ಗ್ರಾಮದಲ್ಲಿ ಕಳೆದ ಕೆಲ ತಿಂಗಳುಗಳ ಹಿಂದೆ ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಮನೆ-ಮನೆಗೆ ನಳಗಳ ಸಂಪರ್ಕ ಕಲ್ಪಿಸಲು ಸಿಸಿ ರಸ್ತೆಯನ್ನು ಅಗೆಯಲಾಗಿದೆ. ಆದರೆ, ಇಲ್ಲಿಯವರೆಗೆ ನೀರು ಹರಿದಿಲ್ಲ. ಅಗೆದ ರಸ್ತೆ ಮರು ನಿರ್ಮಾಣವೂ ಆಗಿಲ್ಲ. ಇದರಿಂದ ಕೆಲ ಮನೆಗಳ ಮುಂಭಾಗ, ಹನುಮಾನ ದೇವಸ್ಥಾನದ ಅಕ್ಕಪಕ್ಕ ಚರಂಡಿ, ಮಳೆ ನೀರು ಸಂಗ್ರಹವಾಗುತ್ತಿದೆ.