<p><strong>ಬೀದರ್:</strong> ಜಿಲ್ಲೆಯ ಔರಾದ್ ತಾಲ್ಲೂಕಿನ ಜಂಬಗಿ (ಬಿ) ಗ್ರಾಮದ ಬಳಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 38.95 ಕೆಜಿ ಗಾಂಜಾ ಜಪ್ತಿ ಮಾಡಿರುವ ಸಂತಪುರ ಠಾಣೆ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. </p>.<p>ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಕೊಂಡ್ಯಾ ನಾಯಕ ತಾಂಡಾದ ಪವನ್ ಚವಾಣ್, ರತ್ನ ನಾಯಕ ತಾಂಡಾದ ಕಿಶನ್ ರಾಠೋಡ್ ಬಂಧಿತ ಆರೋಪಿಗಳು. ಇವರಿಂದ ₹19.47 ಲಕ್ಷ ಮೌಲ್ಯದ ಗಾಂಜಾ ಹಾಗೂ ₹30 ಸಾವಿರ ಮೌಲ್ಯದ ದ್ವಿಚಕ್ರ ವಾಹನವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.</p>.<p>ಜಂಬಗಿ (ಬಿ) ಗ್ರಾಮದಿಂದ ಸೊರಹಳ್ಳಿ ಮಾರ್ಗವಾಗಿ ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಆರೋಪಿಗಳು ಗಾಂಜಾ ಸಾಗಾಟ ಮಾಡುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ಸಂತಪುರ ಠಾಣೆಯ ಪಿಎಸ್ಐ ದಿನೇಶ್ ಎಂ.ಟಿ ನೇತೃತ್ವದ ತಂಡ ಯಶಸ್ವಿ ಕಾರ್ಯಾಚರಣೆ ನಡೆಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ.</p>.<p>ಸಂತಪುರ ಠಾಣೆಯ ಎಎಸ್ಐ ಶೇಷರಾವ್, ಸಿಬ್ಬಂದಿ ಅರುಣ್ ಸಿಂಗ್, ಶ್ರೀಕಾಂತ್, ಸಂತೋಷ್, ರಾಮರೆಡ್ಡಿ, ಸುಭಾಷ್, ಕೊಟ್ರೇಶ್, ಪ್ರಕಾಶ್, ರಾಜಶೇಖರ್, ಗೌತಮ್, ದತ್ತಾತ್ರಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. </p>.<p>ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಜಿಲ್ಲೆಯ ಔರಾದ್ ತಾಲ್ಲೂಕಿನ ಜಂಬಗಿ (ಬಿ) ಗ್ರಾಮದ ಬಳಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 38.95 ಕೆಜಿ ಗಾಂಜಾ ಜಪ್ತಿ ಮಾಡಿರುವ ಸಂತಪುರ ಠಾಣೆ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. </p>.<p>ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಕೊಂಡ್ಯಾ ನಾಯಕ ತಾಂಡಾದ ಪವನ್ ಚವಾಣ್, ರತ್ನ ನಾಯಕ ತಾಂಡಾದ ಕಿಶನ್ ರಾಠೋಡ್ ಬಂಧಿತ ಆರೋಪಿಗಳು. ಇವರಿಂದ ₹19.47 ಲಕ್ಷ ಮೌಲ್ಯದ ಗಾಂಜಾ ಹಾಗೂ ₹30 ಸಾವಿರ ಮೌಲ್ಯದ ದ್ವಿಚಕ್ರ ವಾಹನವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.</p>.<p>ಜಂಬಗಿ (ಬಿ) ಗ್ರಾಮದಿಂದ ಸೊರಹಳ್ಳಿ ಮಾರ್ಗವಾಗಿ ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಆರೋಪಿಗಳು ಗಾಂಜಾ ಸಾಗಾಟ ಮಾಡುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ಸಂತಪುರ ಠಾಣೆಯ ಪಿಎಸ್ಐ ದಿನೇಶ್ ಎಂ.ಟಿ ನೇತೃತ್ವದ ತಂಡ ಯಶಸ್ವಿ ಕಾರ್ಯಾಚರಣೆ ನಡೆಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ.</p>.<p>ಸಂತಪುರ ಠಾಣೆಯ ಎಎಸ್ಐ ಶೇಷರಾವ್, ಸಿಬ್ಬಂದಿ ಅರುಣ್ ಸಿಂಗ್, ಶ್ರೀಕಾಂತ್, ಸಂತೋಷ್, ರಾಮರೆಡ್ಡಿ, ಸುಭಾಷ್, ಕೊಟ್ರೇಶ್, ಪ್ರಕಾಶ್, ರಾಜಶೇಖರ್, ಗೌತಮ್, ದತ್ತಾತ್ರಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. </p>.<p>ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>