ರಾತ್ರಿಯಾಗಿದ್ದರಿಂದ ಪೊಲೀಸರು ಅವನನ್ನು ತಕ್ಷಣಕ್ಕೆ ಮೇಲಕ್ಕೆ ಎತ್ತಲು ಸಾಧ್ಯವಾಗಲಿಲ್ಲ. ಈಜುಪಟುಗಳು ಸ್ಥಳಕ್ಕೆ ಬಂದು ಶೋಧ ನಡೆಸಿದರೂ ಶವ ದೊರಕಿರಲಿಲ್ಲ. ಗುರುವಾರ ಬೆಳಿಗ್ಗೆ ಶವ ಬಾವಿಯಲ್ಲಿ ತೇಲಾಡುತ್ತಿತ್ತು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡಿ, ಡಿವೈಎಸ್ಪಿ ದೇವರಾಜ್ ಹಾಗೂ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.