<p><strong>ಬೀದರ್: </strong>ಇಲ್ಲಿಯ ತರಕಾರಿ ಸಗಟು ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕಡಿಮೆಯಾಗಿದೆ. ಕಳೆದ ವಾರ ಪ್ರತಿ ಕೆಜಿಗೆ ₹ 60 ಇದ್ದ ಈರುಳ್ಳಿ ಇದೀಗ ₹ 50ಕ್ಕೆ ಮಾರಾಟವಾಗುತ್ತಿದೆ. ಬೆಳ್ಳುಳ್ಳಿ ಬೆಲೆ ಮಾತ್ರ ಎರಡು ವಾರಗಳಿಂದ ಸ್ಥಿರವಾಗಿಯೇ ಇದೆ.</p>.<p>ವಿದೇಶದಿಂದ ದೇಶದ ಮಾರುಕಟ್ಟೆಗೆ ಈರುಳ್ಳಿ ಪ್ರವೇಶಿಸಿದ ನಂತರ ಸಹಜವಾಗಿಯೇ ಬೆಲೆ ಇಳಿಮುಖವಾಗಿದೆ. ಬೆಲೆ ಹೆಚ್ಚಳದ ಸಂದರ್ಭದಲ್ಲಿ ದಾಸ್ತಾನು ಮಾಡಿಕೊಂಡಿದ್ದ ಈರುಳ್ಳಿಯನ್ನು ವ್ಯಾಪಾರಿಗಳು ಮತ್ತೆ ಮಾರುಕಟ್ಟೆಗೆ ತಂದಿದ್ದಾರೆ. ಹೀಗಾಗಿ ಹೊಸ ಈರುಳ್ಳಿ ಬೆಲೆ ಪ್ರತಿ ಕ್ವಿಂಟಲ್ಗೆ ಒಂದು ಸಾವಿರ ರೂಪಾಯಿ ಕಡಿಮೆಯಾಗಿದೆ.</p>.<p>ಹೊಸ ಬೆಳ್ಳುಳ್ಳಿ ಮಾರುಕಟ್ಟೆಗೆ ಬರುತ್ತಿಲ್ಲ. ಹೀಗಾಗಿ ಎರಡು ವಾರಗಳಿಂದ ಬೆಲೆ ಸ್ಥಿರವಾಗಿದೆ. 15 ದಿನಗಳ ಮೊದಲು ಬೆಳ್ಳುಳ್ಳಿ ಪ್ರತಿ ಕೆ.ಜಿಗೆ ₹ 200 ರಂತೆ ಮಾರಾಟವಾಗಿತ್ತು. ಈಗ ಬೆಲೆ ಪ್ರತಿ ಕೆ.ಜಿಗೆ ₹ 20 ಕಡಿಮೆಯಾಗಿದೆ. ನೀರಾವರಿ ಪ್ರದೇಶದಲ್ಲಿ ಬೆಳೆದ ಬೆಳ್ಳುಳ್ಳಿ ಮಾರುಕಟ್ಟೆಗೆ ಬರುತ್ತಿದೆ.</p>.<p>ಮಾರುಕಟ್ಟೆಯಲ್ಲಿ ಈ ವಾರ ಮತ್ತೆ ಮೆಂತೆ ಸೊಪ್ಪು, ಕೊತಂಬರಿ ಹಾಗೂ ಕರಿಬೇವಿನ ಬೆಲೆಯಲ್ಲಿ ಪ್ರತಿ ಕ್ವಿಂಟಲ್ಗೆ ಒಂದು ಸಾವಿರ ರೂಪಾಯಿ ಹೆಚ್ಚಳವಾಗಿದೆ. ಆಲೂಗಡ್ಡೆ ಹಾಗೂ ಗಜ್ಜರಿ ಬೆಲೆ ಪ್ರತಿ ಕ್ವಿಂಟಲ್ಗೆ ಒಂದು ಸಾವಿರ ರೂಪಾಯಿ ಏರಿಕೆಯಾಗಿದೆ.</p>.<p>ನುಗ್ಗೆಕಾಯಿ, ಬೆಂಡೆಕಾಯಿ, ಹಿರೇಕಾಯಿ, ಬದನೆಕಾಯಿ, ಟೊಮೆಟೊ, ತೊಂಡೆಕಾಯಿ, ಬೀಟ್ರೂಟ್ ಹಾಗೂ ಎಲೆಕೋಸಿನ ಬೆಲೆ ಸ್ಥಿರವಾಗಿದೆ. ಇನ್ನೂ ಎರಡು ವಾರ ತರಕಾರಿ ಬೆಲೆ ಯಥಾಸ್ಥಿತಿಯಲ್ಲಿ ಇರುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.