<p>ಚಿಟಗುಪ್ಪ: ‘ಸಂಘ, ಸಂಸ್ಥೆಗಳ ಸಮಾಜಮುಖಿ ಸೇವೆಯಿಂದ ದೇಶದ ಪ್ರಗತಿ ಸಾಧ್ಯ’ ಎಂದು ಸೇಡಂ ಸಿವಿಲ್ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ವಿಜಯಕುಮಾರ ಜಟ್ಲಾ ಅವರು ಅಭಿಪ್ರಾಯಪಟ್ಟರು.</p>.<p>ಇಲ್ಲಿಯ ಗಣೇಶ ಮಂದಿರದ ಆವರಣದಲ್ಲಿ ಗಜಾನನ ಡೌಲಪರ್ಸ್ ವತಿಯಿಂದ ನಿರ್ಮಿಸಲಾಗುತ್ತಿರುವ ಕಲ್ಯಾಣ ಮಂಟಪ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ,‘ಉದ್ಯಮಿ ಸಮೂಹ, ಯುವಕರು, ಉಳ್ಳವರು ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ನಾಗರಿಕರನ್ನು ಪ್ರೋತ್ಸಾಹಿಸಿ ಮೇಲೆತ್ತುವ ಕಾರ್ಯ ಮಾಡಬೇಕು’ ಎಂದರು.</p>.<p>ಪುರಸಭೆ ಮಾಜಿ ಸದಸ್ಯ ರಾಜಕುಮಾರ ಗುತ್ತೇದಾರ, ಗಣ್ಯರಾದ ಸಂಜು ಗಂಜಿ, ಮಾರುತಿ ಮರಾಠ, ರಮೇಶ ಪಾರಾ, ಶೀಲವಂತ ನಾಗೇಶ, ದೀಪಕ ಪಂಚಾಳ್ ಹಾಗೂ ಇತರರು ಇದ್ದರು. ಗಣೇಶ ದೇಗುಲದ ಅಧ್ಯಕ್ಷ ವೀರಣ್ಣ ಜಟ್ಲಾ ಸ್ವಾಗತಿಸಿದರು.</p>.<p>ನಂತರ ದೇಗುಲದಲ್ಲಿ ದೇವರಿಗೆ ಯುಗಾದಿಯ ವಿಶೇಷ ಪೂಜೆ, ಫಲ ಪುಷ್ಪಗಳ ಅರ್ಪಣೆ, ಕಾಯಿ ಕರ್ಪೂರ ಅರ್ಪಿಸಿ ಮಹಾಮಂಗಳಾರತಿ ಬೆಳಗಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಟಗುಪ್ಪ: ‘ಸಂಘ, ಸಂಸ್ಥೆಗಳ ಸಮಾಜಮುಖಿ ಸೇವೆಯಿಂದ ದೇಶದ ಪ್ರಗತಿ ಸಾಧ್ಯ’ ಎಂದು ಸೇಡಂ ಸಿವಿಲ್ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ವಿಜಯಕುಮಾರ ಜಟ್ಲಾ ಅವರು ಅಭಿಪ್ರಾಯಪಟ್ಟರು.</p>.<p>ಇಲ್ಲಿಯ ಗಣೇಶ ಮಂದಿರದ ಆವರಣದಲ್ಲಿ ಗಜಾನನ ಡೌಲಪರ್ಸ್ ವತಿಯಿಂದ ನಿರ್ಮಿಸಲಾಗುತ್ತಿರುವ ಕಲ್ಯಾಣ ಮಂಟಪ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ,‘ಉದ್ಯಮಿ ಸಮೂಹ, ಯುವಕರು, ಉಳ್ಳವರು ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ನಾಗರಿಕರನ್ನು ಪ್ರೋತ್ಸಾಹಿಸಿ ಮೇಲೆತ್ತುವ ಕಾರ್ಯ ಮಾಡಬೇಕು’ ಎಂದರು.</p>.<p>ಪುರಸಭೆ ಮಾಜಿ ಸದಸ್ಯ ರಾಜಕುಮಾರ ಗುತ್ತೇದಾರ, ಗಣ್ಯರಾದ ಸಂಜು ಗಂಜಿ, ಮಾರುತಿ ಮರಾಠ, ರಮೇಶ ಪಾರಾ, ಶೀಲವಂತ ನಾಗೇಶ, ದೀಪಕ ಪಂಚಾಳ್ ಹಾಗೂ ಇತರರು ಇದ್ದರು. ಗಣೇಶ ದೇಗುಲದ ಅಧ್ಯಕ್ಷ ವೀರಣ್ಣ ಜಟ್ಲಾ ಸ್ವಾಗತಿಸಿದರು.</p>.<p>ನಂತರ ದೇಗುಲದಲ್ಲಿ ದೇವರಿಗೆ ಯುಗಾದಿಯ ವಿಶೇಷ ಪೂಜೆ, ಫಲ ಪುಷ್ಪಗಳ ಅರ್ಪಣೆ, ಕಾಯಿ ಕರ್ಪೂರ ಅರ್ಪಿಸಿ ಮಹಾಮಂಗಳಾರತಿ ಬೆಳಗಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>