2018ರ ವಿಧಾನಸಭೆ ಚುನಾವಣೆ ವೇಳೆ ಮರಾಠಾ ಸಮಾಜವನ್ನು ಪ್ರವರ್ಗ 2ಎಗೆ ಸೇರಿಸಬೇಕು ಎಂದು ಬೀದರ್ಗೆ ಭೇಟಿ ನೀಡಿದ್ದ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದೆ. ಸೆಪ್ಟೆಂಬರ್ 9 ರಂದು ಅವರನ್ನು ಮತ್ತೆ ಭೇಟಿ ಮಾಡಿ ಗಮನ ಸೆಳೆಯಲಾಗಿತ್ತು. ಅದರ ಫಲವಾಗಿ ಅವರು ಮರಾಠಾ ಅಭಿವೃದ್ಧಿ ಪ್ರಾಧಿಕಾರಕ್ಕೆ ₹50 ಕೋಟಿ ಅನುದಾನ ಮೀಸಲಿಟ್ಟಿದ್ದಾರೆ. ಸರ್ಕಾರ ಮರಾಠಾ ಸಮಾಜದ ಅಭಿವೃದ್ಧಿಗೆ ಬದ್ಧವಾಗಿದೆ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.