<br />ನಗರದ ಮಾರುಕಟ್ಟೆಗೆ ಮಹಾರಾಷ್ಟ್ರದ ಸೋಲಾಪುರದಿಂದ ಈರುಳ್ಳಿ ಹಾಗೂ ಬೆಳ್ಳುಳ್ಳಿ ಆವಕವಾಗಿದೆ. ಆಗ್ರಾದಿಂದ ಆಲೂಗಡ್ಡೆ ಬಂದಿದೆ. ಹೈದರಾಬಾದ್ನಿಂದ ಮೆಣಸಿನಕಾಯಿ, ಬೀನ್ಸ್, ಗಜ್ಜರಿ, ಎಲೆಕೋಸು, ಹೂಕೋಸು, ತೊಂಡೆಕಾಯಿ ಬಂದಿದೆ.</p>.<p>‘ಸೊಪ್ಪಿಗೆ ಬೇಡಿಕೆ ಇದ್ದರೂ ನಿರೀಕ್ಷೆಯಷ್ಟು ಸೊಪ್ಪು ಬೀದರ್ ಮಾರುಕಟ್ಟೆಗೆ ಬರುತ್ತಿಲ್ಲ. ಬಹುತೇಕ ಪುರುಷರು ಹಬ್ಬದ ಸಂದರ್ಭದಲ್ಲಿ ಬಾಡೂಟಕ್ಕೆ ಒತ್ತು ಕೊಟ್ಟಿದ್ದರಿಂದ ಮಕರ ಸಂಕ್ರಮಣದ ಸಂದರ್ಭದಲ್ಲೂ ಹೆಚ್ಚು ತರಕಾರಿ ಮಾರಾಟವಾಗಿಲ್ಲ’ ಎಂದು ಗಾಂಧಿಗಂಜ್ ತರಕಾರಿ ಸಗಟು ವ್ಯಾಪಾರಿ ವಿಜಯಕುಮಾರ ಕಡ್ಡೆ ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಇಲ್ಲಿಯ ತರಕಾರಿ ಸಗಟು ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕಡಿಮೆಯಾಗಿದೆ. ಕಳೆದ ವಾರ ಪ್ರತಿ ಕೆಜಿಗೆ ₹ 60 ಇದ್ದ ಈರುಳ್ಳಿ ಇದೀಗ ₹ 50ಕ್ಕೆ ಮಾರಾಟವಾಗುತ್ತಿದೆ. ಬೆಳ್ಳುಳ್ಳಿ ಬೆಲೆ ಮಾತ್ರ ಎರಡು ವಾರಗಳಿಂದ ಸ್ಥಿರವಾಗಿಯೇ ಇದೆ.</p>.<p>ವಿದೇಶದಿಂದ ದೇಶದ ಮಾರುಕಟ್ಟೆಗೆ ಈರುಳ್ಳಿ ಪ್ರವೇಶಿಸಿದ ನಂತರ ಸಹಜವಾಗಿಯೇ ಬೆಲೆ ಇಳಿಮುಖವಾಗಿದೆ. ಬೆಲೆ ಹೆಚ್ಚಳದ ಸಂದರ್ಭದಲ್ಲಿ ದಾಸ್ತಾನು ಮಾಡಿಕೊಂಡಿದ್ದ ಈರುಳ್ಳಿಯನ್ನು ವ್ಯಾಪಾರಿಗಳು ಮತ್ತೆ ಮಾರುಕಟ್ಟೆಗೆ ತಂದಿದ್ದಾರೆ. ಹೀಗಾಗಿ ಹೊಸ ಈರುಳ್ಳಿ ಬೆಲೆ ಪ್ರತಿ ಕ್ವಿಂಟಲ್ಗೆ ಒಂದು ಸಾವಿರ ರೂಪಾಯಿ ಕಡಿಮೆಯಾಗಿದೆ.</p>.<p>ಹೊಸ ಬೆಳ್ಳುಳ್ಳಿ ಮಾರುಕಟ್ಟೆಗೆ ಬರುತ್ತಿಲ್ಲ. ಹೀಗಾಗಿ ಎರಡು ವಾರಗಳಿಂದ ಬೆಲೆ ಸ್ಥಿರವಾಗಿದೆ. 