<p><strong>ಚಿಟಗುಪ್ಪ:</strong> ಮಣ್ಣಿನಿಂದ ಎತ್ತುಗಳನ್ನು ಮಾಡಿ ಪೂಜಿಸುವ ಸಾಂಪ್ರದಾಯಿಕ ರೈತರ ಹಬ್ಬ ಮಣ್ಣೆತ್ತಿನ ಅಮಾವಾಸ್ಯೆ. ಇದು ಮುಂಗಾರಿನ ಪ್ರಥಮ ಹಬ್ಬವಾಗಿಯೂ ಆಚರಿಸಲಾಗುತ್ತದೆ.</p>.<p>ರೈತ ಬದುಕಿಗೆ ಆಸರೆಯಾಗಿರುವ ಎತ್ತುಗಳನ್ನು ಪೂಜಿಸಿ ಖುಷಿ ಪಡುವ ಈ ಹಬ್ಬ ಕಾರಹುಣ್ಣಿಮೆಯ ನಂತರ ಬರುತ್ತದೆ. ಭೂತಾಯಿಯನ್ನು ಉಳುಮೆ ಮಾಡುವ ಸಂಕೇತವಾದ ಎತ್ತುಗಳನ್ನು ಮನೆಯಲ್ಲಿಯೇ ತಯಾರಿಸಿಕೊಂಡು ದೇವರ ಜಗುಲಿ ಮೇಲೆ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದರು.</p>.<p>ಪಟ್ಟಣ, ತಾಲ್ಲೂಕಿನ ನಿರ್ಣಾ, ಮುತ್ತಂಗಿ, ಮಂಗಲಗಿ, ಚಾಂಗಲೇರಾ, ಬೇಮಳಖೇಡಾ, ಇಟಗಾ, ವಳಖಿಂಡಿ, ಕುಡಂಬಲ್ ಗ್ರಾಮಗಳಲ್ಲಿ ಮಣ್ಣೆತ್ತುಗಳಿಗೆ ಹೂವಿನಿಂದ ಪೂಜಿಸಿ, ಕಾಯಿ, ಕರ್ಪೂರ, ಲೋಭಾನ ಆರತಿ ಮಾಡಿ ವಿವಿಧ ಸಿಹಿ ಪದಾರ್ಥಗಳನ್ನು ನೈವೇದ್ಯ ಮಾಡಿ, ಒಟ್ಟಾಗಿ ಕುಳಿತು ರೈತರು ಊಟ ಮಾಡಿದರು.</p>.<p>‘ಸಂಜೆ ಹೊತ್ತಿಗೆ ಕೆರೆ, ಹರಿಯುವ ನೀರಿನ ದಂಡೆಗೆ ಹೋಗಿ ಮಣ್ಣೆತ್ತುಗಳ ಮುಖ ತೊಳೆದು, ವಿಭೂತಿ, ಕುಂಕುಮ ಹಚ್ಚಿ ಆರತಿ ಬೆಳಗಿ, ಮಳೆ, ಬೆಳೆ ಸಮೃದ್ಧಿಗೆ ಪ್ರಾರ್ಥಿಸಿಕೊಂಡು ಎತ್ತುಗಳನ್ನು ನೀರಿಗೆ ಬಿಡುವ ಕಾರ್ಯ ನಡೆಯಿತು.</p>.<p>ಮರುದಿನ ಎತ್ತುಗಳನ್ನು ಚಿಣ್ಣರು ಕರಿ ಹರಿಯುವರು. ಬಳಿಕ ತಟ್ಟೆಯಲ್ಲಿ ಕರಿ ಹರಿದ ಎತ್ತುಗಳನ್ನಿಟ್ಟುಕೊಂಡು ಮನೆ, ಮನೆಗಳಿಗೆ ತೆರಳಿ ‘ಒಂಟೆತ್ತಿನ ಮೇಲೆ ಕುಂಟೆತ್ತು ಬಂದೈತೆ, ಜ್ವಾಳ ನೀಡ್ರಮ್ಮೊ’ ಎಂದು ಹಾಡುತ್ತ ಹೋಗುವ ಸಂಪ್ರದಾಯವು ಗ್ರಾಮೀಣ ಪ್ರದೇಶಗಳಲ್ಲಿ ಕಂಡುಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಟಗುಪ್ಪ:</strong> ಮಣ್ಣಿನಿಂದ ಎತ್ತುಗಳನ್ನು ಮಾಡಿ ಪೂಜಿಸುವ ಸಾಂಪ್ರದಾಯಿಕ ರೈತರ ಹಬ್ಬ ಮಣ್ಣೆತ್ತಿನ ಅಮಾವಾಸ್ಯೆ. ಇದು ಮುಂಗಾರಿನ ಪ್ರಥಮ ಹಬ್ಬವಾಗಿಯೂ ಆಚರಿಸಲಾಗುತ್ತದೆ.