ಬೀದರ್: ‘ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ರೈಲು ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಬೇಕು’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶ ಎಸ್.ಕೆ.ಕನಕಟ್ಟೆ ಹೇಳಿದರು.
ಇಲ್ಲಿಯ ರೈಲು ನಿಲ್ದಾಣಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿ ನಿಲ್ದಾಣದಲ್ಲಿ ಸ್ವಚ್ಛತೆ ಹಾಗೂ ಕುಡಿಯುವ ನೀರಿನ ಸೌಲಭ್ಯ ಪರಿಶೀಲಿಸಿ ಅವರು ಮಾತನಾಡಿದರು.
ರೈಲು ನಿಲ್ದಾಣದಲ್ಲಿ ಜನದಟ್ಟಣೆ ಇರುವುದು ಸಹ. ರೈಲು ನಿಲ್ದಾಣದ ಅಧಿಕಾರಿಗಳು ನಿತ್ಯ ಪರಿಶೀಲನೆ ನಡೆಸಿ ನಿಲ್ದಾಣದಲ್ಲಿ ನೈರ್ಮಲ್ಯ ಕಾಯ್ದುಕೊಳ್ಳಲು ಪ್ರಯತ್ನಿಸಬೇಕು ಎಂದರು.
ನವೆಂಬರ್ 12ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್ ಕುರಿತು ಸಾರ್ವಜನಿಕರಿಗೆ ರೈಲು ನಿಲ್ದಾಣದಲ್ಲಿರುವ ಧ್ವನಿ ವರ್ಧಕದ ಮೂಲಕ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ರೈಲು ನಿಲ್ದಾಣದ ಅಧಿಕಾರಿ ರಮೇಶಕುಮಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಿಬ್ಬಂದಿ ಜಗದೀಶ್ವರ ದೊರೆ, ಉಮೇಶ ಮಠದ ಹಾಗೂ ಆಕಾಶ ಸಜ್ಜನ ಇದ್ದರು.