15 ದಿನಗಳ ಮೊದಲು ಬೆಳ್ಳುಳ್ಳಿ ಪ್ರತಿ ಕೆ.ಜಿಗೆ ₹ 200 ರಂತೆ ಮಾರಾಟವಾಗಿತ್ತು. ಈಗ ಬೆಲೆ ಪ್ರತಿ ಕೆ.ಜಿಗೆ ₹ 20 ಕಡಿಮೆಯಾಗಿದೆ. ನೀರಾವರಿ ಪ್ರದೇಶದಲ್ಲಿ ಬೆಳೆದ ಬೆಳ್ಳುಳ್ಳಿ ಮಾರುಕಟ್ಟೆಗೆ ಬರುತ್ತಿದೆ.</p>.<p>ಮಾರುಕಟ್ಟೆಯಲ್ಲಿ ಈ ವಾರ ಮತ್ತೆ ಮೆಂತೆ ಸೊಪ್ಪು, ಕೊತಂಬರಿ ಹಾಗೂ ಕರಿಬೇವಿನ ಬೆಲೆಯಲ್ಲಿ ಪ್ರತಿ ಕ್ವಿಂಟಲ್ಗೆ ಒಂದು ಸಾವಿರ ರೂಪಾಯಿ ಹೆಚ್ಚಳವಾಗಿದೆ. ಆಲೂಗಡ್ಡೆ ಹಾಗೂ ಗಜ್ಜರಿ ಬೆಲೆ ಪ್ರತಿ ಕ್ವಿಂಟಲ್ಗೆ ಒಂದು ಸಾವಿರ ರೂಪಾಯಿ ಏರಿಕೆಯಾಗಿದೆ.</p>.<p>ನುಗ್ಗೆಕಾಯಿ, ಬೆಂಡೆಕಾಯಿ, ಹಿರೇಕಾಯಿ, ಬದನೆಕಾಯಿ, ಟೊಮೆಟೊ, ತೊಂಡೆಕಾಯಿ, ಬೀಟ್ರೂಟ್ ಹಾಗೂ ಎಲೆಕೋಸಿನ ಬೆಲೆ ಸ್ಥಿರವಾಗಿದೆ. ಇನ್ನೂ ಎರಡು ವಾರ ತರಕಾರಿ ಬೆಲೆ ಯಥಾಸ್ಥಿತಿಯಲ್ಲಿ ಇರುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.<br />ನಗರದ ಮಾರುಕಟ್ಟೆಗೆ ಮಹಾರಾಷ್ಟ್ರದ ಸೋಲಾಪುರದಿಂದ ಈರುಳ್ಳಿ ಹಾಗೂ ಬೆಳ್ಳುಳ್ಳಿ ಆವಕವಾಗಿದೆ. ಆಗ್ರಾದಿಂದ ಆಲೂಗಡ್ಡೆ ಬಂದಿದೆ. ಹೈದರಾಬಾದ್ನಿಂದ ಮೆಣಸಿನಕಾಯಿ, ಬೀನ್ಸ್, ಗಜ್ಜರಿ, ಎಲೆಕೋಸು, ಹೂಕೋಸು, ತೊಂಡೆಕಾಯಿ ಬಂದಿದೆ.</p>.<p>‘ಸೊಪ್ಪಿಗೆ ಬೇಡಿಕೆ ಇದ್ದರೂ ನಿರೀಕ್ಷೆಯಷ್ಟು ಸೊಪ್ಪು ಬೀದರ್ ಮಾರುಕಟ್ಟೆಗೆ ಬರುತ್ತಿಲ್ಲ. ಬಹುತೇಕ ಪುರುಷರು ಹಬ್ಬದ ಸಂದರ್ಭದಲ್ಲಿ ಬಾಡೂಟಕ್ಕೆ ಒತ್ತು ಕೊಟ್ಟಿದ್ದರಿಂದ ಮಕರ ಸಂಕ್ರಮಣದ ಸಂದರ್ಭದಲ್ಲೂ ಹೆಚ್ಚು ತರಕಾರಿ ಮಾರಾಟವಾಗಿಲ್ಲ’ ಎಂದು ಗಾಂಧಿಗಂಜ್ ತರಕಾರಿ ಸಗಟು ವ್ಯಾಪಾರಿ ವಿಜಯಕುಮಾರ ಕಡ್ಡೆ ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>