<p><strong>ಬೀದರ್:</strong> ಬೈಕ್ ಮೇಲೆ ತೆರಳುವಾಗ ಗಾಳಿಪಟದ ಮಾಂಜಾ ಕತ್ತಿಗೆ ಸಿಕ್ಕಿಕೊಂಡು ಸೀಳಿದ್ದರಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಚಿಟಗುಪ್ಪ ತಾಲ್ಲೂಕಿನ ತಾಳಮಡಗಿಯಲ್ಲಿ ಬುಧವಾರ ನಡೆದಿದೆ.</p><p>ಸಂಜುಕುಮಾರ ಗುಂಡಪ್ಪ ಹೊಸಮನಿ (48) ಮೃತ ವ್ಯಕ್ತಿ. ಮೃತರಿಗೆ ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರಿದ್ದಾರೆ</p><p>ಸಂಕ್ರಾಂತಿ ಹಬ್ಬದ ರಜೆ ಇರುವುದರಿಂದ ಹುಮನಾಬಾದ್ ಪಟ್ಟಣದ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಗಳನ್ನು ಕರೆತರಲು ಬೈಕ್ ಮೇಲೆ ತೆರಳುವಾಗ ಈ ಘಟನೆ ನಡೆದಿದೆ. </p><p>ಚಿಟಗುಪ್ಪ ತಾಲ್ಲೂಕಿನ ತಾಳಮಡಗಿ ಗ್ರಾಮದ ಸೇತುವೆ ಬಳಿ ಈ ಘಟನೆ ಜರುಗಿದೆ. ಕತ್ತಿಗೆ ಮಾಂಜಾ ಸಿಲುಕಿ ರಕ್ತಸ್ರಾವವಾಗಿ ಕೆಳಗೆ ಬಿದ್ದು ಹೊರಳಾಡಿ ಕೊನೆಯುಸಿರೆಳೆದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p><p>ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹುಮನಾಬಾದ್, ಚಿಟಗುಪ್ಪ ಭಾಗದಲ್ಲಿ ಜನ ಗಾಳಿಪಟ ಹಾರಿಸಿ ಸಂಭ್ರಮಿಸುತ್ತಾರೆ. ‘ಪೇಂಚ್’ ಆಟಕ್ಕೆ ಮಾಂಜಾ ಹೆಚ್ಚಾಗಿ ಬಳಸುವ ರೂಢಿಯಿದ್ದು, ಇದರ ಬಳಕೆ ನಿರ್ಬಂಧಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದರು. ಆದರೂ, ಅದರೆ ಬಳಕೆ ಅವ್ಯಾಹತವಾಗಿ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಬೈಕ್ ಮೇಲೆ ತೆರಳುವಾಗ ಗಾಳಿಪಟದ ಮಾಂಜಾ ಕತ್ತಿಗೆ ಸಿಕ್ಕಿಕೊಂಡು ಸೀಳಿದ್ದರಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಚಿಟಗುಪ್ಪ ತಾಲ್ಲೂಕಿನ ತಾಳಮಡಗಿಯಲ್ಲಿ ಬುಧವಾರ ನಡೆದಿದೆ.</p><p>ಸಂಜುಕುಮಾರ ಗುಂಡಪ್ಪ ಹೊಸಮನಿ (48) ಮೃತ ವ್ಯಕ್ತಿ. ಮೃತರಿಗೆ ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರಿದ್ದಾರೆ</p><p>ಸಂಕ್ರಾಂತಿ ಹಬ್ಬದ ರಜೆ ಇರುವುದರಿಂದ ಹುಮನಾಬಾದ್ ಪಟ್ಟಣದ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಗಳನ್ನು ಕರೆತರಲು ಬೈಕ್ ಮೇಲೆ ತೆರಳುವಾಗ ಈ ಘಟನೆ ನಡೆದಿದೆ. </p><p>ಚಿಟಗುಪ್ಪ ತಾಲ್ಲೂಕಿನ ತಾಳಮಡಗಿ ಗ್ರಾಮದ ಸೇತುವೆ ಬಳಿ ಈ ಘಟನೆ ಜರುಗಿದೆ. ಕತ್ತಿಗೆ ಮಾಂಜಾ ಸಿಲುಕಿ ರಕ್ತಸ್ರಾವವಾಗಿ ಕೆಳಗೆ ಬಿದ್ದು ಹೊರಳಾಡಿ ಕೊನೆಯುಸಿರೆಳೆದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p><p>ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹುಮನಾಬಾದ್, ಚಿಟಗುಪ್ಪ ಭಾಗದಲ್ಲಿ ಜನ ಗಾಳಿಪಟ ಹಾರಿಸಿ ಸಂಭ್ರಮಿಸುತ್ತಾರೆ. ‘ಪೇಂಚ್’ ಆಟಕ್ಕೆ ಮಾಂಜಾ ಹೆಚ್ಚಾಗಿ ಬಳಸುವ ರೂಢಿಯಿದ್ದು, ಇದರ ಬಳಕೆ ನಿರ್ಬಂಧಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದರು. ಆದರೂ, ಅದರೆ ಬಳಕೆ ಅವ್ಯಾಹತವಾಗಿ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>