ಗಡಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ತುರೂರಿ ಸಮೀಪ ಸೋಮವಾರ ಕರ್ನಾಟಕದ ಬಸ್ಗೆ ಬೆಂಕಿ ಹಚ್ಚಿದ್ದರಿಂದ ಬಸ್ ಸಂಚಾರ ನಿಲ್ಲಿಸಲಾಗಿದೆ. ಮೇಲಾಧಿಕಾರಿಗಳ ಮುಂದಿನ ಆದೇಶದವರೆಗೆ ಬಸ್ ಸಂಚಾರ ಇರುವುದಿಲ್ಲ. ತುಳಜಾಪುರ ಹಾಗೂ ಇತರೆಡೆಯೂ ಹೋಗುವ ಬಸ್ ಗಳು ಹೋಗುವುದಿಲ್ಲ ಎಂದು ಬಸ್ ಘಟಕ ವ್ಯವಸ್ಥಾಪಕರು ತಿಳಿಸಿದ್ದಾರೆ.