ಕರ್ನಾಟಕವನ್ನು ಪ್ರತಿನಿಧಿಸಿದ ಅವರು 3 ಕಿ.ಮೀ. ನಡಿಗೆ, 800 ಮೀಟರ್ ಓಟದಲ್ಲಿ ಚಿನ್ನ ಹಾಗೂ ಮೂರು ಕಿ.ಮೀ. ಓಟದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಆಸ್ಟ್ರೆಲಿಯಾದಲ್ಲಿ ನಡೆಯಲಿರುವ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ಶಿಪ್ಗೆ ಅರ್ಹತೆ ಗಳಿಸಿದ್ದಾರೆ. ಮೂಲತಃ ಅಮಲಾಪುರದ ನಿವಾಸಿಯಾಗಿರುವ ಅವರು ಎರಡು ಮಕ್ಕಳ ತಾಯಿ. 37 ವರ್ಷದ ಮಮಿತಾಬಾಯಿ ಬೆಂಗಳೂರಿನ ಕೇಂದ್ರ ಕಾರಾಗೃಹದ ಮುಖ್ಯ ವೀಕ್ಷಕಿ. ಕೇಂದ್ರ ಕಾರಾಗೃಹದ ಮುಖ್ಯ ಸೂಪರಿಟೆಂಡೆಂಡ್ ವಿ. ಶೇಷಮೂರ್ತಿ, ಎಸ್ಪಿಗಳಾದ ಮಲ್ಲಿಕಾರ್ಜುನ ಸ್ವಾಮಿ, ಎ.ಎಸ್. ಅನಿತಾ ಅವರ ಸಾಧನೆಗೆ ಸಂತಸ ವ್ಯಕ್ತಪಡಿಸಿದ್ದಾರೆ.