<p><strong>ಕಮಲನಗರ:</strong> ತಾಲ್ಲೂಕಿನ ಸಂಗಮ ಕ್ರಾಸ್ ಬಳಿಯ ಮಾಂಜ್ರಾ ನದಿಗೆ ಮತ್ತೆ ಮಹಾರಾಷ್ಟ್ರದ ಧನ್ನೇಗಾಂವ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆಯಾದ ಹಿನ್ನೆಲೆಯಲ್ಲಿ ಬುಧವಾರ ಮತ್ತೆ ಪ್ರವಾಹ ಮಟ್ಟ ಹೆಚ್ಚಾಗಿದೆ.</p>.<p>ಮಾಂಜ್ರಾ ನದಿ ಅಕ್ಕ-ಪಕ್ಕದ ಗ್ರಾಮಗಳಾದ ಹೊರಂಡಿ, ಸೋನಾಳ, ಹುಲಸೂರ, ಕಾಳಗಾಪೂರ, ಖೇಡ, ಸಂಗಮ, ಹಾಲಹಳ್ಳಿ, ನಿಡೋದಾ, ಸಾವಳಿ ಹಾಗೂ ಇನ್ನಿತರ ಗ್ರಾಮಗಳ ರೈತರ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆಗಳಾದ ಸೋಯಾ, ತೊಗರಿ, ಇನ್ನಿತರ ಬೆಳೆಗಳು ನೀರು ಪಾಲಾಗಿವೆ.</p>.<p>ಸಂಗಮ-ಠಾಣಾಕುಶನೂರ ಮಧ್ಯದ ಬಳತ(ಕೆ) ಗ್ರಾಮದ ಸಮೀಪದ ಸೇತುವೆ ಹಾಗೂ ಸಂಗಮ-ಖೇಡ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಸೇತುವೆ ಮುಳುಗಡೆಯಾಗಿದ್ದರಿಂದ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇದರಿಂದ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣಗೊಂಡಿದೆ. </p>.<div><blockquote>ಕೂಡಲೇ ಸರ್ಕಾರ ಅತೀವೃಷ್ಟಿ ಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕು. ಅಲ್ಲದೇ ರೈತರಿಗೆ ಬೆಳೆವಿಮೆ ಪರಿಹಾರ ನೀಡಬೇಕು </blockquote><span class="attribution">-ನಾಗರಾಜ ಬಿರಾದಾರ, ಪಿಕೆಪಿಎಸ್ ಸದಸ್ಯ ನಿಡೋದಾ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲನಗರ:</strong> ತಾಲ್ಲೂಕಿನ ಸಂಗಮ ಕ್ರಾಸ್ ಬಳಿಯ ಮಾಂಜ್ರಾ ನದಿಗೆ ಮತ್ತೆ ಮಹಾರಾಷ್ಟ್ರದ ಧನ್ನೇಗಾಂವ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆಯಾದ ಹಿನ್ನೆಲೆಯಲ್ಲಿ ಬುಧವಾರ ಮತ್ತೆ ಪ್ರವಾಹ ಮಟ್ಟ ಹೆಚ್ಚಾಗಿದೆ.</p>.<p>ಮಾಂಜ್ರಾ ನದಿ ಅಕ್ಕ-ಪಕ್ಕದ ಗ್ರಾಮಗಳಾದ ಹೊರಂಡಿ, ಸೋನಾಳ, ಹುಲಸೂರ, ಕಾಳಗಾಪೂರ, ಖೇಡ, ಸಂಗಮ, ಹಾಲಹಳ್ಳಿ, ನಿಡೋದಾ, ಸಾವಳಿ ಹಾಗೂ ಇನ್ನಿತರ ಗ್ರಾಮಗಳ ರೈತರ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆಗಳಾದ ಸೋಯಾ, ತೊಗರಿ, ಇನ್ನಿತರ ಬೆಳೆಗಳು ನೀರು ಪಾಲಾಗಿವೆ.</p>.<p>ಸಂಗಮ-ಠಾಣಾಕುಶನೂರ ಮಧ್ಯದ ಬಳತ(ಕೆ) ಗ್ರಾಮದ ಸಮೀಪದ ಸೇತುವೆ ಹಾಗೂ ಸಂಗಮ-ಖೇಡ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಸೇತುವೆ ಮುಳುಗಡೆಯಾಗಿದ್ದರಿಂದ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇದರಿಂದ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣಗೊಂಡಿದೆ. </p>.<div><blockquote>ಕೂಡಲೇ ಸರ್ಕಾರ ಅತೀವೃಷ್ಟಿ ಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕು. ಅಲ್ಲದೇ ರೈತರಿಗೆ ಬೆಳೆವಿಮೆ ಪರಿಹಾರ ನೀಡಬೇಕು </blockquote><span class="attribution">-ನಾಗರಾಜ ಬಿರಾದಾರ, ಪಿಕೆಪಿಎಸ್ ಸದಸ್ಯ ನಿಡೋದಾ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>