ಡಾ.ಉಮಾಕಾಂತ ಪಾಟೀಲ, ಡಾ.ಸುನಿತಾ ಕೂಡ್ಲಿಕರ್ ಮಾತನಾಡಿದರು.</p>.<p>ಎರಡು ನಿಮಿಷಗಳ ಮೌನ ಆಚರಿಸಿ ಸಿದ್ದಲಿಂಗಯ್ಯ ಹಾಗೂ ಮಹೇಶ್ವರಯ್ಯ ಅವರ ಆತ್ಮಕ್ಕೆ ಶಾಂತಿ ಕೋರಲಾಯಿತು.</p>.<p>ಪ್ರೊ. ರಾಜೇಂದ್ರ ಬಿರಾದಾರ, ಡಾ. ಮಲ್ಲಿಕಾರ್ಜುನ ಹಂಗರಗಿ, ಬಸವರಾಜ ಕೂಡಂಬಲ, ಡಾ. ಮಲ್ಲಿಕಾರ್ಜುನ ಚಲವಾ, ಶ್ರೀಕಾಂತ ದೊಡ್ಡಮನಿ, ಅನಿಲಕುಮಾರ ಚಿಕ್ಕಮಾಣೂರ, ಪ್ರೊ. ವೈಜಿನಾಥ ಚಿಕ್ಕಬಸೆ, ಪ್ರೊ. ಸಂಗೀತಾ ಮಾನಾ, ಸಚಿನ್ ವಿಶ್ವಕರ್ಮ, ಡಾ. ಪೂಜಾ ಸೂರ್ಯವಂಶಿ, ಸುನೀಲ್ ಮೂಲಗೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>