</p>.<p>ರೈತ ಬದುಕಿಗೆ ಆಸರೆಯಾಗಿರುವ ಎತ್ತುಗಳನ್ನು ಪೂಜಿಸಿ ಖುಷಿ ಪಡುವ ಈ ಹಬ್ಬ ಕಾರಹುಣ್ಣಿಮೆಯ ನಂತರ ಬರುತ್ತದೆ. ಭೂತಾಯಿಯನ್ನು ಉಳುಮೆ ಮಾಡುವ ಸಂಕೇತವಾದ ಎತ್ತುಗಳನ್ನು ಮನೆಯಲ್ಲಿಯೇ ತಯಾರಿಸಿಕೊಂಡು ದೇವರ ಜಗುಲಿ ಮೇಲೆ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದರು.</p>.<p>ಪಟ್ಟಣ, ತಾಲ್ಲೂಕಿನ ನಿರ್ಣಾ, ಮುತ್ತಂಗಿ, ಮಂಗಲಗಿ, ಚಾಂಗಲೇರಾ, ಬೇಮಳಖೇಡಾ, ಇಟಗಾ, ವಳಖಿಂಡಿ, ಕುಡಂಬಲ್ ಗ್ರಾಮಗಳಲ್ಲಿ ಮಣ್ಣೆತ್ತುಗಳಿಗೆ ಹೂವಿನಿಂದ ಪೂಜಿಸಿ, ಕಾಯಿ, ಕರ್ಪೂರ, ಲೋಭಾನ ಆರತಿ ಮಾಡಿ ವಿವಿಧ ಸಿಹಿ ಪದಾರ್ಥಗಳನ್ನು ನೈವೇದ್ಯ ಮಾಡಿ, ಒಟ್ಟಾಗಿ ಕುಳಿತು ರೈತರು ಊಟ ಮಾಡಿದರು.</p>.<p>‘ಸಂಜೆ ಹೊತ್ತಿಗೆ ಕೆರೆ, ಹರಿಯುವ ನೀರಿನ ದಂಡೆಗೆ ಹೋಗಿ ಮಣ್ಣೆತ್ತುಗಳ ಮುಖ ತೊಳೆದು, ವಿಭೂತಿ, ಕುಂಕುಮ ಹಚ್ಚಿ ಆರತಿ ಬೆಳಗಿ, ಮಳೆ, ಬೆಳೆ ಸಮೃದ್ಧಿಗೆ ಪ್ರಾರ್ಥಿಸಿಕೊಂಡು ಎತ್ತುಗಳನ್ನು ನೀರಿಗೆ ಬಿಡುವ ಕಾರ್ಯ ನಡೆಯಿತು.</p>.<p>ಮರುದಿನ ಎತ್ತುಗಳನ್ನು ಚಿಣ್ಣರು ಕರಿ ಹರಿಯುವರು. ಬಳಿಕ ತಟ್ಟೆಯಲ್ಲಿ ಕರಿ ಹರಿದ ಎತ್ತುಗಳನ್ನಿಟ್ಟುಕೊಂಡು ಮನೆ, ಮನೆಗಳಿಗೆ ತೆರಳಿ ‘ಒಂಟೆತ್ತಿನ ಮೇಲೆ ಕುಂಟೆತ್ತು ಬಂದೈತೆ, ಜ್ವಾಳ ನೀಡ್ರಮ್ಮೊ’ ಎಂದು ಹಾಡುತ್ತ ಹೋಗುವ ಸಂಪ್ರದಾಯವು ಗ್ರಾಮೀಣ ಪ್ರದೇಶಗಳಲ್ಲಿ ಕಂಡುಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>