<p><strong>ಬೀದರ್</strong>: ರಾಜ್ಯದಲ್ಲಿ ಮರಾಠ ಸಮಾಜವನ್ನು 2ಎಗೆ ಸೇರ್ಪಡೆ ಮಾಡಬೇಕೆಂದು ಮರಾಠ ಕ್ರಾಂತಿ ಮೋರ್ಚಾ ರಾಜ್ಯ ಸಂಘಟಕ ನಾರಾಯಣ ಗಣೇಶ ಆಗ್ರಹಿಸಿದರು.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿಗೆ ಬರೆದ ಮನವಿ ಪತ್ರವನ್ನು ನಗರದಲ್ಲಿ ಸೋಮವಾರ ಜಿಲ್ಲಾಧಿಕಾರಿಗೆ ಸಲ್ಲಿಸಿ ಒತ್ತಾಯಿಸಿದರು.</p>.<p>ಮರಾಠ ಸಮಾಜ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ಈ ಸಮಾಜಕ್ಕಿಂತ ಬಲಿಷ್ಠ ಸಮುದಾಯದವರು 2ಎಗೇ ಸೇರಿದ್ದಾರೆ. ಇದರಿಂದ ಮರಾಠರಿಗೆ ಅನ್ಯಾಯವಾಗುತ್ತಿದೆ. ಈ ಹಿಂದೆ ಜಾತಿ ಜನಗಣತಿ ಬಳಿಕ ನಮ್ಮ ಬೇಡಿಕೆಗೆ ಗಮನ ಹರಿಸಲಾಗುವುದು ಎಂದು ಸರ್ಕಾರ ಆಶ್ವಾಸನೆ ನೀಡಿತ್ತು. ಆದರೆ, ಇನ್ನೂ ಈಡೇರಿಲ್ಲ ಎಂದರು.</p>.<p>ರಾಜ್ಯದಲ್ಲಿ 16 ಲಕ್ಷ ಮರಾಠ ಸಮಾಜದವರು ಇದ್ದಾರೆ. 2ಎಗೆ ಸೇರಿಸುವುದು ಸೂಕ್ತ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಕೂಡಲೇ 2ಎಗೆ ಸೇರಿಸಿ ಮರಾಠರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಕೋರಿದರು.</p>.<p>ಮರಾಠ ಕ್ರಾಂತಿ ಮೋರ್ಚಾ ಪ್ರಮುಖರಾದ ಶಿವಾಜಿರಾವ ಪಾಟೀಲ ಮುಂಗನಾಳ, ಬಾಲಾಜಿ ಬಿರಾದಾರ ಗಣೇಶಪುರ, ವೆಂಕಟ ಚಿದ್ರೆ, ಪ್ರದೀಪ ಬಿರಾದಾರ, ರಂಜೀತ್ ಪಾಟೀಲ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ರಾಜ್ಯದಲ್ಲಿ ಮರಾಠ ಸಮಾಜವನ್ನು 2ಎಗೆ ಸೇರ್ಪಡೆ ಮಾಡಬೇಕೆಂದು ಮರಾಠ ಕ್ರಾಂತಿ ಮೋರ್ಚಾ ರಾಜ್ಯ ಸಂಘಟಕ ನಾರಾಯಣ ಗಣೇಶ ಆಗ್ರಹಿಸಿದರು.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿಗೆ ಬರೆದ ಮನವಿ ಪತ್ರವನ್ನು ನಗರದಲ್ಲಿ ಸೋಮವಾರ ಜಿಲ್ಲಾಧಿಕಾರಿಗೆ ಸಲ್ಲಿಸಿ ಒತ್ತಾಯಿಸಿದರು.</p>.<p>ಮರಾಠ ಸಮಾಜ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ಈ ಸಮಾಜಕ್ಕಿಂತ ಬಲಿಷ್ಠ ಸಮುದಾಯದವರು 2ಎಗೇ ಸೇರಿದ್ದಾರೆ. ಇದರಿಂದ ಮರಾಠರಿಗೆ ಅನ್ಯಾಯವಾಗುತ್ತಿದೆ. ಈ ಹಿಂದೆ ಜಾತಿ ಜನಗಣತಿ ಬಳಿಕ ನಮ್ಮ ಬೇಡಿಕೆಗೆ ಗಮನ ಹರಿಸಲಾಗುವುದು ಎಂದು ಸರ್ಕಾರ ಆಶ್ವಾಸನೆ ನೀಡಿತ್ತು. ಆದರೆ, ಇನ್ನೂ ಈಡೇರಿಲ್ಲ ಎಂದರು.</p>.<p>ರಾಜ್ಯದಲ್ಲಿ 16 ಲಕ್ಷ ಮರಾಠ ಸಮಾಜದವರು ಇದ್ದಾರೆ. 2ಎಗೆ ಸೇರಿಸುವುದು ಸೂಕ್ತ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಕೂಡಲೇ 2ಎಗೆ ಸೇರಿಸಿ ಮರಾಠರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಕೋರಿದರು.</p>.<p>ಮರಾಠ ಕ್ರಾಂತಿ ಮೋರ್ಚಾ ಪ್ರಮುಖರಾದ ಶಿವಾಜಿರಾವ ಪಾಟೀಲ ಮುಂಗನಾಳ, ಬಾಲಾಜಿ ಬಿರಾದಾರ ಗಣೇಶಪುರ, ವೆಂಕಟ ಚಿದ್ರೆ, ಪ್ರದೀಪ ಬಿರಾದಾರ, ರಂಜೀತ್ ಪಾಟೀಲ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>